Home Latest News ಸಾಲ – ರಿಫಂಡ್ ನೀಡುವುದಾಗಿ ನಂಬಿಸಿ 6,26,000 ರೂ. ವಂಚನೆ
Latest NewschikamagalurHomenamma chikmagalur

ಸಾಲ – ರಿಫಂಡ್ ನೀಡುವುದಾಗಿ ನಂಬಿಸಿ 6,26,000 ರೂ. ವಂಚನೆ

Share
Share

ಚಿಕ್ಕಮಗಳೂರು: ವ್ಯಕ್ತಿಯೊಬ್ಬರಿಗೆ ಹೆಚ್ಚಿನ ಪ್ರಮಾಣದ ಸಾಲ ಮತ್ತು ರಿಫಂಡ್ ನೀಡುವುದಾಗಿ ನಂಬಿಸಿ ಪ್ರೋಸೆಸ್ಸಿಂಗ್ ಚಾರ್ಜಸ್ ರೀತಿಯಲ್ಲಿ 6,26,000ರೂ ಪಡೆದು ವಂಚಿಸಿದ ಘಟನೆ ನಡೆದಿದೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಇನ್ಸ್ಟಾಗ್ರಾಮ್ ಆಪ್ (INSTAGRAM) ನಲ್ಲಿ ವಿಡಿಯೋಗಳನ್ನು ವಿಕ್ಷಿಸುತ್ತಿರುವಾಗ ತುಂಬಾ ಕಡಿಮೆ ಬಡ್ಡಿಗೆ ಲೋನ್ ಕೊಡುವ ವಿಡಿಯೋ ಬಂದಿದೆ.

ಇದನ್ನು ವೀಕ್ಷಿಸಿದ ವ್ಯಕ್ತಿಗೆ ಸೈಬರ್ ವಂಚಕರು ಕರೆಮಾಡಿ ನೀವು ಲೋನ್ ಬಗ್ಗೆ ವಿಡಿಯೋವನ್ನು ವೀಕ್ಷಿಸಿರುತ್ತೀರಿ, ನಾವು ಬ್ಯಾಂಕ್ ನಿಂದ ಕರೆ ಮಾಡುತ್ತಿದ್ದೇವೆ ನಿಮಗೆ ಲೋನ್ ಬೇಕಾದರೆ ನಾವು ಕಡಿಮೆ ಬಡ್ಡಿಗೆ ಲೋನ್ ಮಾಡಿಸಿ ಕೊಡುತ್ತೇವೆಂದು ನಂಬಿಸಿದ್ದಾರೆ.

02 ಲೋನ್ ಆಪ್ ಗಳನ್ನು ಡೌನ್ ಲೋಡ್ ಮಾಡಿಸಿ ಡಾಕ್ಯುಮೆಂಟ್ ಗಳನ್ನು ಅಪ್ ಲೋಡ್ ಮಾಡಿಸಿಕೊಂಡು ಅದರಿಂದ ಸದರಿ ವ್ಯಕ್ತಿಗೆ 4.5 ಲಕ್ಷ ರೂ ಸಾಲವನ್ನು ಮಂಜೂರು ಮಾಡಿಸಿ, ನಂತರ ನಿಮಗೆ ಇನ್ನೂ ಹೆಚ್ಚಿನ ಸಾಲ ಬೇಕಾದರೆ 07 ಲಕ್ಷ ರೂ. ಸಾಲ ಮಂಜೂರು ಮಾಡಿಸುತ್ತೇವೆ ಎಂದು ವಿಶ್ವಾಸ ಮೂಡಿಸಿದ್ದಾರೆ.

ಬಳಿಕ ನೀವು ಸಾಲ ಪಡೆದಿರುವ 4.5 ಲಕ್ಷ ರೂ ಮತ್ತು ಪ್ರೊಸೆಸಿಂಗ್ ಚಾರ್ಜಸ್ ಸೇರಿ ಒಟ್ಟು 6,26,000 ರೂ ಗಳನ್ನು ನಾವು ಹೇಳುವ ಖಾತೆಗೆ ಹಾಕಿದರೆ ನಿಮಗೆ 07 ಲಕ್ಷ ರೂ ಸಾಲದ ಜೊತೆಗೆ ನೀವು ನಮಗೆ ಹಾಕುವ 6,26,000 ರೂ ವಾಪಸ್ಸು ಮಾಡಿಸುತ್ತೇವೆಂದು ನಂಬಿಸಿದ್ದಾರೆ.

6,26,000 ರೂ ಗಳನ್ನು ಸೈಬರ್ ಫ್ರಾಡ್ ಗಳು ತಮ್ಮ ಖಾತೆಗೆ ಹಾಕಿಸಿಕೊಂಡು ಯಾವುದೇ ಲೋನ್ ಆಗಲಿ ಮತ್ತು ರೀಫಂಡ್ ಆಗಲಿ ಮಾಡದೇ ಮೋಸ ಮಾಡಿರುತ್ತಾರೆ. ಈ ಬಗ್ಗೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Loan – Rs. 626000 fraud on the pretext of refund

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...