Home namma chikmagalur ಕಾಳಿಂಗ ಸರ್ಪದ ಸಂಶೋಧನೆ ಕೇಂದ್ರಗಳ ತನಿಖೆಯಾಗಲಿ
namma chikmagalurchikamagalurHomeLatest News

ಕಾಳಿಂಗ ಸರ್ಪದ ಸಂಶೋಧನೆ ಕೇಂದ್ರಗಳ ತನಿಖೆಯಾಗಲಿ

Share
Share

ಚಿಕ್ಕಮಗಳೂರು: ಆಗುಂಬೆ ಸಮೀಪದ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಾಳಿಂಗ ಸರ್ಪದ ಸಂಶೋಧನೆ ನಡೆಸುತ್ತಿರುವ ಎರಡು ಸಂಸ್ಥೆಗಳ ಬಗ್ಗೆಯೂ ಅರಣ್ಯ ಇಲಾಖೆ ತನಿಖೆ ನಡೆಸಬೇಕು ಎಂದು ಪರಿಸರ ಹೋರಾಟಗಾರ ಕಲ್ಕುಳಿ ವಿಠ್ಠಲ ಹೆಗಡೆ ಒತ್ತಾಯಿಸಿದ್ದಾರೆ.

‘ಜೀವ ವೈವಿಧ್ಯದ ಶ್ರೇಷ್ಠ ಸ್ಥಳವಾದ ಆಗುಂಬೆಯಲ್ಲಿ ಸಂಶೋಧನೆ ಹೆಸರಿನಲ್ಲಿ ನಡೆಸುತ್ತಿರುವ ವ್ಯವಹಾರ ಮತ್ತು ಜೀವ ಸಂಪತ್ತಿನ ಲೂಟಿಯ ಕುರಿತು ಇತ್ತೀಚೆಗೆ ಕೆಲ ಗೆಳೆಯರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಅದನ್ನು ಆಧರಿಸಿ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು 2005ರಲ್ಲಿ ಪ್ರಾರಂಭವಾದ ಆಗುಂಬೆ ರೈನ್‌ಪಾರೆಸ್ಟ್‌ ರೀಸರ್ಚ್‌ ಸ್ಟೇಷನ್ (ಎಆರ್‌ಆರ್‌ಎಸ್‌) ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ. ಎಲ್ಲ ವ್ಯವಹಾರಗಳಿಗೆ ಮೂಲ ಕಾರಣವಾಗಿರುವ ಗೌರಿ ಶಂಕರ ಎಂಬ ಸರ್ಪ ಸಂಶೋಧಕರ ಬಗ್ಗೆ ತನಿಖೆ ನಡೆಸದಿರುವುದು ಅನುಮಾಗಳಿಗೆ ಕಾರಣವಾಗಿದೆ’ ಎಂದಿದ್ದಾರೆ.

ಸಂಶೋಧನೆಯ ಹೆಸರಿನಲ್ಲಿ ಕಾಳಿಂಗ ಹಾವುಗಳನ್ನು ಹಿಂಸಿಸುವ ಮೂಲಕ ನೇರವಾಗಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘಿಸುತ್ತಿರುವ ಕಾಳಿಂಗ ಸೆಂಟರ್ ಫಾರ್ ರೈನ್‌ಫಾರೆಸ್ಟ್‌ ಎಕಾಲಜಿ (ಕೆಸಿಆರ್‌ಇ) ವಿರುದ್ಧ ತನಿಖೆಗೆ ಆದೇಶ ನೀಡಿಲ್ಲ. ವಿದೇಶಿ ಮೂಲದ ಹಣದಿಂದ ನಡೆಯುತ್ತಿರುವ ಈ ಎರಡೂ ಖಾಸಗಿ ಸಂಶೋಧನಾ ಕೇಂದ್ರಗಳ ಚಟುವಟಿಕೆಗಳನ್ನು ಬಂದ್‌ ಮಾಡಿಸಿ ತನಿಖೆಗೊಳಪಡಿಸಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

‘ಎಲ್ಲ ಕಾನೂನುಗಳನ್ನು ಉಲ್ಲಂಘಿಸಿ ನಡೆಯುತ್ತಿರುವ ಈ ಚಟುವಟಿಕೆಗಳನ್ನು ನೋಡಿಕೊಂಡು ಸುಮ್ಮನಿದ್ದಾರೆ. ಕಾಳಿಂಗ ಹಾವುಗಳ ಗೂಡುಗಳಿಂದ ಮೊಟ್ಟೆ ಕದ್ದು ತಂದು, ಕೃತಕವಾಗಿ ಕೋಳಿ ಮೊಟ್ಟೆ ಮರಿ ಮಾಡುವ ಮೇಷಿನ್‌ನಲ್ಲಿ ಮರಿ ಮಾಡುತ್ತಿದ್ದಾರೆ. ಇದರಿಂದ ಏನೆಲ್ಲಾ ಅನಾಹುತವಾಗಿದೆ ಎಂದು ತಿಳಿಯಲು ಮತ್ತೊಂದು ಸಂಶೋಧನೆ ಮಾಡಬೇಕಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಹಾವುಗಳನ್ನು ಮಾತ್ರ ತಿಂದು ಬದುಕುವ ಕಾಳಿಂಗ ಸರ್ಪ ಸಂಖ್ಯೆ ಈ ಭಾಗದಲ್ಲಿ ಹೆಚ್ಚುತ್ತಿದೆ. ಸಣ್ಣಪುಟ್ಟ ಜಾತಿಯ ಹಾವುಗಳು ಅಳಿವಿನಂಚಿಗೆ ಸರಿದಿವೆ. ಸಂರಕ್ಷಣೆಯ ಹೆಸರಿನಲ್ಲಿ ಯಾವುದೇ ಒಂದು ಜೀವಿಯ ಸಂಖ್ಯೆಯನ್ನು ಲೆಕ್ಕಾಚಾರವಿಲ್ಲದೆ ಹೆಚ್ಚಿಸುವುದು ಪರಿಸರದಲ್ಲಿನ ಆಹಾರ ಚಕ್ರಕ್ಕೆ ದೊಡ್ಡ ಹೊಡೆತ ನೀಡುತ್ತದೆ. ಇದರಿಂದ ಜೀವ ನಾಶವಾಗುತ್ತದೆ. ಇಷ್ಟು ಸಾಮಾನ್ಯ ಜ್ಞಾನ ಅರಣ್ಯ ಇಲಾಖೆ ಇಲ್ಲದ ಕಾರಣ ಹುಲಿ, ಆನೆಗಳು ಊರಿಗೆ ಬರುತ್ತಿವೆ ಎಂದಿದ್ದಾರೆ.

