Home namma chikmagalur chikamagalur ನಕಲಿ ಐಎಎಸ್ ಅಧಿಕಾರಿ ಮಿಥುನ್ ನಿಂದ ವಕೀಲರಿಗೆ ವಂಚನೆ
chikamagalurHomeLatest Newsnamma chikmagalur

ನಕಲಿ ಐಎಎಸ್ ಅಧಿಕಾರಿ ಮಿಥುನ್ ನಿಂದ ವಕೀಲರಿಗೆ ವಂಚನೆ

Share
Share

ಚಿಕ್ಕಮಗಳೂರು: ಕಾಫಿನಾಡಿನ ಮೆಡಿಕಲ್ ಮಾಲೀಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ನಕಲಿ ಐಎಎಸ್ ಅಧಿಕಾರಿ ಮಿಥುನ್ ವಂಚನೆಯ ಒಂದೊಂದೇ ಕರಾಳ ಮುಖಗಳು ಈಗ ಬಯಲಾಗುತ್ತಿವೆ. ಕೇವಲ ಉದ್ಯಮಿಗಳನ್ನಷ್ಟೇ ಅಲ್ಲದೆ, ಕಾನೂನು ಅರಿವಿರುವ ವಕೀಲರನ್ನೂ ಈತ ತನ್ನ ಮಾತುಗಳಿಂದ ಬುಟ್ಟಿಗೆ ಹಾಕಿಕೊಂಡಿರುವುದು ಈಗ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಿವಾಸಿ ಹಾಗೂ ಹಿರಿಯ ವಕೀಲ ಸುನಿಲ್ ಕುಮಾರ್ ಅವರಿಗೆ ಐದು ತಿಂಗಳ ಹಿಂದೆ ಮೇಘನ ಎಂಬಾಕೆ ಪರಿಚಯವಾಗಿದ್ದರು. ಸಿವಿಲ್ ಪ್ರಕರಣವೊಂದರ ಸಂಬಂಧ ವಕೀಲರ ಕಚೇರಿಗೆ ಬಂದಿದ್ದ ಮೇಘನ, ತನ್ನ ಜೊತೆಯಲ್ಲಿ ಮಿಥುನ್ ಸಿ.ಆರ್. ಎಂಬಾತನನ್ನು ಕರೆತಂದಿದ್ದರು. ಈತ ಐಎಎಸ್ ಅಧಿಕಾರಿಯಾಗಿ ನೇಮಕಗೊಂಡಿದ್ದಾನೆ ಎಂದು ಸುಳ್ಳು ಹೇಳಿ ಪರಿಚಯಿಸಿದ್ದರು.

ತಾನು ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಅಸಿಸ್ಟೆಂಟ್ ಕಮೀಷನರ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ನಂಬಿಸಲು ಮಿಥುನ್ ಅತ್ಯಂತ ಚಾಣಾಕ್ಷತನ ಪ್ರದರ್ಶಿಸಿದ್ದ. ವಕೀಲರ ಮುಂದೆ ನಕಲಿ ಐಡಿ ಕಾರ್ಡ್‌ಗಳು, ಸುಳ್ಳು ಸ್ಯಾಲರಿ ಸರ್ಟಿಫಿಕೇಟ್‌ಗಳು ಹಾಗೂ ತರಬೇತಿಗೆ ಹಾಜರಾಗುವಂತೆ ಸರ್ಕಾರದಿಂದ ಬಂದಿರುವಂತೆ ಸೃಷ್ಟಿಸಲಾಗಿದ್ದ ನಕಲಿ ಪತ್ರಗಳನ್ನು ತೋರಿಸಿ ವಿಶ್ವಾಸ ಗಳಿಸಿದ್ದ.

ಇದನ್ನೇ ಬಂಡವಾಳ ಮಾಡಿಕೊಂಡು ಮನೆ ಕಟ್ಟುವ ನೆಪ ಹಾಗೂ ತುರ್ತು ಆರ್ಥಿಕ ಅಗತ್ಯಗಳ ಹೆಸರಿನಲ್ಲಿ ಮಿಥುನ್ ಮತ್ತು ಮೇಘನ ಜೋಡಿ ವಕೀಲ ಸುನಿಲ್ ಕುಮಾರ್ ಅವರಿಂದ ಹಂತ ಹಂತವಾಗಿ 3,35,000 ರೂಪಾಯಿ ಹಣ ಪಡೆದಿದ್ದರು.

ಅಷ್ಟೇ ಅಲ್ಲದೆ, ವಕೀಲರ ಮೂಲಕ ಅವರ ಸ್ನೇಹಿತರಿಂದಲೂ ಸುಮಾರು 65 ಸಾವಿರ ರೂಪಾಯಿಗಳನ್ನು ಕೊಡಿಸಿ ವಂಚಿಸಿದ್ದರು. ಕಳೆದ ತಿಂಗಳು ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಮಿಥುನ್ ನಕಲಿ ಐಎಎಸ್ ಅಧಿಕಾರಿ ಎಂಬ ಕಾರಣಕ್ಕೆ ಸಿಕ್ಕಿಬಿದ್ದಾಗ ಆತನ ಅಸಲಿ ಬಣ್ಣ ಬಯಲಾಗಿದೆ.

ಸದ್ಯ ವಕೀಲರ ದೂರಿನ ಮೇರೆಗೆ ಮೇಘನ ಹಾಗೂ ಮಿಥುನ್ ಸಿ.ಆರ್ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Lawyers cheated by fake IAS officer Mithun Chakraborty

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...