Home namma chikmagalur ಸಮಗ್ರ ವಿದ್ಯಾಭ್ಯಾಸಕ್ಕೆ ಮಕ್ಕಳಿಗೆ ಗ್ರಂಥಾಲಯ ಕೊಠಡಿ
namma chikmagalurchikamagalurHomeLatest News

ಸಮಗ್ರ ವಿದ್ಯಾಭ್ಯಾಸಕ್ಕೆ ಮಕ್ಕಳಿಗೆ ಗ್ರಂಥಾಲಯ ಕೊಠಡಿ

Share
Share

ಚಿಕ್ಕಮಗಳೂರು:  ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಇನ್ನಷ್ಟು ಹೆಚ್ಚಿಸುವ ಸಲುವಾಗಿ, ಶಾಲಾವರಣದಲ್ಲಿ ಗ್ರಂಥಾಲಯ ಕೊಠಡಿ ನಿರ್ಮಾಣ ಮಾಡಿ ವಿದ್ಯಾಭ್ಯಾಸಕ್ಕೆ ಅನುವು ಕಲ್ಪಿಸಲಾಗುತ್ತಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.

ಶಾಂತಿನಗರದ ಪಿಎಂಶ್ರೀ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮಂಗಳವಾರ ಪ್ರಧಾ ನ ಮಂತ್ರಿ ಪಿಎಂಶ್ರೀ ಯೋಜನೆಯಡಿ ೧೭.೭೦ ಲಕ್ಷ ರೂ.ವೆಚ್ಚದಲ್ಲಿ ನೂತನ ಗ್ರಂಥಾಲಯ ಕೊಠಡಿ ಕಾಮ ಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿ ಬಡಕುಟುಂಬದ ಮಕ್ಕಳಿಗೆ ಒಳ್ಳೆಯ ಶಿಕ್ಷಣ, ಆರೋಗ್ಯ ಮತ್ತು ಆಹಾರ ಭದ್ರತೆ ಒದಗಿಸುವುದು ಜನಪ್ರ ತಿನಿಧಿ ಹಾಗೂ ಸರ್ಕಾರದ ಕರ್ತವ್ಯವಾಗಿದೆ. ಅದರಂತೆ ಮಕ್ಕಳ ಸಮಗ್ರ ವಿದ್ಯಾರ್ಜನೆಗೆ ಶಾಲೆಯಲ್ಲೇ ಗ್ರಂಥಾ ಲಯ ನಿರ್ಮಿಸಿದರೆ ಭವಿಷ್ಯದ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಲು ಸಹಕಾರಿ ಎಂದು ಹೇಳಿದರು.

ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಲು, ಪಾಲಕರು ಮಕ್ಕಳನ್ನು ಮೊದಲು ಶಿಕ್ಷಿತರಾಗಿಸಬೇಕು. ಅಂಬೇ ಡ್ಕರ್ ತತ್ವದಡಿ ಶಿಕ್ಷಣ ಎಂಬುದು ಹುಲಿ ಹಾಲಿನಂತೆ, ಹಾಲು ಕುಡಿದ ಹುಲಿಮರಿ ಘರ್ಜಿಸಿದಂತೆ, ಶಿಕ್ಷಣ ಪಡೆದ ವಿದ್ಯಾರ್ಥಿಗಳು ಹುಲಿಮರಿಯಂತೆ ಘರ್ಜಿಸಬೇಕು. ಹಾಗಾಗಿ ಮಕ್ಕಳಿಗೆ ಶಿಕ್ಷಣವಂತರಾಗಿಸುವುದು ಪಾಲಕರ ಕರ್ತವ್ಯ ಎಂದರು.

