Home namma chikmagalur ಹೋರಾಟಗಾರ ಬಂಧನ ಖಂಡಿಸಿ ಸಂಯುಕ್ತ ಹೋರಾಟ ಸಮಿತಿ ಪ್ರತಿಭಟನೆ
namma chikmagalurchikamagalurHomeLatest News

ಹೋರಾಟಗಾರ ಬಂಧನ ಖಂಡಿಸಿ ಸಂಯುಕ್ತ ಹೋರಾಟ ಸಮಿತಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ ಫಲವತ್ತಾದ ಕೃಷಿ ಭೂಮಿಯನ್ನು ಕೆ.ಐ.ಎಡಿಬಿಗೆ ವಹಿಸುವ ನಿರ್ಧಾರ ವಿರೋಧಿಸಿ ಸಮಾವೇಶ ನಡೆಸಿದ ಹೋರಾಟಗಾರರನ್ನು ಬಂಧಿಸಿರುವ ಕ್ರಮ ಖಂಡಿಸಿ ಹಾಗೂ ಅನ್ಯ ಉದ್ದೇಶಕ್ಕೆ ಕೃಷಿ ಭೂಮಿ ಬಳಕೆ ಕೈಬಿಡಬೇಕು ಎಂದು ಒತ್ತಾಯಿಸಿ, ಸಂಯುಕ್ತ ಹೋರಾಟ ಸಮಿತಿಯಿಂದ ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಚನ್ನರಾಯಪಟ್ಟಣ ಹೋಬಳಿಯ ವಿವಿಧ ಹಳ್ಳಿಗಳ 1777 ಎಕರೆ ಜಮೀನನ್ನು ಕೃಷಿಯೇತರ ಉದ್ದೇಶಕ್ಕಾಗಿ ಸರ್ಕಾರ ಕೆಐಎಡಿಬಿಗೆ ವರ್ಗಾಯಿಸುವ ನಿರ್ಧಾರ ಕೈಗೊಂಡಿದೆ. ಇದನ್ನು ವಿರೋಧಿಸಿ ಆ ಭಾಗದ ರೈತರು ಕಳೆದ ಮೂರು ವರ್ಷದಿಂದ ನಿರಂತರ ಧರಣಿ ಮಾಡುತ್ತಿದ್ದಾರೆ. ರೈತರ ವಿರೋಧವನ್ನು ಲೆಕ್ಕಿಸದೆ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ರಸ್ತೆ ನಗರೀಕರಣ ಕೈಗಾರಿಕೆ ನೀರಾವರಿ ವಸತಿ ಹೀಗೆ ಹಲವು ಯೋಜನೆಗಳಿಗೆ ಶೇ. 30ರಷ್ಟು ರೈತರ ಫಲವತ್ತಾದ ಭೂಮಿ ಬಳಕೆಯಾಗುತ್ತಿದೆ. ಇದು ಹೀಗೆ ಮುಂದುವರಿದಲ್ಲಿ ಕೃಷಿಭೂಮಿ ಕಿರಿದಾಗಿ ದೇಶಕ್ಕೆ ಆಹಾರದ ಅಭಾವ ಸೃಷ್ಟಿಯಾಗುವ ಸಾಧ್ಯತೆ ಇದೆ. ಹೀಗಾಗಿ ಕೃಷಿ ಯೋಗ್ಯ ಭೂಮಿಯನ್ನು ಯಾವುದೇ ಕಾರಣಕ್ಕೂ ಅನ್ಯ ಉದ್ದೇಶಕ್ಕೆ ಬಳಕೆ ಮಾಡಬಾರದು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಮಹೇಶ್, ತಾಲೂಕು ಅಧ್ಯಕ್ಷ ಸುನೀಲ್ ಕುಮಾರ್ ಮತ್ತಿತರರಿದ್ದರು.

Listen to the people’s problems to organize the party from the grassroots level

Share

Leave a comment

Leave a Reply

Your email address will not be published. Required fields are marked *

Don't Miss

ಹುಯಿಗೆರೆ ಗ್ರಾಮ ಬಳಿ ಕಾಡಾನೆ ದಾಳಿಗೆ ಕೃಷಿಕನ ಸಾವು

ಬಾಳೆಹೊನ್ನೂರು: ಹುಯಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಡವಾನೆ ಜಾಗರ ಬಳಿ ಕೃಷಿಕ ಸಬ್ರಾಯಗೌಡ (65) ಎಂಬುವರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ, ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭಾನುವಾರ...

ವೇದಾನದಿಯಿಂದ ಕೆರೆ ತುಂಬಿಸುವ ಯೋಜನೆ ಸ್ಥಗಿತಗೊಳಿಸಬೇಕು

ಚಿಕ್ಕಮಗಳೂರು:  ವೇದಾ ನದಿಯ ಅಗ್ರಹಾರ ಬಳಿ ಇರುವ ಚೆಕ್‌ಡ್ಯಾಂನಿಂದ ಹುಲಿಕೆರೆ, ಬೆರಟಿಕೆರೆ, ನಾಗೇನಹಳ್ಳಿಯ ಕೆರೆಗಳಿಗೆ ನೀರೊದಗಿಸುವುದನ್ನು ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟವನ್ನು ನಡೆಸುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಎಚ್ಚರಿಸಿದೆ....

Related Articles

ಆದಿವಾಸಿ ಪ್ರದೇಶದ ಹೋಂಸ್ಟೇ ನಿರ್ಮಾಣಕ್ಕೆ ಸಹಾಯಧನ

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ...

ಗಿರಿಗೆ ತೆರಳಲು ಪಾಸ್ ಕಡ್ಡಾಯ ನಿರ್ಧಾರ ರದ್ದುಪಡಿಸುವಂತೆ ಆಗ್ರಹ

ಚಿಕ್ಕಮಗಳೂರು:  ಗುರುದತ್ತಾತ್ರೇಯ ಸ್ವಾಮಿ ಬಾಬಾಬುಡನ್‌ಗಿರಿ ದರ್ಗಾ ವ್ಯಾಪ್ತಿಯ ಸಂಚಾರಕ್ಕೆ ಸ್ಥಳೀಯ ನಿವಾಸಿಗಳಿಗೆ ಪಾಸ್ ಕಡ್ಡಾಯ ಮಾಡಲು...

ಸೈಕಲ್‌ನಲ್ಲಿ ಧರ್ಮಸ್ಥಳ ತೆರಳಲು ನಗರಕ್ಕಾಗಮಿಸಿದ ಯುವಕರ ತಂಡ

ಚಿಕ್ಕಮಗಳೂರು: ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾ ಮಿ ಸನ್ನಿಧಾನಕ್ಕೆ ತೆರಳಲು ವಿಜಯನಗರ...

೨ ಕೋಟಿ ರೂ ವೆಚ್ಚದಲ್ಲಿ ನಗರದ ಡಾ. ಅಂಬೇಡ್ಕರ್ ಭವನ

ಚಿಕ್ಕಮಗಳೂರು: ನಗರದ ಹೃದಯ ಭಾಗದಲ್ಲಿರುವ ಡಾ. ಅಂಬೇಡ್ಕರ್ ಭವನವನ್ನು ಸುಮಾರು ೨ ಕೋಟಿ ರೂ ವೆಚ್ಚದಲ್ಲಿ...