Home namma chikmagalur ತಳಮಟ್ಟದಿಂದ ಪಕ್ಷ ಸಂಘಟಿಸಲು ಜನತೆಯ ಸಮಸ್ಯೆ ಆಲಿಸಿ
namma chikmagalurchikamagalurHomeLatest News

ತಳಮಟ್ಟದಿಂದ ಪಕ್ಷ ಸಂಘಟಿಸಲು ಜನತೆಯ ಸಮಸ್ಯೆ ಆಲಿಸಿ

Share
Share

ಚಿಕ್ಕಮಗಳೂರು: – ತಳಮಟ್ಟದಿಂದ ಪಕ್ಷವನ್ನು ಸದೃಢಗೊಳಿಸಲು ಎಲ್ಲಾ ಬೂತ್‌ಗಳಲ್ಲಿ ಜನತೆಯ ಸಮಸ್ಯೆಗಳನ್ನು ಆಲಿಸಬೇಕು. ಗ್ರಾಮೀಣ ಯುವಕರಿಗೆ ಪಕ್ಷದ ಸಿದ್ಧಾಂತವನ್ನು ಪರಿಚಯಿಸಿ ಸದಸ್ಯ ರನ್ನಾಗಿಸಿದರೆ ಭವಿಷ್ಯದಲ್ಲಿ ಕಾರ್ಯಕರ್ತರು ಉತ್ತಮ ನಾಯಕರಾಗಲು ಸಾಧ್ಯ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಮತ್ತು ಯುವಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜಕೀಯ ಪಕ್ಷ ಹಾಗೂ ವೈಯಕ್ತಿಕ ಕುಟುಂಬ ಒಂದೇ ನಾಣ್ಯದ ಎರಡು ಮುಖಗಳು. ಕುಟುಂಬ ವನ್ನು ಸುರಕ್ಷಿತವಾಗಿ ಕಾಪಾಡುವಂತೆ, ಮಾತೃಸಮಾನ ಪಕ್ಷವನ್ನು ನಿಷ್ಟೆ, ಪ್ರಾಮಾಣಿಕತೆ ಹಾಗೂ ಚುರುಕಿನಿಂ ದ ಸಂಘಟಿಸುವ ಜೊತೆಗೆ ರಾಹುಲ್‌ಗಾಂಧಿಯವರ ಆಲೋಚನೆಗಳಿಗೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ಒತ್ತು ನೀಡಬೇಕು ಎಂದರು.

ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ನೂತನ ತಂಡವು ಸಭೆಗಳನ್ನು ನಡೆಸಿ ಸ್ಥಳೀಯ ಸಮಸ್ಯೆ ಗಳನ್ನು ಪರಿಹರಿಸುವ ಗುಣ ಬೆಳೆಸಿಕೊಳ್ಳಬೇಕು. ಧ್ವನಿಯಿಲ್ಲದವರಿಗೆ ಧ್ವನಿ, ಸಾಮಾಜಿಕ ಜ್ಞಾನದ ಕೊರತೆ ಇ ರುವವರಿಗೆ ಆತ್ಮಸ್ಥೈರ್ಯ ತುಂಬುವ ಮನೋಭಾವ ರೂಢಿಸಿಕೊಂಡಲ್ಲಿ ಜನತೆಯಲ್ಲಿ ವಿಶ್ವಾಸತೆ ಮೂಡ ಲಿದೆ ಎಂದು ಹೇಳಿದರು.

ಭವಿಷ್ಯದ ಪ್ರಜೆಗಳು ದುರಾಡಳಿತ ಸರ್ಕಾರದಿಂದ ದಾರಿ ತಪ್ಪದಿರಲಿ ಎಂದು ರಾಹುಲ್‌ಗಾಂಧಿಯವ ರು ಯುವಕಾಂಗ್ರೆಸ್ ಸ್ಥಾಪಿಸಿ ಯುವಕ-ಯುವತಿಯರಲ್ಲಿ ಅರಿವು ಮೂಡಿಸಿದ್ದಾರೆ. ಆಯಾ ಗ್ರಾಮಗಳ ಯು ವಪೀಳಿಗೆಗೆಯನ್ನು ಪಕ್ಷದ ಸದಸ್ಯರನ್ನಾಗಿಸಿ ಮುಂದಿನ ಚುನಾವಣಾ ಅಖಾಡಕ್ಕೆ ಮೊದಲ ಹೆಜ್ಜೆ ಇರಿಸುವ ಜೊತೆ ರಾಜ್ಯದ ಪಂಚ ಗ್ಯಾರಂಟಿಗಳ ಯೋಜನೆಗಳ ಮಾಹಿತಿಗಳನ್ನು ತಲುಪಿಸಬೇಕು ಎಂದರು.

ಪ್ರಸ್ತುತ ರಾಹುಲ್‌ಗಾಂಧಿಯವರು ಸದಸ್ಯತ್ವ, ಚುನಾವಣೆ, ತರಬೇತಿ ಹಾಗೂ ಕಾರ್ಯಕ್ರಮ ಎಂಬ ನಾ ಲ್ಕು ಅಂಶಗಳ ಅಡಿಪಾಯ ಮಾಡಿಕೊಂಡಿದ್ದಾರೆ. ಮುಂದಿನ ಜಿ.ಪಂ., ತಾ.ಪಂ ಹಾಗೂ ಗ್ರಾ.ಪಂ.ಗಳಲ್ಲಿ ಚು ನಾವಣೆಗೆ ಜನರೊಂದಿಗೆ ಉತ್ತಮ ಒಡನಾಟ ಹೊಂದಿರುವ ಅಭ್ಯರ್ಥಿಗಳನ್ನು ಗುರುತಿಸಿ ಟಿಕೇಟ್ ನೀಡುವ ಮೂಲಕ ಕಾಂಗ್ರೆಸ್ ಎಲ್ಲೆಡೆ ರಾರಾಜಿಸಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮಾತನಾಡಿ ಸಮಾಜದಲ್ಲಿ ನಾಯಕರಾಗಲು ಮೊ ದಲು ಸಾಮಾನ್ಯರೊಂದಿಗೆ ಬೆರೆಯುವ ಗುಣ ಬೆಳೆಸಿಕೊಳ್ಳಬೇಕು. ಚುನಾವಣೆಗಳಲ್ಲಿ ಸೋಲು, ಗೆಲುವು ಸಾ ಮಾನ್ಯ. ಆದರೆ ಜನರ ವಿಶ್ವಾಸಕ್ಕೆ ಎಂದಿಗೂ ಚ್ಯುತಿ ಬಾರದೇ ಮನಸ್ಸಿನಲ್ಲಿ ಶಾಶ್ವತವಾಗಿ ನಂಬಿಕೆ ಉಳಿಸಿಕೊ ಳ್ಳುವ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಪಕ್ಷ ಸಂಘಟನೆ ಎಂದರೆ ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡರೆ ಸಾ ಲದು, ಜನರನ್ನು ಭೇಟಿ ಮಾಡಿ ಕಾಂಗ್ರೆಸ್ ಸಿದ್ದಾಂತ, ಕೇಂದ್ರ ಸರ್ಕಾರದ ದುರಾಡಳಿತದ ವಿರುದ್ಧ ಚರ್ಚಿಸಿ ಮನವರಿಕೆ ಮಾಡಿದ್ದಲ್ಲಿ ಎಲ್ಲೆಡೆ ಕಾಂಗ್ರೆಸ್ ಸಂಘಟಿತವಾಗಿ ಬೆಳೆಯಬಹುದು. ವಿಶೇಷವಾಗಿ ಮಹಿಳೆಯರಿಗೆ ಶೇ.೫೦ ರಷ್ಟು ಮೀಸಲಾತಿ ನೀಡಿರುವ ಹೆಚ್ಚಿನ ಶ್ರಮ ವಹಿಸಬೇಕು ಎಂದು ಕಿವಿಮಾತು ಹೇಳಿದರು

ಯುವಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥಗೌಡ ಮಾತನಾಡಿ ಮಾಜಿ ಪ್ರಧಾನಿ ಇಂದಿರಾಗಾಂಧಿಯವ ರ ಕ್ಷೇತ್ರವಾದ ಚಿಕ್ಕಮಗಳೂರು ವಿಶೇಷತನವನ್ನು ಹೊಂದಿದೆ. ಇಲ್ಲಿನ ನಿವಾಸಿಗಳು ಮಲೆನಾಡಿನ ಪರಿಸರದ ಂತೆ ಶುದ್ಧಮನಸ್ಸಿನ ನಿವಾಸಿಗಳಾದ ಕಾರಣ ರಾವಣನಂತ ಹಿಂದಿನ ಶಾಸಕರನ್ನು ಸೋಲಿಸಿ ಮನೆಗೆ ಕಳುಹಿ ಸಲು ಯುವಕಾಂಗ್ರೆಸ್, ಎನ್‌ಎಸ್‌ಯುಐ ಹಾಗೂ ಮಹಿಳೆಯರ ಶಕ್ತಿಯೇ ಕಾರಣ ಎಂದರು.

ಭಾಜಪ ಮುಖಂಡರು ಧರ್ಮ, ಜಾತಿ ಹೆಸರಿನಲ್ಲಿ ಜನತೆಯಲ್ಲಿ ಮಂಕುಬೂದಿ ಎರಚುತ್ತಿದೆ. ಹಣ, ಆಸ್ತಿ ಕಳೆದರೂ ತಿರುಗಿ ಪಡೆಯಬಹುದು. ಆದರೆ ದೇಶದ ಯುವಪೀಳಿಗೆ ದಾರಿತಪ್ಪಿದರೆ ರಾಷ್ಟ್ರದ ಭವಿಷ್ಯ ದಲ್ಲಿ ಭಯಾನಕ ಸ್ಥಿತಿ ಎದುರಾಗಲಿದೆ. ಈ ನಿಟ್ಟಿನಲ್ಲಿ ಬಿಜೆಪಿ, ಯುವಕರನ್ನು ಧರ್ಮದ ಹೆಸರಿನಲ್ಲಿ ಪಾತಾಳ ಕ್ಕೆ ತಳ್ಳುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ|| ಅಂಶುಮಂತ್ ಮಾತನಾಡಿ ಯುವಕಾಂಗ್ರೆಸ್ ಸಾರಥ್ಯ ವಹಿಸಿರುವ ಅಧ್ಯಕ್ಷ ರ ಮೇಲೆ ಹೆಚ್ಚಿನ ಜವಾಬ್ದಾರಿಯಿದೆ. ಕ್ಷೇತ್ರದಲ್ಲಿ ನಿರಂತರವಾಗಿ ಸಾಗಲು ಇಚ್ಚಾಶಕ್ತಿಯ ಅವಶ್ಯಕತೆಯಿದೆ. ಜ ನರೊಂದಿಗೆ ಕಷ್ಟ-ಸುಖಗಳಲ್ಲಿ ಭಾಗಿಯಾಗಬೇಕು. ಗಟ್ಟಿಯಾದ ವಿಚಾರವನ್ನು ಪ್ರಸ್ತಾಪಿಸಬೇಕು. ಪಕ್ಷ ಹಾ ಗೂ ರಾಜ್ಯಸರ್ಕಾರ ಅಭಿವೃದ್ದಿ ಕಾರ್ಯಗಳನ್ನು ಮನೆ ಮನೆಗೆ ತಲುಪಿಸಬೇಕು ಎಂದರು.

ಈ ಸಂದರ್ಭದಲ್ಲಿ ಯುವಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ, ರಾಜ್ಯ ಪ್ರಧಾನ ಕಾರ್ಯದಶಿ ಗಳಾದ ಸಿ.ಎನ್.ಆದಿಲ್, ಅಜಿತ್, ಶಿವಪ್ರಸಾದ್, ಬಾಹುಬಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ|| ಡಿ. ಎಲ್.ವಿಜಯ್‌ಕುಮಾರ್, ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಸಿಡಿಎ ಅಧ್ಯಕ್ಷ ಮೊಹ ಮ್ಮದ್ ನಯಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ಯುವಕಾಂಗ್ರೆಸ್ ಜಿಲ್ಲಾಧ್ಯಕ್ಷ ಶ್ರೀಜಿತ್, ಮುಖಂಡರುಗಳಾದ ತನೋಜ್‌ನಾ ಯ್ಡು, ಶಾದಬ್, ಸಿ.ಎನ್.ಅಕ್ಮಲ್, ಶಿವಕುಮಾರ್ ಮತ್ತಿತರರು ಉಪಸ್ಥಿ ತರಿದ್ದರು.

Listen to the people’s problems to organize the party from the grassroots level

 

Share

Leave a comment

Leave a Reply

Your email address will not be published. Required fields are marked *

Don't Miss

ತುಂಬಿ ಹರಿಯುತ್ತಿರುವ ತುಂಗಾ, ಭದ್ರಾ – ಹೇಮಾವತಿ ನದಿಗಳು

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನ ನಾಲ್ಕು ತಾಲೂಕುಗಳು ಹೊರತುಪಡಿಸಿ ಇನ್ನುಳಿದ ಐದು ತಾಲೂಕುಗಳಲ್ಲಿ ಭಾನುವಾರ ಮಳೆಯ ಪ್ರಮಾಣ ಇಳಿಮುಖವಾಗಿತ್ತು. ಆದರೆ, ಗಾಳಿಯ ಅಬ್ಬರ ಜೋರಾಗಿದೆ. ಹಲವೆಡೆ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳುತ್ತಿರುವುದರಿಂದ ಮನೆಯಿಂದ ಹೊರ...

ಹುಯಿಗೆರೆ ಗ್ರಾಮ ಬಳಿ ಕಾಡಾನೆ ದಾಳಿಗೆ ಕೃಷಿಕನ ಸಾವು

ಬಾಳೆಹೊನ್ನೂರು: ಹುಯಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಡವಾನೆ ಜಾಗರ ಬಳಿ ಕೃಷಿಕ ಸಬ್ರಾಯಗೌಡ (65) ಎಂಬುವರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ, ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭಾನುವಾರ...

Related Articles

ನಯನ ನಂಜಿನ ನುಡಿ – ಕಾಂಗ್ರೆಸ್ ನಲ್ಲಿ ಕಿಚ್ಚು ?

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ಮೋಟಮ್ಮಹಿಂದುವಿಚಾರಧಾರೆಯ ಪ್ರಮೋದ್ ಮುತಾಲಿಕ್ ವೇದಿಕೆ ಹಂಚಿಕೊಂಡು ನಂಜಿನ ಮಾತನಾಡಿದ್ದಾರೆ ಎಂದು...

ಆದಿವಾಸಿ ಪ್ರದೇಶದ ಹೋಂಸ್ಟೇ ನಿರ್ಮಾಣಕ್ಕೆ ಸಹಾಯಧನ

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ...

ಗಿರಿಗೆ ತೆರಳಲು ಪಾಸ್ ಕಡ್ಡಾಯ ನಿರ್ಧಾರ ರದ್ದುಪಡಿಸುವಂತೆ ಆಗ್ರಹ

ಚಿಕ್ಕಮಗಳೂರು:  ಗುರುದತ್ತಾತ್ರೇಯ ಸ್ವಾಮಿ ಬಾಬಾಬುಡನ್‌ಗಿರಿ ದರ್ಗಾ ವ್ಯಾಪ್ತಿಯ ಸಂಚಾರಕ್ಕೆ ಸ್ಥಳೀಯ ನಿವಾಸಿಗಳಿಗೆ ಪಾಸ್ ಕಡ್ಡಾಯ ಮಾಡಲು...

ಸೈಕಲ್‌ನಲ್ಲಿ ಧರ್ಮಸ್ಥಳ ತೆರಳಲು ನಗರಕ್ಕಾಗಮಿಸಿದ ಯುವಕರ ತಂಡ

ಚಿಕ್ಕಮಗಳೂರು: ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾ ಮಿ ಸನ್ನಿಧಾನಕ್ಕೆ ತೆರಳಲು ವಿಜಯನಗರ...