Home namma chikmagalur chikamagalur ಎರಡು ದೇವಸ್ಥಾನಗಳ ಬೀಗ ಒಡೆದು ಚಿನ್ನಾಭರಣ ಕಳವು
chikamagalurCrime NewsHomeLatest Newsnamma chikmagalur

ಎರಡು ದೇವಸ್ಥಾನಗಳ ಬೀಗ ಒಡೆದು ಚಿನ್ನಾಭರಣ ಕಳವು

Share
Share

ಚಿಕ್ಕಮಗಳೂರು: ಒಂದೇ ದಿನ ಎರಡು ದೇವಸ್ಥಾನಗಳ ಬೀಗ ಒಡೆದು ನಗದು ಹಾಗೂ ಚಿನ್ನಾಭರಣಗಳನ್ನು ದೋಚಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಭೋಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಪ್ರಸಿದ್ದ ಶ್ರೀ ಚನ್ನಬಸವೇಶ್ವರ ದೇವಸ್ಥಾನ ಹಾಗೂ ಶ್ರೀ ಕಾಳಿಕಾಂಬ ದೇವಸ್ಥಾನಗಳಲ್ಲಿ ಈ ಸರಣಿ ಕಳ್ಳತನ ಸಂಭವಿಸಿದೆ. ಬುಧವಾರ ಎಂದಿನಂತೆ ಪೂಜಾ ಕಾರ್ಯಗಳನ್ನು ಮುಗಿಸಿ ಅರ್ಚಕರು ದೇವಸ್ಥಾನದ ಬಾಗಿಲು ಹಾಕಿಕೊಂಡು ಮನೆಗೆ ತೆರಳಿದ್ದರು.

ಮರುದಿನ ಮುಂಜಾನೆ 6-00 ಗಂಟೆಯ ಸಮಯದಲ್ಲಿ ಗ್ರಾಮದ ಮಹಿಳೆಯರು ದೇವಸ್ಥಾನದ ಮುಂಭಾಗ ಸ್ವಚ್ಛಗೊಳಿಸಲು ಹೋದಾಗ ಬಾಗಿಲಿನ ಬೀಗ ಮುರಿದಿರುವುದು ಮತ್ತು ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಖದೀಮರು ಮೊದಲು ಚನ್ನಬಸವೇಶ್ವರ ದೇವಸ್ಥಾನದ ಒಳನುಗ್ಗಿ ಅಲ್ಲಿದ್ದ ಕಬ್ಬಿಣದ ಹುಂಡಿಯನ್ನು ಎಗರಿಸಿದ್ದಾರೆ. ಈ ಹುಂಡಿಯಲ್ಲಿ ಅಂದಾಜು 8,000 ರೂ. ಕಾಣಿಕೆ ಹಣವಿತ್ತು ಎನ್ನಲಾಗಿದೆ.

ನಂತರ ಪಕ್ಕದಲ್ಲೇ ಇದ್ದ ಶ್ರೀ ಕಾಳಿಕಾಂಬ ದೇವಸ್ಥಾನದ ಬಾಗಿಲಿನ ಬೀಗ ಒಡೆದು ಒಳಪ್ರವೇಶಿಸಿದ ಕಳ್ಳರು, ದೇವಿಯ ಮೂರ್ತಿಯ ಮೇಲಿದ್ದ ಅಂದಾಜು 30,000 ರೂ. ಮೌಲ್ಯದ 6ಗ್ರಾಂ ತೂಕದ ಮೂರು ಬಂಗಾರದ ತಾಳಿಗಳನ್ನು ಕಳವು ಮಾಡಿದ್ದಾರೆ. ಅಲ್ಲದೆ ಅಲ್ಲಿದ್ದ ಕಬ್ಬಿಣದ ಹುಂಡಿಯನ್ನು ಒಡೆದು ಅದರಲ್ಲಿದ್ದ ಸುಮಾರು 25,000 ರೂ. ನಗದನ್ನು ದೋಚಿದ್ದಾರೆ.

ದೇವಸ್ಥಾನದ ಬಾಗಿಲುಗಳಿಗೆ ಹಾನಿ ಮಾಡಿರುವ ಕಳ್ಳರು ಒಟ್ಟು 63,000 ರೂ. ಮೌಲ್ಯದ ಸ್ವತ್ತನ್ನು ಲೂಟಿ ಮಾಡಿದ್ದಾರೆ. ಎರಡೂ ದೇವಸ್ಥಾನಗಳ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿರುವ ಶಾಂತಮೂರ್ತಿ ಎಸ್.ಬಿ. ಅವರು ಈ ಕುರಿತು ಅಜ್ಜಂಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗೆ ತನಿಖೆ ಚುರುಕುಗೊಳಿಸಿದ್ದಾರೆ.

Locks of two temples broken gold ornaments stolen

Share

Leave a comment

Leave a Reply

Your email address will not be published. Required fields are marked *

Don't Miss

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್ ಯೋಜನೆಯಡಿ ಬೋರ್‌ವೆಲ್ ಕಾಮಗಾರಿ ನಿರ್ವಹಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯೊಂದಿಗೆ ಮಾಡಿಕೊಂಡಿದ್ದ...

ಅಕ್ರಮ ಮದ್ಯ ಮಾರಾಟ-ಐವರು ಆರೋಪಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಮದ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದ ಅಡ್ಡೆಗಳ ಮೇಲೆ ಪೊಲೀಸರು ಬಿರುಗಾಳಿ ದಾಳಿ ನಡೆಸಿದ್ದು, ಮಹಿಳೆ ಸೇರಿ ಐವರು ಆರೋಪಿಗಳನ್ನು...

Related Articles

ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ನವೀಕೃತ ಕಟ್ಟಡ ಲೋಕಾರ್ಪಣೆ

ಚಿಕ್ಕಮಗಳೂರು: 105 ವರ್ಷ ಹಳೆಯ ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ನವೀಕೃತ ಕಟ್ಟಡ ಹಾಗೂ ಆಟದ ಮೈದಾನ...

ನಗರದಲ್ಲಿ ಗ್ಯಾಂಗ್ ವಾರ್ ಸ್ವಯಂಪ್ರೇರಿತ ಪ್ರಕರಣ ದಾಖಲು

ಚಿಕ್ಕಮಗಳೂರು: ನಗರದ ಐ.ಜಿ ರಸ್ತೆಯಲ್ಲಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರುವಂತೆ ಯುವಕರ ಗುಂಪೊಂದು ಭೀಕರವಾಗಿ ಬಡಿದಾಡಿಕೊಂಡಿರುವ...

ಸತ್ತಿಹಳ್ಳಿ ಗ್ರಾಮದಲ್ಲಿ ಪತಿಯಿಂದ ಪತ್ನಿಯ ಮೇಲೆ ಹಲ್ಲೆ

ಚಿಕ್ಕಮಗಳೂರು: ಕುಡಿತದ ದಾಸನಾಗಿ, ಹೆಂಡತಿಯ ನಡತೆಯ ಮೇಲೆ ಇಲ್ಲಸಲ್ಲದ ಅನುಮಾನ ಪಟ್ಟು ಸೌದೆ ಬಡಿಗೆ ಹಾಗೂ...

ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ತರೀಕೆರೆ: ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾವಿಕೆರೆಯಲ್ಲಿ ನಂಬಿಕೆಗೆ ದ್ರೋಹ ಬಗೆದ ಆಘಾತಕಾರಿ ಘಟನೆಯೊಂದು ಬೆಳಕಿಗೆ...