Home Latest News ನೀರಿಗಾಗಿ ರೈತರು ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಲಿ
Latest NewschikamagalurCrime NewsHomeKadurnamma chikmagalur

ನೀರಿಗಾಗಿ ರೈತರು ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಲಿ

Share
Share

ಕಡೂರು: ಜಿಲ್ಲೆಯ ಪ್ರಮುಖ ಕೆರೆಯಾದ ಅಯ್ಯನಕೆರೆ ತುಂಬಿ ಹರಿಯುವ ನೀರನ್ನು ಕೆರೆಗಳಿಗೆ ಹರಿಸುವುದರಿಂದ ಅಂತರ್ ಜಲ ಹೆಚ್ಚಿಸಿ ಕೊಳ್ಳಲು ಯೋಜನೆ ರೂಪಿಸಲಾಗುತ್ತಿದೆ ಎಂದು ರೈತರು ಹೇಳುತ್ತಾರೆ.

ಭದ್ರ ಉಪ ಕಣಿವೆ ಯೋಜನೆಯ ನೀರನ್ನು ಸಹ ಅಯ್ಯನಕೆರೆಗೆ ಹರಿಸುವುದರಿಂದ ಸದಾಕಾಲವೂ ನೀರು ಹರಿಯುತ್ತದೆ ಎಂದು ಅಂದಾಜಿಸಿದ್ದು ಇದರಿಂದಾಗಿ ಬೆಲ್ಟಿಕೆರೆ ಕೆರೆ ಮತ್ತು ನಾಗೇನಹಳ್ಳಿ ಕೆರೆಗೆ ಹರಿಸಿದರೆ ನಾಗೇನಹಳ್ಳಿ,ಹುಲಿಕೆರೆ,ಪಿಳ್ಳೆನಹಳ್ಳಿ,ಕಂಚಗಾರನ ಹಳ್ಳಿ, ತಾಂಡ್ಯ ಮತ್ತು ಆಗ್ರಹಾರ ಭಾಗದಲ್ಲಿ ಅಂತರ್ ಜಲ ಹೆಚ್ಚಳವಾಗುತ್ತದೆ .ಇದರಿಂದಾಗಿ ಯಾವ ತೊಂದರೆ ಆಗುವುದಿಲ್ಲ ಯಾರು ಕೂಡ ಆತಂಕ ಪಡವುದು ಬೇಡ ಎಂದು ರೈತರು ಹೇಳುತ್ತಾರೆ.

ವೇದ ನದಿ ಅಕ್ಕ ಪಕ್ಕ ಇರುವ ರೈತರು ಕಡೂರು, ಪಂಚನಹಳ್ಳಿಯ ಭಾಗದ ರೈತರು ಹರಿಯುವ ನೀರನ್ನು ತಡೆಯಬಾರದು ವೇದನದಿ ತುಂಬಿ ಹರಿಯುವುದು ಬಲು ಕಷ್ಟ ಇಲ್ಲಿನ ಜನ ಮತ್ತು ಜಾನುವಾರುಗಳಿಗೆ ತೊಂದರೆ ಯಲ್ಲಿ ಇದ್ದು ಕುಡಿಯುವ ನೀರಿಗೂ ಕಷ್ಟ ಎಂದು ಆತಂಕ ಗೊಂಡು ಸಭೆ ಸೇರಿ ಪಂಚನಹಳ್ಳಿಯಿಂದ ಆಗ್ರಹಾರದವರೆಗೆ ಪಾದ ಯಾತ್ರೆ ಮಾಡಲು ನಿರ್ಧಾರ ಮಾಡಿದ್ದು ಯಾವುದೇ ಹೊಸ ಯೋಜನೆಗಳಿಗೆ ಅವಕಾಶ ಕೊಡಬಾರದು ಎನ್ನುತ್ತಿದ್ದಾರೆ.

ಒಟ್ಟಾರೆ ರೈತರಿಗೆ ನೀರಿನ ಚಿಂತೆ ಎರಡು ಕಡೆಯವರ ವಾದ ಅವರವರ ಅನುಕೂಲಕ್ಕೆ ಆದರೆ ಭದ್ರ ಉಪಕಣಿವೆ ಯೋಜನೆಯ ನೀರು ಬರುವುದರಿಂದ ಆತಂಕ ಪಡದೆ ಗೊಂದಲಕ್ಕೆ ಒಳಗಾಗದೆ ಸಾಧಕ_ ಬಾಧಕಗಳ ಬಗ್ಗೆ ಚರ್ಚೆ ನಡೆಸುವುದು ಒಳ್ಳೆಯದು.

