Home namma chikmagalur chikamagalur ಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವಿರೋಧವಾಗಿ ಆಯ್ಕೆ
chikamagalurHomeLatest Newsnamma chikmagalur

ಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವಿರೋಧವಾಗಿ ಆಯ್ಕೆ

Share
Share

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ (ಡಿಸಿಸಿ ಬ್ಯಾಂಕ್‌) ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಉಪಾಧ್ಯಕ್ಷರಾಗಿ ಕೊಪ್ಪ ತಾಲೂಕಿನ ದಿನೇಶ್ ಹೊಸೂರು ಭಾನುವಾರ ಅವಿರೋಧವಾಗಿ ಆಯ್ಕೆಯಾದರು.

ಭಾನುವಾರ ಡಿಸಿಸಿ ಬ್ಯಾಂಕ್‌ ನಲ್ಲಿ ನೂತನ ಆಡಳಿತ ಮಂಡಳಿ ಸಭೆ ಹಾಗೂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವುದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು.

ಜಿಲ್ಲಾ ಕೋರ್‌ ಕಮಿಟಿ ಸಭೆಯ ತೀರ್ಮಾನದಂತೆ ಅಧ್ಯಕ್ಷ ಸ್ಥಾನಕ್ಕೆ ಸಿ,ಟಿ.ರವಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ದಿನೇಶ್‌ ಹೊಸೂರು ಮಾತ್ರ ನಾಮಪತ್ರ ಸಲ್ಲಿಸಿದರು, ನಾಮಪತ್ರ ಪರಿಶೀಲಿಸಿದ ಚುನಾವಣಾಧಿಕಾರಿ ನಟೇಶ್‌, ಅವಿರೋಧ ಆಯ್ಕೆ ಘೋಷಣೆ ಮಾಡಿ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಿದರು. ಇದೇ ವೇಳೆ ಬ್ಯಾಂಕ್‌ಗ ನೂತನ ನಿರ್ದೇಶಕರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ಸಂಘಟನೆ ಒತ್ತಡ ಹಾಗೂ ಮಾಸ್‌ ಪೊಲಿಟಿಕ್ಸ್‌ನಿಂದ ಕಳೆದ 15 ವರ್ಷದಿಂದ ಸಹಕಾರಿ ಕ್ಷೇತ್ರದಲ್ಲಿ ಕಿಂಗ್‌ ಮೇಕರ್‌ ಆಗಿದೆ ಎಂದು ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್‌ ನೂತನ ಅಧ್ಯಕ್ಷ ಹಾಗೂ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಬಾರಿಗೆ 1991ರಲ್ಲಿ ಆಲ್ದೂರು ವ್ಯವಸಾಯ ಸಹಕಾರ ಬ್ಯಾಂಕ್‌ನ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ನಿರ್ದೇಶಕನಾಗಿ ಆಯ್ಕೆಯಾಗಿ ಕಾರ್ಯನಿರ್ವಹಿಸಿದೆ. ಸಂಘಟನೆ ಒತ್ತಡ ಹಾಗೂ ಮಾಸ್‌ ಪೊಲಿಟಿಕ್ಸ್‌ನಿಂದ ಸಹಕಾರ ಕ್ಷೇತ್ರದಲ್ಲಿ ಕಿಂಗ್‌ ಮೇಕರ್‌ ಆಗಿ ಕಾರ್ಯ ನಿರ್ವಹಿಸಿದ್ದೇನೆ.

ಈ ಹಿಂದೆ ಡಿಸಿಸಿ ಬ್ಯಾಂಕ್‌ ನಿರ್ದೇಶಕನಾಗಿದ್ದಾಗ ಅಧ್ಯಕ್ಷರಾಗಬೇಕೆಂದು ಒತ್ತಡ ಇದ್ದರೂ ಸಹ ಪಕ್ಷದ ಜವಾಬ್ದಾರಿ ಹಿನ್ನೆಲೆಯಲ್ಲಿ ನಿರಾಕರಿಸಿದೆ. ಈಗ ಪಕ್ಷದ ಕೋರ್‌ ಕಮಿಟಿ ಜತೆಗೆ, ಬ್ಯಾಂಕ್‌ನ ಎಲ್ಲ ನಿರ್ದೇಶಕರ ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ ಎಂದರು.

