Home namma chikmagalur ಹೋರಾಟಗಾರ ಬಂಧನ ಖಂಡಿಸಿ ಸಂಯುಕ್ತ ಹೋರಾಟ ಸಮಿತಿ ಪ್ರತಿಭಟನೆ
namma chikmagalurchikamagalurHomeLatest News

ಹೋರಾಟಗಾರ ಬಂಧನ ಖಂಡಿಸಿ ಸಂಯುಕ್ತ ಹೋರಾಟ ಸಮಿತಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ ಫಲವತ್ತಾದ ಕೃಷಿ ಭೂಮಿಯನ್ನು ಕೆ.ಐ.ಎಡಿಬಿಗೆ ವಹಿಸುವ ನಿರ್ಧಾರ ವಿರೋಧಿಸಿ ಸಮಾವೇಶ ನಡೆಸಿದ ಹೋರಾಟಗಾರರನ್ನು ಬಂಧಿಸಿರುವ ಕ್ರಮ ಖಂಡಿಸಿ ಹಾಗೂ ಅನ್ಯ ಉದ್ದೇಶಕ್ಕೆ ಕೃಷಿ ಭೂಮಿ ಬಳಕೆ ಕೈಬಿಡಬೇಕು ಎಂದು ಒತ್ತಾಯಿಸಿ, ಸಂಯುಕ್ತ ಹೋರಾಟ ಸಮಿತಿಯಿಂದ ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಚನ್ನರಾಯಪಟ್ಟಣ ಹೋಬಳಿಯ ವಿವಿಧ ಹಳ್ಳಿಗಳ 1777 ಎಕರೆ ಜಮೀನನ್ನು ಕೃಷಿಯೇತರ ಉದ್ದೇಶಕ್ಕಾಗಿ ಸರ್ಕಾರ ಕೆಐಎಡಿಬಿಗೆ ವರ್ಗಾಯಿಸುವ ನಿರ್ಧಾರ ಕೈಗೊಂಡಿದೆ. ಇದನ್ನು ವಿರೋಧಿಸಿ ಆ ಭಾಗದ ರೈತರು ಕಳೆದ ಮೂರು ವರ್ಷದಿಂದ ನಿರಂತರ ಧರಣಿ ಮಾಡುತ್ತಿದ್ದಾರೆ. ರೈತರ ವಿರೋಧವನ್ನು ಲೆಕ್ಕಿಸದೆ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ರಸ್ತೆ ನಗರೀಕರಣ ಕೈಗಾರಿಕೆ ನೀರಾವರಿ ವಸತಿ ಹೀಗೆ ಹಲವು ಯೋಜನೆಗಳಿಗೆ ಶೇ. 30ರಷ್ಟು ರೈತರ ಫಲವತ್ತಾದ ಭೂಮಿ ಬಳಕೆಯಾಗುತ್ತಿದೆ. ಇದು ಹೀಗೆ ಮುಂದುವರಿದಲ್ಲಿ ಕೃಷಿಭೂಮಿ ಕಿರಿದಾಗಿ ದೇಶಕ್ಕೆ ಆಹಾರದ ಅಭಾವ ಸೃಷ್ಟಿಯಾಗುವ ಸಾಧ್ಯತೆ ಇದೆ. ಹೀಗಾಗಿ ಕೃಷಿ ಯೋಗ್ಯ ಭೂಮಿಯನ್ನು ಯಾವುದೇ ಕಾರಣಕ್ಕೂ ಅನ್ಯ ಉದ್ದೇಶಕ್ಕೆ ಬಳಕೆ ಮಾಡಬಾರದು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಮಹೇಶ್, ತಾಲೂಕು ಅಧ್ಯಕ್ಷ ಸುನೀಲ್ ಕುಮಾರ್ ಮತ್ತಿತರರಿದ್ದರು.

Listen to the people’s problems to organize the party from the grassroots level

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ‌ಲ್ಲಿ ಇಂದು ನೂತನ ರಸ್ತೆ ಮೇಲ್ವೇತುವೆಯ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ

ಚಿಕ್ಕಮಗಳೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ಸಚಿವರಾದ ವಿ.ಸೋಮಣ್ಣ ಅವರು ಮೇ 31 ರಂದು (ನಾಳೆ ಭಾನುವಾರ) ಚಿಕ್ಕಮಗಳೂರು ಜಿಲ್ಲೆಯ ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ...

ಶ್ರೀಗಂಧ ಮರಗಳ ರಕ್ಷಣೆ, ಪ್ಲಾಸ್ಟಿಕ್ ಮುಕ್ತಕ್ಕೆ ಆಗ್ರಹಿಸಿ ಮೌನ ಪ್ರತಿಭಟನೆ

ಚಿಕ್ಕಮಗಳೂರು: ನಾಡಿನಲ್ಲಿ ಶ್ರೀಗಂಧ ಮರಗಳ ರಕ್ಷಣೆ ಮತ್ತು ನಗರವನ್ನು ಪ್ಲಾಸ್ಟಿಕ್ ಮು ಕ್ತಗೊಳಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಜಿಲ್ಲಾ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘ ಮತ್ತು ವಿವಿಧ ಕನ್ನಡಪರ ಸಂಘಟನೆಗಳ...

Related Articles

ಪ್ಲೆಕ್ಸ್‌ ಹರಿದ ಪ್ರಕರಣ ಇಬ್ಬರು ಆರೋಪಿಗಳ ಬಂಧನ

ಚಿಕ್ಕಮಗಳೂರು: ಕಾಫಿನಾಡಿನ ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರವಿದ್ದ ಪ್ಲೆಕ್ಸ್‌ಗೆ...

ಅಡಿಕೆ ಕಳವು ಪ್ರಕರಣದ ಆರೋಪಿಗಳ ಬಂಧನ

ಬಾಳೆಹೊನ್ನೂರು: ಇಲ್ಲಿಗೆ ಸಮೀಪದ ಜಕ್ಕಣಕ್ಕಿಯ ರೈತರ ಗೋದಾಮಿನಲ್ಲಿಟ್ಟಿದ್ದ ಅಡಿಕೆಯನ್ನು ಕಳವು ಮಾಡಿದ ಆರೋಪದಲ್ಲಿ ಪೊಲೀಸರು ಇಬ್ಬರನ್ನು...

ಮೂಡಿಗೆರೆಯಲ್ಲಿ ಬಾಗಿಲು ಮುರಿದು ಕಳ್ಳತನ

ಮೂಡಿಗೆರೆ: ಬೀಗ ಹಾಕಿದ್ದ ಮನೆಯೊಂದರ ಮುಂಬಾಗಿಲು ಮುರಿದು ಮನೆಯೊಳಗೆ ನುಗ್ಗಿ ನಗದು ಸಹಿತ ಅಪಾರ ಮೌಲ್ಯದ...

ನಾಗಲಕ್ಷ್ಮಿ ಚಿತ್ರಮಂದಿರದ ಪ್ರದರ್ಶನ ಸ್ಥಗಿತ

ಚಿಕ್ಕಮಗಳೂರು: ಅಗ್ನಿ ಸುರಕ್ಷತಾ ಪರಿಕರಗಳನ್ನು ಅಳವಡಿಸದ ಕಾರಣಕ್ಕೆ ನಗರದ ನಾಗಲಕ್ಷ್ಮಿ ಚಿತ್ರಮಂದಿರದಲ್ಲಿ ಚಲನಚಿತ್ರ ಪ್ರದರ್ಶನಗಳನ್ನು ಅಧಿಕಾರಿಗಳು...