ಉಭಯ ಭಾಗದ ರೈತರು ಸಮಸ್ಯೆಗೆ ಅವಕಾಶ ಕೊಡದೆ ಬೀದಿಗಿಳಿಯುವ ಮುನ್ನ ಚಿಕ್ಕಮಗಳೂರು ಶಾಸಕರಾದ ಹೆಚ್.ಡಿ.ತಮ್ಮಯ್ಯ ಮತ್ತು ಕಡೂರು ಶಾಸಕರಾದ ಆನಂದ್ ಜವಬ್ದಾರಿ ತೆಗೆದು ಕೊಂಡು ರೈತರ ಸಭೆ ಮತ್ತು ಸಂಬಂಧ ಪಟ್ಟ ನೀರಾವರಿ ಇಲಾಖೆಯವರ ಸಭೆ ಕರೆದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಒಳ್ಳೆಯದು.

Let farmers debate the pros and cons of water

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ ಮಳೆಯ ಆರ್ಭಟ – ಕಾಫಿಬೆಳೆ ನಾಶ – ರಸ್ತೆ ಹುಡುಕಾಡುವ ಕಾಟ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡ ಬಿಡದೆ ಮಳೆ ಸುರಿಯುತ್ತಿದೆ ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಮಳೆಯ ಆರ್ಭಟದಿಂದ ಕಾಫಿ ಕೊಳೆಯಲು ಆರಂಭವಾಗಿದೆ ಎಂದು ಕಾಫಿ ಬೆಳೆಗಾರರ...

12ನೇ ಶತಮಾನದಲ್ಲೇ ಕನ್ನಡಕ್ಕೆ ವಚನಾಕಾರಿಂದ ಬಹಳ ದೊಡ್ಡ ಕೊಡುಗೆ

ಚಿಕ್ಕಮಗಳೂರು: ವಚನಾಕಾರರು ಕನ್ನಡಕ್ಕೆ ಬಹಳ ದೊಡ್ಡ ಕೊಡುಗೆಯನ್ನು ೧೨ನೇ ಶತಮಾನದಲ್ಲೇ ನೀಡಿದ್ದಾರೆ. ಜಗಜ್ಯೋತಿ ಬಸವಣ್ಣನವರು ಕೊಟ್ಟ ಸಾಂಸ್ಕೃತಿಕ ಚಳುವಳಿ ಬದುಕಿನ ಅನುಭವಗಳು ಅನುಭಾವವಾಗಿ ಜನರ ಆಡುಭಾಷೆಯಲ್ಲಿ ಸಾಹಿತ್ಯ ರಚಿಸಿ ಇಡೀ ಜಗತ್ತಿಗೆ ನೈತಿಕ...

Related Articles

ದೊಡ್ಡ ಮನೆ ಡಿಚ್ಚಿ ಯಾರಿಗೆ – ಕೈ ಕಸರತ್ತು ? ಬಿಜೆಪಿಯಲ್ಲಿ ತಳಮಳ !

ಅಜ್ಜಂಪುರ: ಪಟ್ಟಣ ಪಂಚಾಯತಿ ಚುನಾವಣೆ ನಡೆದು ಇಪ್ಪತ್ತು ದಿನಗಳಾಗಿದೆ ಆದರೆ ಅಧ್ಯಕ್ಷ/ ಉಪಾಧ್ಯಕ್ಷರ ಚುನಾವಣೆ ವಿಳಂಬ...

ಜನರಿಗೆ ವಾಸ್ತವ ಸಂಗತಿ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾದ್ಯಂತ ಪ್ರವಾಸ

ಚಿಕ್ಕಮಗಳೂರು : ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ನೀಡುತ್ತಿರುವ ಜನಪರ ಯೋಜನೆಗಳ ಪ್ರಚಾರ ಕೈಗೊಳ್ಳುವುದರೊಂದಿಗೆ ವಿರೋಧ...

ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ ಆರೋಪಿಗಳನ್ನು ಗಡಿಪಾರು ಮಾಡಬೇಕು

ಚಿಕ್ಕಮಗಳೂರು: ‘ಅಲ್ಲಂಪುರ ನಿವಾಸಿ ಓಂಕಾರಮೂರ್ತಿ ಮೇಲಿನ ಹಲ್ಲೆ ಸಂಬಂಧ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ‘ಬಿ’...

ಅಂಬೇಡ್ಕರ್ ಸಂವಿಧಾನದ ತತ್ವ ಹೊಂದಿರುವ ಪಕ್ಷ ಕಾಂಗ್ರೆಸ್

ಚಿಕ್ಕಮಗಳೂರು:  ಅಂಬೇಡ್ಕರ್ ಸಂವಿಧಾನದ ತತ್ವವನ್ನು ಹೊಂದಿರುವ ಪಕ್ಷ ಕಾಂ ಗ್ರೆಸ್. ಚುನಾವಣೆಗೆ ಮಾತ್ರ ಪಕ್ಷ ಸೀಮಿತವಾಗದೇ...