ಶಿಕ್ಷಣ ಕೇವಲ ಸರ್ಕಾರಿ ನೌಕರಿಗಲ್ಲ ಅಥವಾ ಬದುಕಿಗಲ್ಲ, ಶಿಕ್ಷಣ ಉತ್ತಮ ಸಂಸ್ಕಾರ, ಬುದ್ದಿವಂತಿಕೆ ಹಾಗೂ ಅರಿವು ಮೂಡಿಸುವ ಸಾಧನ. ಹೀಗಾಗಿ ಮಕ್ಕಳು ಸಂಸ್ಕಾರವಂತರಾದರೆ ಪಾಲಕರು, ಶಿಕ್ಷಣ ಕಲಿಸಿ ದ ಗುರುಗಳ ಜೊತೆಗೆ ಸವಲತ್ತು ಕಲ್ಪಿಸುವ ಸರ್ಕಾರಕ್ಕೂ ಹೆಸರು ಬರಲಿದೆ. ಜೊತೆಗೆ ಮಕ್ಕಳು ದೇಶದ ಸತ್ರ್ಪ ಜೆಗಳಾಗಿ ಹೊರಹೊಮ್ಮುತ್ತಾರೆ ಎಂದು ತಿಳಿಸಿದರು.

ಭಾರತವು ಇಡೀ ಪ್ರಪಂಚವನ್ನೇ ತಿರುಗುವಂತೆ ಮಾಡಿರುವ ರಾಷ್ಟ್ರ. ಈ ನಡುವೆ ಪಿಎಂಶ್ರೀ ಯೋಜನೆ ಪ್ರಧಾನಿಗಳು ವಿಶೇಷವಾಗಿ ದೇಶಾದ್ಯಂತ ಅನುಷ್ಟಾನಗೊಳಿಸಿದ್ದು ಸಮರ್ಪಕವಾಗಿ ಸದ್ಬಳಕೆ ಮಾಡಿಕೊ ಳ್ಳಬೇಕು. ಜೊತೆಗೆ ಶಾಲಾಭಿವೃದ್ದಿ ಸಮಿತಿ, ಶಿಕ್ಷಕರು, ನಗರಸಭೆ ಸದಸ್ಯರು ಮಕ್ಕಳಲ್ಲಿ ರಾಷ್ಟ್ರಭಕ್ತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ಮಾತನಾಡಿ ವಿದ್ಯಾರ್ಥಿಗಳಿಗೆ ಗ್ರಂಥಾಲಯ ನಿರ್ಮಾಣಗೊಂಡರೆ ಭವಿ ಷ್ಯದಲ್ಲಿ ಎದುರಾಗುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಲು ಸಹಕಾರಿ. ಹೀಗಾಗಿ ಪ್ರಧಾನ ಮಂತ್ರಿಗಳ ಈ ಯೋಜನೆ ವಿದ್ಯಾರ್ಥಿಗಳ ಶ್ರೇಯೋಭಿವೃದ್ದಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಮಣಿಕಂಠ, ಮುನೀರ್‌ಅಹ್ಮದ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಹಾಜಮ್, ಉಪಾಧ್ಯಕ್ಷೆ ಶೃತಿ, ಸಿಡಿಎ ಸದಸ್ಯೆ ಗುಣವತಿ, ಸದಸ್ಯ ತಬಸೂಮ್, ಷರೀಫ್, ಪಿಎಂಶ್ರೀ ಸ.ಕ.ಹಿ.ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ಎಸ್.ಟಿ.ಚಂದ್ರಯ್ಯ, ಜಿ.ಪಂ. ಸಹಾಯಕ ಕಾರ್ಯಪಾಲಕ ಅಭಿಯಂತ ಚೇತನ್, ಗುತ್ತಿಗೆದಾರ ಪ್ರದೀಪ್, ಶಿಕ್ಷಣ ಸಂಯೋಜಕಿ ಜಾನಕಮ್ಮ, ಸಿಆರ್‌ಪಿ ರಮ್ಯಶ್ರೀ ಮತ್ತಿತ ರರು ಹಾಜರಿದ್ದರು.

Library room for children for holistic education

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...