ಎಲ್ಲರೂ ಎಲ್ಲರಿಗಾಗಿ ಎಂಬ ಸಹಕಾರಿ ತತ್ವದಡಿ ಕಾರ್ಯ ನಿರ್ವಹಿಸುತ್ತೇವೆ. ಇಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ. ಡಿಸಿಸಿ ಬ್ಯಾಂಕ್ ಒಂದು ಸೇವಾ ಕ್ಷೇತ್ರ ಎಂಬುದನ್ನು ಗಮನದಲ್ಲಿಟ್ಟು ಪಾವಿತ್ರತ್ಯತೆ ಕಾಪಾಡುತ್ತೇವೆ. ಜನ ಮತ್ತು ರೈತ ಸ್ನೇಹಿಯಾಗಿ ಕಾರ್ಯನಿರ್ವಹಿಸುವ ಮೂಲಕ ಬ್ಯಾಂಕ್ ಅಭ್ಯುದಯಡಿ ಜನರಿಗೆ ಸಹಾಯಹಸ್ತ ಕಲ್ಪಿಸಲು ಆಡಳಿತಮಂಡಳಿ ಕೆಲಸ ಮಾಡಲಿದೆ ಎಂದರು.

ಜಿಲ್ಲಾ ಸಹಕಾರಿ ಬ್ಯಾಂಕ್‌ನ ನೌಕರರು ಮತ್ತು ನಿರ್ದೇಶಕರು ಒಂದು ಕುಟುಂಬದ ಸದಸ್ಯರು. ಬ್ಯಾಂಕ್ ನ ಉದ್ದೇಶ ರೈತರು, ಜನರಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುವುದು. ಈ ಹಿಂದೆ ಬ್ಯಾಂಕ್‌ನಲ್ಲಿ ಡಿ.ಎಸ್.ಸುರೇಶ್, ಟಿ.ಎಲ್.ರಮೇಶ್. ಎಚ್.ಪಿ.ಸತೀಶ್, ಧರ್ಮೇಗೌಡ, ಬೋಜೇಗೌಡ, ರಾಜಶೇಖರ್, ರವೀಂದ್ರ, ಜಯರಾಮ, ಕಚೋಡಿ ಶ್ರೀನಿವಾಸ್, ರಮೇಶ್ ಹಾಗೂ ನಾರಾಯಣಗೌಡ ಸೇರಿದಂತೆ ಅನೇಕರ ಸೇವೆ ಮಾಡಿದ್ದಾರೆ. ಹಿರಿಯರ ಮಾರ್ಗದರ್ಶನದಲ್ಲಿ ಯಾವುದೇ ಲೋಪವೆಸಗದಂತೆ ಪ್ರಾಮಾಣೀಕವಾಗಿ ಅಭಿವೃದ್ದಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.

ಬ್ಯಾಂಕ್ ಆಡಳಿತ ಮಂಡಳಿಯಲ್ಲಿ ಜಾತಿಬೇಧ, ಪಕ್ಷಾತೀತವಾಗಿ ಆಡಳಿತ ನಿರ್ವಹಿಸುವ ಮೂಲಕ ರೈತಾಪಿ ವರ್ಗಕ್ಕೆ ಸಂಸ್ಥೆಯ ಇತಿಮಿತಿಯಲ್ಲಿ ಆಡಳಿತ ನೀಡುತ್ತೇನೆ. ನಿಯಮಾವಳಿಗೆ ಅನುಗುಣವಾಗಿ ಸಂಸ್ಥೆ ಮುನ್ನೆಡೆಸುತ್ತೇವೆ ಎಂದು ಭರವಸೆ ನೀಡಿದರು.

ಬ್ಯಾಂಕ್ ನೂತನ ಉಪಾಧ್ಯಕ್ಷ ದಿನೇಶ್ ಹೊಸೂರು ಮಾತನಾಡಿ, ಬ್ಯಾಂಕ್ ಹಿರಿಯರ ವಿಶ್ವಾಸಕ್ಕೆ ತಕ್ಕಂತೆ ಉಪಾಧ್ಯಕ್ಷ ಸ್ಥಾನ ವನ್ನು ನಿರ್ವಹಿಸುತ್ತೇ ಎಂದರು.

ಈ ವೇಳೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಬೆಳ್ಳಿ ಪ್ರಕಾಶ್, ಹಳಸೆ ಶಿವಣ್ಣ, ಎಸ್.ಎಲ್.ಬೋಜೇಗೌಡ, ಸೋನಾಲ್‌ಗೌಡ, ಡಿ.ಎಸ್.ಸುರೇಶ್, ದಿನೇಶ್ ಹೆಗಡೆ, ಟಿ.ಎಲ್.ರಮೇಶ್, ಕೆ.ಆರ್.ಆನಂದಪ್ಪ, ಎಸ್.ವಿ.ಬಸವರಾಜ್, ಜಯಪಾಲ್, ಸತೀಶ್, ಬ್ಯಾಂಕ್ ಮುಖ್ಯಕಾರ್ಯಮನ ಪ್ರವೀಣ್ ಬಿ.ನಾಯ್ಕ್, ಚುನಾ ವಣಾಧೀಕಾರಿ ತರೀಕೆರೆ ಉಪವಿಭಾಗಾಧಿಕಾರಿ ನಟೇಶ್ ಉಪಸ್ಥಿತರಿದ್ದರು.