‘ವಿದೇಶದಿಂದ ಹಣ ತಂದು ಇಲ್ಲಿ ಸಂಶೋಧನೆ ನಡೆಸುವವರ ಹಿತಾಸಕ್ತಿಗಳೇನು, ಅವರೇಕೆ ಇಲ್ಲಿಯ ಜೀವ ವೈವಿಧ್ಯದ ಮೇಲೆ ಕಣ್ಣಿಟ್ಟಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಬೇಕು. ಅರಣ್ಯ ಇಲಾಖೆ ಇನ್ನು ಮುಂದಾದರೂ ಪಶ್ಚಿಮ ಘಟ್ಟದಲ್ಲಿ ಯಾವುದೇ ಸಂಶೋಧನೆ, ಅಧ್ಯಯನಕ್ಕೆ ಅವಕಾಶ ನೀಡುವ ಮುನ್ನ ಪೂರ್ವಪರ ಪರಿಶೀಲಿಸಬೇಕು. ಸ್ಥಳೀಯ ಅರಣ್ಯವಾಸಿಗಳ ಒಪ್ಪಿಗೆ ಪಡೆದು ಅವಕಾಶ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

Let the research centers of the Kalinga snake be investigated.

Share

Leave a comment

Leave a Reply

Your email address will not be published. Required fields are marked *

Don't Miss

ಹಿರಿಯ ನಾಗರಿಕರಿಗೆ 3.12 ಲಕ್ಷ ರೂ ವಂಚನೆ

ಚಿಕ್ಕಮಗಳೂರು: ಸೈಬರ್ ಕ್ರಿಮಿನಲ್‌ಗಳ ಜಾಲಕ್ಕೆ ಸಿಲುಕಿ ಹಿರಿಯ ನಾಗರಿಕರೊಬ್ಬರು ಬರೋಬ್ಬರಿ 3.12 ಲಕ್ಷ ಕಳೆದುಕೊಂಡಿದ್ದಾರೆ. ನಗರದಲ್ಲಿ ವಾಸವಾಗಿರುವ 62 ವರ್ಷದ ವೆಂಕಟೇಶ್ ಇತ್ತೀಚೆಗೆ ಅವರ ಮೊಬೈಲ್‌ಗೆ ಬಂದಿದ್ದ ಒಂದು ಅಪರಿಚಿತ ಎಪಿಕೆ...

ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಶಿಫಾರಸ್ ಪತ್ರ

ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್, ಭಜರಂಗದಳದ ಮುಖಂಡ ಶ್ಯಾಮ್ ವಿ ಗೌಡ, ಮುಸ್ಲಿಂ ಸಮುದಾಯದ 10 ಮಂದಿ ಸೇರಿ ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಜಿಲ್ಲಾ...

Related Articles

ಎಸ್.ಬಿದರೆಯ ಬೆಂಕಿ ಲಕ್ಷ್ಮೀ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವ

ಕಡೂರು: ತಾಲ್ಲೂಕಿನ ಸಖರಾಯಪಟ್ಟಣ ಹೋಬಳಿ ಎಸ್.ಬಿದರೆಯ ಬೆಂಕಿ ಲಕ್ಷ್ಮೀ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವವು ಮಂಗಳವಾರ ಶ್ರದ್ಧಾ...

ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿದ್ದ ಇಂದಿರಾ ಕ್ಯಾಂಟೀನ್ ಸ್ಥಳಾಂತರ

ಚಿಕ್ಕಮಗಳೂರು : ನಗರದ ಐ.ಜಿ. ರಸ್ತೆಯ ಬಸ್ ನಿಲ್ದಾಣದ ಸಮೀಪವಿರುವ ಇಂದಿರಾ ಕ್ಯಾಂಟೀನ್ ಅನ್ನು ಸ್ಥಳಾಂತರ...

ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳು ಮನೆ ಬಾಗಿಲಿಗೆ

ಚಿಕ್ಕಮಗಳೂರು: ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ...

ಶಾಸಕ ಜಿ.ಹೆಚ್. ಶ್ರೀನಿವಾಸ್ ವಿರುದ್ಧ ಪ್ರತಿಭಟನೆ

ಅಜ್ಜಂಪುರ : ಶಾಸಕ ಜಿ.ಹೆಚ್. ಶ್ರೀನಿವಾಸ್ ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು...