Home namma chikmagalur ajjampura ತರೀಕೆರೆ-ಅಜ್ಜಂಪುರ ತಾಲ್ಲೂಕಿನಲ್ಲಿ ಚಿರತೆ ಹಾವಳಿಗೆ ನಲುಗಿದ ಜನತೆ
ajjampuraHomeLatest Newsnamma chikmagalurTarikere

ತರೀಕೆರೆ-ಅಜ್ಜಂಪುರ ತಾಲ್ಲೂಕಿನಲ್ಲಿ ಚಿರತೆ ಹಾವಳಿಗೆ ನಲುಗಿದ ಜನತೆ

Share
Share

ತರೀಕೆರೆ: ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನ ಹಲವು ಹಳ್ಳಿಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ಜನ ತತ್ತರಿಸುತ್ತಿದ್ದಾರೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ತರೀಕೆರೆ ತಾಲ್ಲೂಕಿನ ತರೀಕೆರೆ ಪಟ್ಟಣದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಚಿರತೆ ಸಂಚಾರ ಮಾಡಿ ನಾಯಿಗಳನ್ನು ಭೇಟೆಯಾಡಿರುವುದು ಗಾಬರಿಗೆ ಕಾರಣವಾಗಿದೆ.

ತರೀಕೆರೆ ತಾಲ್ಲೂಕಿನ ಶಿವಪುರದಲ್ಲಿ ಬಾಲಕಿಯನ್ನು ತಿಂದು ತೇಗಿದ ಚಿರತೆ ಅರಣ್ಯ ಇಲಾಖೆ ಹಿಡಿದಿದೆ. ಆದರೆ ಮೊನ್ನೆ ಎ,ರಂಗಾಪುರದ ತೋಟದ ಮನೆಗೆ ಎಂಟ್ರಿ ಕೊಟ್ಟಿರುವ ಚಿರತೆ ನಾಯಿಯನ್ನು ಬಲಿ ಪಡೆದಿದೆ.

ತರೀಕೆರೆ ಪಟ್ಟಣದ ಸುತ್ತಮುತ್ತಲಿನ ಹಳ್ಳಗಳಲ್ಲಿ ಸಂಚಾರ ಮಾಡುತ್ತಿರುವ ಚಿರತೆಗಳ ಬಗ್ಗೆ ಜನ ಭಯ ಪಡುತ್ತಿದ್ದಾರೆ.ತರೀಕೆರೆ ಸುತ್ತಲಿನ ಹಳ್ಳಿಗಳಾದ ದೋರನಾಳ್,ಬೈರಾಪುರ,ಎ,ರಂಗಾಪುರ,ಎರೇಹಳ್ಳಿ,ಅತ್ತಿಗನಾಳ್,ಸುಣ್ಣದಹಳ್ಳಿ,ನಂದಿ,ಇನ್ನಿತರ ಹಳ್ಳಿಯಲ್ಲಿ ಜನ ಭಯ ಭೀತಿಯಿಂದ ಜೀವ ಕೈಯಲ್ಲಿ ಹಿಡಿದು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.

ಅಜ್ಜಂಪುರ ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇದೇ ಪರಿಸ್ಥಿತಿ ಇದೆ .ಅಜ್ಜಂಪುರ ಸುತ್ತಮುತ್ತಲಿನ ಹಳ್ಳಿಗಳಾದ ಮಲ್ಲೇನಹಳ್ಳಿ,ಎರೇಹೊಸರು,ನಾರಣಾಪುರ,ಬಗ್ಗವಳ್ಳಿ,ಅತ್ತಿಮೊಗ್ಗೆ ,ಹಣ್ಣೇ, ಗೌರಪುರ,ಮತ್ತಿತರ ಪ್ರದೇಶದಲ್ಲಿ ಚಿರತೆ ಸಂಚಾರ ಮಾಡಿರುವುದು ಸಿ.ಸಿ.ಕ್ಯಾಮರಾ ದಲ್ಲಿ ನೋಡಿರುವ ಜನತೆ ಸಂಜೆ ನಂತರ ಓಡಾಡಲು ಭಯ ಪಡುತ್ತಿದ್ದಾರೆ.ಅರಣ್ಯ ಇಲಾಖೆಗೆ ಬೆಂಕಿ ಬೀಳುವಂತೆ ಮಾಡಿರುವುದರಿಂದ ನಿಷ್ಕ್ರಿಯವಾಗಿವೆ ಎಂದು ಜನ ದೂರುತ್ತಿದ್ದಾರೆ.

ಅಧಿಕಾರ,ಹಣ ಎಂದು ಚಡಪಡಿಸುತ್ತಿರುವ ಜನಪ್ರತಿನಿಧಿಗಳಿರುವಾಗ ಜನ ಬಾಯಿ,ಬಾಯಿ ಬಡಿದು ಕೊಳ್ಳುತ್ತಿದ್ದಾರೆ ಕುಟುಂಬ, ಕುಟುಂಬ ಎನ್ನುವವರ ಬಾಯಿಗೆ ಚಿರತೆ,ಹುಲಿಗಿಂತ ಅಧಿಕಾರ, ಹಣ ಮುಖ್ಯ ಎನ್ನುವ ದುಸ್ಥಿತಿಗೆ ಮತದಾರರು ಪಶ್ಚಾತ್ತಾಪ ಪಡುತ್ತಿದ್ದಾರೆ ನಲುಗುತ್ತಿದ್ದಾರೆ, ಮತದಾರರು ಮತ್ತು ಜನರಿಗಿಂತ ಚಿರತೆಗಳು ಸಂಚಾರ ಮಾಡುತ್ತಿವೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಹೇಳುತ್ತ ಇದ್ದಾರೆ.ಇಂತಹ ದುಸ್ಥಿತಿ ತರೀಕೆರೆ ಕ್ಷೇತ್ರದಲ್ಲಿ ಇದೆ.

Leopard attacks Tarikere-Ajjampura taluk four people injured

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...