Home namma chikmagalur chikamagalur ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಗೆ ಪಿಎಚ್‌ಡಿ ಪದವಿ
chikamagalurHomeLatest Newsnamma chikmagalur

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಗೆ ಪಿಎಚ್‌ಡಿ ಪದವಿ

Share
Share
ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿಯ 21ನೇ ವಾರ್ಷಿಕ ಘಟಿಕೋತ್ಸವದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ರಾಜ್ಯಪಾಲ ತಾವರ ಚಂದ್ ಗೆಹ್ಲೋಟ್ ಅವರಿಂದ ಪಿಎಚ್‌ಡಿ ಪದವಿ ಸ್ವೀಕರಿಸಿದರು.
ಸಿ.ಟಿ.ರವಿ ಮುಕ್ತ ಗಂಗೋತ್ರಿಯಲ್ಲಿ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ।ಕೆ.ಜೆ. ಸುರೇಶ್ ಅವರ ಮಾರ್ಗದರ್ಶನದಲ್ಲಿ “ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ ಸಮಸ್ಯೆಗಳು ಹಾಗೂ ಸವಾಲುಗಳ ಒಂದು ಅಧ್ಯಯನ” ಎಂಬ ವಿಷಯದಲ್ಲಿ ಅಧ್ಯಯನ ನಡೆಸಿ, ಮಹಾಪ್ರಬಂಧ ಮಂಡಿಸಿದ್ದರು.
ಓದುವುದು ನನ್ನ ಪ್ರಮುಖ ಆಸಕ್ತಿ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತಗಂಗೋತ್ರಿ ಅಡಿಯಲ್ಲಿ ರಾಜಕೀಯ ಶಾಸ್ತ್ರದ ಪ್ರಾಧ್ಯಾಪಕರಾದ ಡಾ।ಕೆ.ಜೆ.ಸುರೇಶ್ ಅವರ ಮಾರ್ಗದರ್ಶನದಲ್ಲಿ “ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ ಸಮಸ್ಯೆಗಳು ಹಾಗೂ ಸವಾಲುಗಳ ಒಂದು ಅಧ್ಯಯನ” ಎಂಬ ಪ್ರಬಂಧವನ್ನು ನಿರಂತರವಾದ 4 ವರ್ಷಗಳ ಅಧ್ಯಯನದೊಂದಿಗೆ 2023 ರಲ್ಲಿ ಪೂರ್ಣಗೊಳಿಸಿ, ಮಂಡಿಸಿದ್ದೇನೆ.
ಅಧ್ಯಯನದ ಸಂದರ್ಭದಲ್ಲಿ ತಿದ್ದಿ, ತೀಡಿ ಅತ್ಯುತ್ತಮವಾಗಿ ಮಾರ್ಗದರ್ಶನ ಮಾಡಿದ ಡಾ।ಕೆ.ಜೆ ಸುರೇಶ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.
ಯುಪಿಎ ಮತ್ತು ಎನ್‌ಡಿಎ ಒಕ್ಕೂಟಗಳ ಮೈತ್ರಿಕೂಟ ಸರ್ಕಾರಗಳನ್ನು ತುಲನಾತ್ಮಕವಾಗಿ ಅಧ್ಯಯನ ಮಾಡಿದ್ದು, ಮಹಾ ಪ್ರಬಂಧ ರಚಿಸಿದ್ದೇನೆ ಎಂದಿರುವ ಅವರು, ರಾಜಕೀಯ ಕಾರ್ಯದೊತ್ತಡಗಳ ನಡುವೆ ಪಿಎಚ್‌ಡಿ ಅಧ್ಯಯನ ಕೊಂಚ ನಿಧಾನವಾಗಿತ್ತು. ಆದರೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತನಾದ ಬಳಿಕ ಕೊಂಚ ಹೆಚ್ಚಿನ ಸಮಯ ಲಭಿಸಿತು. ಇದನ್ನು ಬಳಸಿಕೊಂಡು ಪಿಎಚ್‌ಡಿ ಅಧ್ಯಯನ ಪೂರ್ಣಗೊಳಿಸಿದೆ ಎಂದು ತಿಳಿಸಿದ್ದಾರೆ.
Legislative Council member C.T. Ravi receives PhD degree
Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...