Home namma chikmagalur ಅಜ್ಜಂಪುರದಲ್ಲಿ ಬೋನಿಗೆ ಬಿದ್ದ ಚಿರತೆ
namma chikmagalurajjampuraCrime NewsHomeLatest News

ಅಜ್ಜಂಪುರದಲ್ಲಿ ಬೋನಿಗೆ ಬಿದ್ದ ಚಿರತೆ

Share
Share

ಚಿಕ್ಕಮಗಳೂರು: ಅಜ್ಜಂಪುರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ತಿಮ್ಮಣ್ಣ ಎಂಬುವರ ಮನೆ ಬಳಿ ಇಟ್ಟಿದ್ದ ಬೋನಿನಲ್ಲಿ ಚಿರತೆಯೊಂದು ಸೆರೆಯಾಗಿದೆ.

ನಾರಣಾಪುರದಲ್ಲಿ ಮೇಲಿಂದ ಮೇಲೆ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದು, ಚಿರತೆಯನ್ನು ಸೆರೆಹಿಡಿಯುವಂತೆ ಸಾರ್ವಜನಿಕರು ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದರು. ೩ ದಿನಗಳಿಂದ ಬೋನಿಟ್ಟಿದ್ದು, ಕಳೆದ ರಾತ್ರಿ ಬೋನಿಗೆ ಚಿರತೆ ಬಿದ್ದಿದೆ.

ಬೋನಿಗೆ ಬಿದ್ದಿದ್ದ ಚಿರತೆಯನ್ನು ಕಾಡಿಗೆ ಬಿಡಲು ಅಧಿಕಾರಿಗಳು ತೆರಳಿದ್ದು,ಬೋನಿನ ಬಾಗಿಲು ತೆಗೆದು ಚಿರತೆ ನೋಡುತ್ತಾನಿಂತಿದ್ದಾಗ ಭಯ-ಆಕ್ರೋಶದಲ್ಲಿದ್ದ ಚಿರತೆ ದಾಳಿಗೆ ಯತ್ನಿಸಿದ್ದು ತಕ್ಷಣ ಬಾಗಿಲು ಹಾಕಿದ ಸಿಬ್ಬಂದಿಗಳು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ಹೆಚ್ಚು-ಕಮ್ಮಿಯಾದರೂ ಚಿರತೆ ದಾಳಿ ನಡೆಸುವ ಸಾಧ್ಯತೆಯಿದ್ದು, ಚಿರತೆಯನ್ನು ಕಾಡಿಗೆ ಬಿಡುವಾಗ ಅಧಿಕಾರಿ ಮತ್ತು ಸಿಬ್ಬಂದಿಗಳು ಮೈಯೆಲ್ಲಾ ಕಣ್ಣಾಗಿಸಿಕೊಂಡು ಎಚ್ಚರವಹಿಸಬೇಕಾಗಿದೆ. ಎಚ್ಚರ ತಪ್ಪಿದರೆ ದಾಳಿಗೆ ಒಳಗಾಗಬೇಕಾಗುತ್ತದೆ.

Leopard trapped in Ajjampura

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....