Home namma chikmagalur ಡೀಮ್ಡ್ ಅರಣ್ಯ ಪಟ್ಟಿ ಪರಿಷ್ಕರಿಸಲು ವಿಳಂಬ ಮಾಡುತ್ತಿರುವರ ವಿರುದ್ಧ ದೊಡ್ಡಮಟ್ಟದ ಹೋರಾಟ
namma chikmagalurchikamagalurHomeLatest News

ಡೀಮ್ಡ್ ಅರಣ್ಯ ಪಟ್ಟಿ ಪರಿಷ್ಕರಿಸಲು ವಿಳಂಬ ಮಾಡುತ್ತಿರುವರ ವಿರುದ್ಧ ದೊಡ್ಡಮಟ್ಟದ ಹೋರಾಟ

Share
Share

ಚಿಕ್ಕಮಗಳೂರು:  ವಿಧಾನಸೌದದಲ್ಲಿ ಅರಣ್ಯ ಮತ್ತು ಕಂದಾಯ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯ ನಿರ್ಣಯದಂತೆ ಡೀಮ್ಡ್ ಅರಣ್ಯ ಪಟ್ಟಿ ಪರಿಷ್ಕರಿಸಲು ವಿಳಂಬ ಮಾಡುತ್ತಿರುವ ಅಧಿಕಾರಿಗಳು ಮತು ಎಫ್‌ಎಸ್‌ಒಗಳ ವಿರುದ್ಧ ದೊಡ್ಡಮಟ್ಟದ ಹೋರಾಟ ರೂಪಿಸಲು ನಿರ್ಧರಿಸಿರುವುದಾಗಿ ಜಿಲ್ಲಾ ನಾಗರೀಕ ಮತ್ತು ರೈತ ಹೋರಾಟ ಸಮಿತಿ ತಿಳಿಸಿದೆ.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮಿತಿಯ ಜಿಲ್ಲಾ ಪ್ರಧಾನ ಸಂಚಾಲಕ ಎಸ್.ವಿಜಯ್‌ಕುಮಾರ್, ಕಂದಾಯ ಮತ್ತು ಅರಣ್ಯ ಸಚಿವರು ಬೆಂಗಳೂರಿನ ಸಭೆಯಲ್ಲಿ ನಿರ್ಣಯಿಸಿದಂತೆ ಅಂಶಗಳನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಎಫ್‌ಎಸ್‌ಒ ಅನುಷ್ಠಾನ ಮಾಡುತ್ತಿಲ್ಲ. ಅಲ್ಲಿಂದ ಚೆಕ್‌ಲಿಸ್ಟ್ ಕಳುಹಿಸಿ ೩ ತಿಂಗಳಾದರೂ ಅದನ್ನು ಅನುಷ್ಠಾನ ಮಾಡದೆ ಅವರ ಮೂಗಿನ ನೇರಕ್ಕೆ ಕೂತಲ್ಲೇ ವರದಿ ತಯಾರಿಸಲು ಚಿಂತನೆ ನಡೆಸಿದ್ದು ಇವರ ವಿರುದ್ಧವೇ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲು ಸಮಿತಿ ನಿರ್ಧರಿಸಿದೆ ಎಂದು ಹೇಳಿದರು.

ನವೆಂಬರ್ ಒಳಗೆ ಸುಪ್ರೀಂಕೋರ್ಟಿಗೆ ಡೀಮ್ಡ್ ಪರಿಷ್ಕೃತ ವರದಿಯನ್ನು ಸಲ್ಲಿಸಬೇಕಿದ್ದು, ಇನ್ನೊಂದು ತಿಂಗಳು ಬಾಕಿ ಇದೆ. ಹೀಗಾಗಿ ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಲ್ಲಿ ಬರುವ ರೈತರ, ಸಾಗುವಳಿದಾರರ, ೯೪ಸಿ ಅರ್ಜಿದಾರರ, ಗ್ರಾಮ, ಸ್ಮಶಾನ, ಶಾಲೆ, ಅಂಗನವಾಡಿಯಂತಹ ಸರಕಾರಿ ಅವಶ್ಯಕತೆಗಳ ಜತೆಗೆ ನಿವೇಶನ ರಹಿತರಿಗೆ ನಿವೇಶನ ನೀಡಲು ಬೇಕಾಗುವಷ್ಟು ಭೂಮಿಯನ್ನು ಗುರುತಿಸಿ ಅದನ್ನು ಡೀಮ್ಡ್ ಪಾರೆಸ್ಟ್‌ನಿಂದ ಕೈಬಿಟ್ಟು ಹೊಸ ಪಟ್ಟಿ ಸಲ್ಲಿಸಲು ಇನ್ನಾದರೂ ಜಿಲ್ಲಾಧಿಕಾರಿಗಳು ಕ್ರಮವಹಿಸಬೇಕು ಎಂದರು.
ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕೂಡಲೇ ಗ್ರಾಮಲೆಕ್ಕಿಗರು, ರಾಜಸ್ವ ನಿರೀಕ್ಷಕರು ಮತ್ತಿತರೆ ಸಿಬ್ಬಂದಿ ನೇಮಿಸಿ ನಿಖರವಾದ ಕಂದಾಯ ಬಳಕೆಯ ಭೂಮಿಯನ್ನು ಗುರುತಿಸಬೇಕು. ಈ ಸಂಬಂಧ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸರಕಾರ ನಿಗತ ಮಾಹಿತಿಯುಳ್ಳ ಪಟ್ಟಿಯನ್ನು ನೀಡಿದೆ. ಈ ಪಟ್ಟಿಯಂತೆ ಅರಣ್ಯ ಎಫ್‌ಎಸ್‌ಒ ಅಧಿಕಾರಿಗಳು ಸಂಪೂರ್ಣ ಮಾಹಿತಿ ಪಡೆದು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇವೆ ಎಂದರು.