Legislative Council member C.T. Ravi elected unopposed as DCC Bank Chairman

Share

Leave a comment

Leave a Reply

Your email address will not be published. Required fields are marked *

Don't Miss

ಸಂಗೊಳ್ಳಿ ರಾಯಣ್ಣ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ

ಚಿಕ್ಕಮಗಳೂರು:  ಸಂಗೊಳ್ಳಿ ರಾಯಣ್ಣ ನಾಡು ಅಪ್ರತಿಮೆ ಸ್ವಾತಂತ್ರ್ಯ ಹೋರಾಟಗಾರ. ಬ್ರಿಟಿಷರ ಕಪಿಮುಷ್ಠಿಯಿಂದ ನಲುಗುತ್ತಿದ್ಧ ಭಾರತೀಯರಿಗೆ ನ್ಯಾಯ ಒದಗಿಸಲು ಪ್ರಾಣವನ್ನೆ ಅರ್ಪಿಸಿದ ಧೀ ಮಂತ ಮಹಾಪುರುಷ ಎಂದು ಶಾಸಕಿ ನಯನ ಮೋಟಮ್ಮ ಹೇಳಿದರು....

ವಿಬಿ-ಜಿ ರಾಮ್‌ಜೀ ಹೊಸ ಕಾಯ್ದೆ ನೆಲಕಚ್ಚಿಸಲು ಕಾಂಗ್ರೆಸ್ ಕುತಂತ್ರ

ಚಿಕ್ಕಮಗಳೂರು:  ಕೇಂದ್ರ ಸರ್ಕಾರದ ಹೊಸ ಕಾಯ್ದೆ ನೆಲಕಚ್ಚಿಸಲು ಕಾಂಗ್ರೆಸ್ ಪಕ್ಷ ಹ ಲವಾರು ಕುತಂತ್ರ ನಡೆಸಿ ಅಪಪ್ರಚಾರ ಮಾಡುತ್ತಿದೆ. ಕೇಂದ್ರ ಸರ್ಕಾರದ ಸತ್ಯ ದರ್ಶನ ಮಾಡಿಸಲು ರಾಜ್ಯಾ ದ್ಯಂತ ಜನಜಾಗೃತಿ ನಡೆಸಿ...

Related Articles

ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ರಾಮಚಂದ್ರ ಬಿಗಿ ಪಟ್ಟು

ಚಿಕ್ಕಮಗಳೂರು: ಹಿರೇಮಗಳೂರು ರಾಮಚಂದ್ರ ಸಿ.ಡಿ.ಎ.ಅಧ್ಯಕ್ಷ ಸ್ಥಾನ ಪಡೆಯಲು ಬಿಗಿ ಪಟ್ಟು ಹಿಡಿದು ಒತ್ತಾಯ ಮಾಡುತ್ತಿದ್ದಾರೆ. ಕಳೆದ...

ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಸಾವು

ಚಿಕ್ಕಮಗಳೂರು :ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಸಾವಪ್ಪಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್...

ಸಾಮಾಜಿಕ ಪರಿವರ್ತನೆಗೆ ಮಾಚಿದೇವರ ಕೊಡುಗೆ ಅಪಾರ

ಚಿಕ್ಕಮಗಳೂರು: ಸಾಮಾಜಿಕ ಪರಿವರ್ತನೆ ಮತ್ತು ಸಾಹಿತ್ಯ ಪರಿವರ್ತನೆಗೆ ಮಡಿವಾಳ ಮಾಚಿದೇವರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ...

ಇತಿಹಾಸ ಸೃಷ್ಠಿಸಿದ ವ್ಯಕ್ತಿಗಳ ಜೀವನ ಚರಿತ್ರೆ ಓದಬೇಕು

ಚಿಕ್ಕಮಗಳೂರು: ನಾಡಪ್ರಭು ಕೆಂಪೇಗೌಡರು ತಮ್ಮ ಬದುಕನ್ನು ಓದಿಸಿಕೊಳ್ಳಲು ಯೋಗ್ಯವಾದ ರೀತಿಯಲ್ಲಿ ಬದುಕಿ ಹೋದವರು ಎಂದು ಆದಿಚುಂಚನಗಿರಿ...