Home Crime News ಮನೆಯ ಹಿತ್ತಲಿಗೆ ನುಗ್ಗಿ ನೀರು ಕುಡಿದ ಚಿರತೆ
Crime NewsHomeKadurLatest Newsnamma chikmagalur

ಮನೆಯ ಹಿತ್ತಲಿಗೆ ನುಗ್ಗಿ ನೀರು ಕುಡಿದ ಚಿರತೆ

Share
Share

ಕಡೂರು: ಕಾಫಿನಾಡಿನ ಬಯಲು ಭಾಗದಲ್ಲಿ ಚಿರತೆಗಳ ಓಡಾಟ ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಮನೆಯ ಹಿತ್ತಲಿಗೆ ನುಗ್ಗಿದ ಚಿರತೆಯೊಂದು ಯಾವುದೇ ಆತಂಕವಿಲ್ಲದೆ ನೀರು ಕುಡಿದು ಬಳಿಕ ಅಲ್ಲಿಂದ ಪರಾರಿಯಾಗಿರುವ ಘಟನೆ ಕಡೂರು ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ.

ನಾರಾಯಣಪುರ ಗ್ರಾಮದ ಪ್ರಭಾಕರ್ ಎಂಬುವವರ ಮನೆಯ ಹಿಂಭಾಗಕ್ಕೆ ಚಿರತೆ ಬಂದಿದ್ದು, ಮನೆಯ ಆವರಣದಲ್ಲಿ ಓಡಾಡಿ ನೀರು ಕುಡಿದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಚಿರತೆ ಮನೆಯ ಸಮೀಪವೇ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಮತ್ತಷ್ಟು ಭಯ ಮೂಡಿಸಿದೆ.

ಈ ಭಾಗದಲ್ಲಿ ಪದೇಪದೇ ಚಿರತೆಗಳ ಸಂಚಾರ ಕಂಡುಬರುತ್ತಿರುವುದರಿಂದ ಜನರು ಜೀವಭಯದಲ್ಲೇ ದಿನ ಕಳೆಯುವಂತಾಗಿದೆ. ರಾತ್ರಿ ವೇಳೆ ಮನೆಗಳಿಂದ ಹೊರಬರಲು ಹಾಗೂ ಜಮೀನುಗಳಿಗೆ ತೆರಳಲು ಗ್ರಾಮಸ್ಥರು ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಚಿರತೆ ಸಂಚಾರದಿಂದ ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಚಿರತೆಯ ಚಲನವಲನದ ಬಗ್ಗೆ ನಿಗಾ ವಹಿಸಬೇಕು. ಅಗತ್ಯ ಕ್ರಮ ಕೈಗೊಂಡು ಚಿರತೆಯನ್ನು ಸೆರೆಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Leopard enters backyard and drinks water
Share

Leave a comment

Leave a Reply

Your email address will not be published. Required fields are marked *

Don't Miss

ಮಹಿಳೆಯ ಮುಖಕ್ಕೆ ಖಾರದ ಪುಡಿ ಎರಚಿ ಮಾಂಗಲ್ಯ ಸರ ಕಳವು

ಮೂಡಿಗೆರೆ: ಮಹಿಳೆಯ ಮುಖಕ್ಕೆ ಖಾರದ ಪುಡಿ ಎರಚಿ, ಕುತ್ತಿಗೆಗೆ ಕೈ ಹಾಕಿ 24 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಮೂಡಿಗೆರೆ ಪಟ್ಟಣದ ಕುರ್ಕಮಕ್ಕಿ ವಾರ್ಡ್‌ನಲ್ಲಿ ಸೆ.5ರಂದು ನಡೆದಿದೆ....

ಕಸಾಪ ಅಧ್ಯಕ್ಷಗಿರಿಗೆ ಜಾಣಗೆರೆ ವೆಂಕಟರಾಮಯ್ಯ ಸೂಕ್ತ

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಸರ್ಕಾರ ಚುನಾವಣಾಧಿಕಾರಿಯನ್ನು ನೇಮಕ ಮಾಡಿದೆ. ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಂಡಿದ್ದು, ಚುನಾವಣಾ ದಿನಾಂಕ ಘೋಷಣೆಯಷ್ಟೇ ಬಾಕಿ ಉಳಿದಿದೆ....

Related Articles

ಪೊಲೀಸ್ ಅಧಿಕಾರಿ ಖಾಕಿ ಸಮವಸ್ತ್ರ ಧರಿಸಿ ಗೂಂಡಾಗಿರಿ

ಚಿಕ್ಕಮಗಳೂರು: ಟಿ. ನರಸೀಪುರದಲ್ಲಿ ಹಿಂದೂ ಕಾರ್ಯಕರ್ತರಿಗೆ ಇನ್ಸ್‌ಪೆಕ್ಟರ್ ಧನಂಜಯ್ ಧಮ್ಕಿ ಹಾಕಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಕೃಷಿ ಸಾಲಕ್ಕೆ ಶೇ.50 ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ ರೈತರಿಗೆ ವಂಚನೆ

ಶೃಂಗೇರಿ: ಬ್ಯಾಂಕ್‌ನಿಂದ ಕೃಷಿ ಸಾಲ ಮಂಜೂರು ಮಾಡಿಸಿ, ಸರ್ಕಾರದಿಂದ ಶೇ.50ರಷ್ಟು ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ ರೈತರಿಂದ...

ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸರ್ಕಾರಿ ಬಸ್ ಹರಿದು ಇಬ್ಬರು ಸಾವು

ಕಡೂರು: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಬಳಿಕ ರಸ್ತೆಗೆ ಬಿದ್ದ ಸವಾರರ ಮೇಲೆ...

ಸೆ.14ರಂದು ಮುಳ್ಳಯ್ಯನಗಿರಿ ಸೇರಿದಂತೆ ಗಿರಿಧಾಮಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಂದ್ರದ್ರೋಣ ಪರ್ವತ ಸಾಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಸೆಪ್ಟೆಂಬರ್ 14ರಂದು...