ದರಖಾಸ್ತು ಜಮೀನು, ನಮೂನೆ ೫೦-೫೩ ರ ಜಮೀನಿಗೆ ಪೋಡಿ ಸಮಸ್ಯೆ ಕಾಡುತ್ತಿದ್ದು ಶೀಘ್ರದಲ್ಲಿ ಪೋಡಿ ಅಂತಿಮಗೊಳಿಸಬೇಕು. ನಗರ ಗಡಿಯಿಂದ ೫ ಕಿಮೀ ವ್ಯಾಪ್ತಿಯೊಳಗಿನ ಭೂಮಂಜೂರಾತಿಗಳನ್ನು ಕಾರಣ ಕೇಳಿ ನೊಟೀಸ್ ನೀಡುತ್ತಿರುವ ಕ್ರಮವನ್ನು ಸಮಿತಿ ಖಂಡಿಸುತ್ತದೆ. ಮಲೆನಾಡಿನ ಭೂಮಿಯ ಏರಿಳಿತಕ್ಕೆ ತಕ್ಕಂತೆ ನೇರಮಾರ್ಗ ಅಂತರವನ್ನು ಪರಿಗಣಿಸಬೇಕು. ಯಾವುದೇ ಕಾರಣಕ್ಕೂ ಏರಿಯಲ್ ಅಂತರ ಪರಿಗಣಿಸಬಾರದು. ಹಲವು ವರ್ಷದಿಂದ ಅನುಭವದಲ್ಲಿರುವ ರೈತರಿಗೆ ನೀಡಲಾಗಿರುವ ಮಂಜೂರಾತಿಯನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಬೇಕು ಎಂದು ಆಗ್ರಹಿಸಿದರು.

ನಗರದ ಆಜುಬಾಜಿನ ಸಿಡಿಎ ವ್ಯಾಪ್ತಿಯ ಹಲವು ಪ್ರದೇಶಗಳನ್ನು ಯಾವದೇ ಅರಣ್ಯ ವ್ಯಾಪ್ತಿಯ ಅಧಿಕೃತ ದಾಖಲೆ ಇಲ್ಲದೆ ಇದ್ದರೂ ಸಿಡಿಎ ನಕ್ಷೆಯಲ್ಲಿ ಮೀಸಲು ಅರಣ್ಯ ಎಂದು ಸ್ವಯಂ ಘೋಷಣೆ ಮಾಡಿಕೊಂಡು ನಗರದ ಅಭಿವೃದ್ಧಿಗೆ ಮಾರಕವಾಗುವಂತಹ ನಕ್ಷೆ ತಯಾರಿಸಿರುವ ಅಧಿಕಾರಿಗಳ ಮೇಲೆ ಸಂಬಂಧಿಸಿದ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬೆಳೆಗಾರ ಮುಖಂಡರಾದ ರಘು, ಪೂರ್ಣೇಶ್, ಕಳಸಪ್ಪ, ರವಿಕುಮಾರ್, ಈಶ್ವರ್, ಶಂಕರ್, ಕುಮಾರಸ್ವಾಮಿ ಇದ್ದರು.

Large-scale struggle against those delaying the revision of the deemed forest list

Share

Leave a comment

Leave a Reply

Your email address will not be published. Required fields are marked *

Don't Miss

ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಬ್ಬಾಳಿಕೆಯ ಮೂಲಕ ಜಾರಿಗೆ ತರಲು ಮುಂದಾಗಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ ಶೆಟ್ಟಿ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

Related Articles

ಬಯಲ ಬಂಗಾರದ”ಈರುಳ್ಳಿ” ಬಲು ದೂರ,ದೂರ

ಅಜ್ಜಂಪುರ: ಚಿಕ್ಕಮಗಳೂರು ಜಿಲ್ಲೆಯಲ್ಲಿ “ಬಯಲ ಬಂಗಾರದ ಬೆಳೆ ಬೆಳೆಯುವ ಕಪ್ಪು ಮಣ್ಣು ಅಜ್ಜಂಪುರ ಮತ್ತು ಕಡೂರು...

ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂ

ಚಿಕ್ಕಮಗಳೂರು:  ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು...

ಆಸ್ತಿ- ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂಪತ್ತು

ಚಿಕ್ಕಮಗಳೂರು:  ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂ ಪತ್ತು. ಈ ಆರೋಗ್ಯಯುತ ಬದುಕು...

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ...