Home Crime News ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು
Crime NewsHomeKadurLatest Newsnamma chikmagalur

ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

Share
Share

ಕಡೂರು: ಪರೀಕ್ಷೆಗೆಂದು ವಿದ್ಯಾರ್ಥಿ ಕಾಲೇಜಿಗೆ ತೆರಳಿದ್ದ ಸಮಯ ಸಾಧಿಸಿದ ಖದೀಮರು, ಮನೆಯ ಬೀಗ ಮುರಿದು ಒಳನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿರುವ ಘಟನೆ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಲೋಹಿತ್ ಬಿ. ಎಂಬ ಬಿ.ಎ. ವಿದ್ಯಾರ್ಥಿ ಕಡೂರಿನ ಜೂನಿಯರ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಏಪ್ರಿಲ್ 15ರಂದು ಪರೀಕ್ಷೆ ಬರೆಯಲು ಶಿವಮೊಗ್ಗದಿಂದ ಬೆಳಗ್ಗೆ ಕಡೂರಿಗೆ ಬಂದಿದ್ದರು. ಬೆಳಗ್ಗೆ ಸುಮಾರು 10 ಗಂಟೆಗೆ ಅವರು ತಮ್ಮ ಮನೆಗೆ ಹೋದಾಗ, ಮನೆಯ ಮುಂಭಾಗದ ಬಾಗಿಲಿನ ಇಂಟರ್ ಲಾಕ್ ಬೀಗವನ್ನು ಯಾರೋ ಮುರಿದಿರುವುದು ಕಂಡುಬಂದಿದೆ. ಆತಂಕಗೊಂಡ ಲೋಹಿತ್ ತಕ್ಷಣವೇ ತಮ್ಮ ತಾಯಿಗೆ ವಿಷಯ ತಿಳಿಸಿ, ಮನೆಯೊಳಗೆ ಹೋಗಿ ಪರಿಶೀಲಿಸಿದ್ದಾರೆ.

ಮನೆಯ ಹಾಲ್‌ನಲ್ಲಿದ್ದ ಗಾಡೇಜ್ ಬೀರುವಿನ ಬಾಗಿಲನ್ನು ಕಳ್ಳರು ಯಾವುದೋ ಆಯುಧದಿಂದ ಮೀಟಿ, ಅದರೊಳಗಿನ ಲಾಕ್ ಅನ್ನು ಕೂಡ ಮುರಿದಿರುವುದು ಕಂಡುಬಂದಿದೆ. ಬೀರುವಿನಲ್ಲಿದ್ದ ವಸ್ತುಗಳೆಲ್ಲಾ ನೆಲದ ಮೇಲೆ ಹರಡಿಕೊಂಡಿದ್ದವು. ಕಳ್ಳರು ಬೀರುವಿನಲ್ಲಿದ್ದ ಸುಮಾರು 40 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರ (ಅಂದಾಜು ಬೆಲೆ ರೂ. 4,00,000/-), 13 ಗ್ರಾಂ ತೂಕದ ಚಿನ್ನದ ಚೈನ್ (ಅಂದಾಜು ಬೆಲೆ ರೂ. 1,30,000/-), 5 ಗ್ರಾಂ ತೂಕದ ಚಿನ್ನದ ಕಿವಿ ಮಾಟಿ ಮತ್ತು ಕೊಂಡಿಗಳು (ಅಂದಾಜು ಬೆಲೆ ರೂ. 50,000/-) ಹಾಗೂ ಸುಮಾರು 60 ಗ್ರಾಂ ತೂಕದ ಬೆಳ್ಳಿಯ ಕಾಲ್ ಚೈನ್ (ಅಂದಾಜು ಬೆಲೆ ರೂ. 12,000/-) ಮತ್ತು 8000 ರೂಪಾಯಿ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.

ಒಟ್ಟಾರೆಯಾಗಿ ಸುಮಾರು 5,80,000/- ರೂಪಾಯಿ ಮೌಲ್ಯದ 58 ಗ್ರಾಂ ಚಿನ್ನದ ಒಡವೆಗಳು, 12,000/- ರೂಪಾಯಿ ಮೌಲ್ಯದ ಬೆಳ್ಳಿಯ ವಸ್ತುಗಳು ಹಾಗೂ 8000/- ರೂಪಾಯಿ ನಗದನ್ನು ಕಳ್ಳರು ದೋಚಿದ್ದಾರೆ ಎಂದು ಲೋಹಿತ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Lock broken, jewellery worth lakhs stolen

Share

Leave a comment

Leave a Reply

Your email address will not be published. Required fields are marked *

Don't Miss

ನಕಲಿ “ಐ.ಎ.ಎಸ್” ಮಿಥುನ್ ಬಂಧನ

ಬೆಂಗಳೂರು: ಚಿಕ್ಕಮಗಳೂರು ಮೂಲದ ಮಿಥುನ್ ಎಂಬತಾ ಐ.ಎ.ಎಸ್.ನ ನಕಲಿ ದಾಖಲೆ ಸೃಷ್ಟಿ ಮಾಡಿ ಹಲವರಿಗೆ ವಂಚನೆ ಮಾಡಿದ್ದು ಬೆಂಗಳೂರಿನ ಅಮೃತಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅರೋಗ್ಯ ಇಲಾಖೆಯ ಎನ್.ಹೆಚ್.ಎಮ್.ನ ಉಸ್ತುವಾರಿ ಎಂದು...

ನಗರದಲ್ಲಿ ಹಾಡುಹಗಲೇ ಶಿಕ್ಷಕಿಯ ಮಾಂಗಲ್ಯ ಸರ ಅಪಹರಣ

ಚಿಕ್ಕಮಗಳೂರು: ಹಾಡುಹಗಲೇ ಶಿಕ್ಷಕಿಯ ಕೊರಳಿಗೆ ಕೈ ಹಾಕಿ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋದ ಘಟನೆ ಸೋಮವಾರ ಸಂಜೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಈ ಕುರಿತು ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ...

Related Articles

ಪ್ರಯಾಣಿಕರೇ ಬಸ್ ತಳ್ಳುವ ಕೆಎಸ್‌ಆರ್‌ಟಿಸಿ ಬಸ್‌

ಚಿಕ್ಕಮಗಳೂರು: ಸರ್ಕಾರದ ಉಚಿತ ಯೋಜನೆಗಳ ಆರ್ಭಟದ ನಡುವೆ ಸಾರಿಗೆ ಬಸ್‌ಗಳ ನಿರ್ವಹಣೆ ಅಧೋಗತಿಗೆ ತಲುಪಿದೆಯೇ? ಇಂತಹದೊಂದು ಪ್ರಶ್ನೆ...

ಏ.23ಕ್ಕೆ ಕರಾಳಕೃತ್ಯ ಖಂಡಿಸಿ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆಯದ ಅಪಚಾರ ಏಪ್ರಿಲ್ ೨೩ ರಂದು ಪಶ್ಚಿಮಬಂಗಾಳದಲ್ಲಿ ನಡೆಯುತ್ತಿದೆ. ಇದನ್ನು ವಿರೋಧಿಸಿ...

ಭದ್ರಾ ಅಭಯಾರಣ್ಯದಲ್ಲಿ ಭ್ರಷ್ಟಾಚಾರ

ಚಿಕ್ಕಮಗಳೂರು:ಭದ್ರಾ ಅಭಯಾರಣ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಮೌನವಹಿಸಿದ್ದಾರೆಂದು ದಲಿತ ಸಂಘರ್ಷಸಮಿತಿ ರಾಜ್ಯ ಸಂಘಟನಾ ಸಂಚಾಲಕ...

ಜನತೆ ಬಿಸಿಲಿನ ಬೇಗೆಗೆ ತತ್ತರಿಸಿ ಹೋದ ಕಾಫಿನಾಡಿನ ಜನತೆ

ಚಿಕ್ಕಮಗಳೂರು: ಮಲೆನಾಡಿನ ಮಡಿಲು, ತಂಪಾದ ಹವಾಮಾನಕ್ಕೆ ಹೆಸರಾದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಈ ಬಾರಿ ಸೂರ್ಯನ ಪ್ರಖರತೆ...