Home namma chikmagalur chikamagalur ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ
chikamagalurHomeLatest Newsnamma chikmagalur

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ

Share
Share
ಕೊಟ್ಟಿಗೆಹಾರ : ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ ಹಿನ್ನೆಲೆ ಮತ್ತು ಕಡಿಮೆಯಾದ ದೃಶ್ಯತೆಯಿಂದ ಪ್ರವಾಸಿಗರಿಗೆ ಹೆಚ್ಚಿನ ಅಪಾಯ ಸಾಧ್ಯತೆ ಇರುವ ಕುರಿತು ಆತಂಕ ವ್ಯಕ್ತವಾಗಿದೆ.
ಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಗೆ ಒಳಪಡುವ ಘಾಟಿ ರಸ್ತೆಯ ತಡೆಗೋಡೆಯ ಸಮೀಪ ಚಿರತೆ ಕಾಣಿಸಿಕೊಂಡಿದೆ. ಈ ಮಾರ್ಗದಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಮಳೆಗಾಲ ಆರಂಭವಾಗಿರುವುದರಿಂದ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಿದೆ.
ಮಳೆ ಹಾಗೂ ದಟ್ಟ ಮಂಜಿನಿಂದ ದೃಶ್ಯತೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಬದಿ ಅಥವಾ ಅರಣ್ಯ ಪ್ರದೇಶದ ಸಮೀಪ ಕಾಡುಪ್ರಾಣಿಗಳ ಚಲನೆ ತಕ್ಷಣ ಗಮನಕ್ಕೆ ಬಾರದಿರುವ ಸಾಧ್ಯತೆ ಇದೆ. ಇಂತಹ ಸಂದರ್ಭಗಳಲ್ಲಿ ಫೋಟೋ ಅಥವಾ ಸೆಲ್ಫಿ ಪಡೆಯಲು ವಾಹನದಿಂದ ಇಳಿಯುವ ಪ್ರವಾಸಿಗರು ಹೆಚ್ಚಿನ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.
ಚಾರ್ಮಾಡಿ ಘಾಟಿ ಸಂಪೂರ್ಣ ಅರಣ್ಯ ವಲಯವಾಗಿರುವುದರಿಂದ ಕಾಡುಪ್ರಾಣಿಗಳ ಸಂಚಾರ ಸಹಜ. ಆದರೆ ಮಾನವ ಚಟುವಟಿಕೆ ಹೆಚ್ಚಿರುವ ರಸ್ತೆಯ ಸಮೀಪ ಅವು ಕಾಣಿಸಿಕೊಂಡಿರುವುದು ಗಮನಾರ್ಹವಾಗಿದೆ. ಹೀಗಾಗಿ ವಾಹನ ನಿಲ್ಲಿಸುವಾಗ ಸುರಕ್ಷ ಸ್ಥಳ ಆಯ್ಕೆ ಮಾಡುವುದು, ಗುಂಪಾಗಿ ರಸ್ತೆ ಅಂಚಿಗೆ ತೆರಳುವುದು ಹಾಗೂ ಕಾಡುಪ್ರಾಣಿಗಳ ಹತ್ತಿರ ಹೋಗಲು ಯತ್ನಿಸುವುದನ್ನು ತಪ್ಪಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
Leopard sighted at Charmadi Ghat
Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...