Home namma chikmagalur ಧರ್ಮ ಸಂಸ್ಥಾಪನೆಗೆ ಜೀವನ ಮುಡಿಪಾಗಿಟ್ಟವನು ಶ್ರೀಕೃಷ್ಣ
namma chikmagalurchikamagalurHomeLatest News

ಧರ್ಮ ಸಂಸ್ಥಾಪನೆಗೆ ಜೀವನ ಮುಡಿಪಾಗಿಟ್ಟವನು ಶ್ರೀಕೃಷ್ಣ

Share
Share

ಚಿಕ್ಕಮಗಳೂರು: : ದ್ವಾಪರ ಯುಗದಲ್ಲಿ ಅಧರ್ಮದ ನಾಶಕ್ಕಾಗಿಯೇ ಅವತರಿಸಿ ಧರ್ಮ ಸಂಸ್ಥಾಪನೆ ಮತ್ತು ಭಕ್ತರ ರಕ್ಷಣೆಗೆ ತನ್ನ ಜೀವನವನ್ನು ಮುಡಿಪಾಗಿಟ್ಟವನು ಭಗವಾನ್ ಶ್ರೀಕೃಷ್ಣ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.

ಜಿಲ್ಲಾಡಳಿತದ ವತಿಯಿಂದ ಇಂದು ನಗರದ ಕುವೆಂಪು ಕಲಾಮಂದಿರದಲ್ಲಿ ಜರುಗಿದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು. ವಸುದೇವ-ದೇವಕಿಯ ಪುತ್ರನಾಗಿ ಜನಿಸಿದ ಶ್ರೀಕೃಷ್ಣ ಮುಂದೆ ನಂದಗೋಕುಲದಲ್ಲಿ ಬೆಳೆದು ಯಶೋದೆಯ ಮಗನಾಗಿಯೂ ಗಮನ ಸೆಳೆಯುತ್ತಾನೆ. ಶ್ರೀಕೃಷ್ಣ ಬಾಲ್ಯದಲ್ಲಿ ತುಂಟತನದ ಮೂಲಕವೂ ವಿಶೇಷವಾಗಿ ಗೋಚರಿಸುತ್ತಾನೆ ಎಂದರು.

ಭಗವದ್ಗೀತೆಯಲ್ಲಿ ನೀಡಿದ ನೀತಿಯ ಉಪದೇಶ ಶ್ರೀಕೃಷ್ಣನ ಜೀವನಾನುಭವ ಎಂದರೆ ತಪ್ಪಾಗಲಾರದು. ಮಹಾಭಾರತ ಯುದ್ಧದಲ್ಲಿ ಅರ್ಜುನನ ಸಾರಥಿಯಾಗಿದ್ದ ಶ್ರೀಕೃಷ್ಣ ಪಾಂಡವ ಪಕ್ಷಪಾತಿಯಾದರೂ ಧರ್ಮ ಪರಿಪಾಲಕನಾಗಿ ಗುರುತಿಸಿಕೊಳ್ಳುವ ಪರಿ ಅನನ್ಯವಾದುದು. ಅರ್ಜುನನಿಗೆ ಗೀತೋಪದೇಶದ ಮೂಲಕ ಸತ್ಯದ ಅರಿವು ಮೂಡಿಸಿದ ಶ್ರೀಕೃಷ್ಣನ ಆದರ್ಶಗಳು ಸೇರಿದಂತೆ ಆತನ ಬದುಕಿನ ಹಲವಾರು ಮಹತ್ವದ ಘಟ್ಟಗಳನ್ನು ನಾವು ಅರಿತುಕೊಳ್ಳುವುದು ಅಗತ್ಯ. ನಮ್ಮೆಲ್ಲರ ಜೀವನೋತ್ಸಾಹದ ಸಂಕೇತವಾಗಿರುವ ಶ್ರೀಕೃ?ನ ಪ್ರಬುದ್ಧತೆ ಇಂದಿನ ಕಾಲಘಟ್ಟಕ್ಕೂ ಮಾದರಿಯಾಗಿ ನಿಲ್ಲುತ್ತದೆ ಎಂದು ಹೇಳಿದರು.

ಶ್ರೀಕೃ?ನ ಕುರಿತು ವಿಶೇ? ಉಪನ್ಯಾಸ ನೀಡಿದ ಸಾಹಿತಿಗಳಾದ ಚಟ್ನಹಳ್ಳಿ ಮಹೇಶ್ ಅವರು, ಧರ್ಮದ ಏಕಮೇವ ಉದ್ಧಾರವೇ ಶ್ರೀಕೃ?ನ ಜನ್ಮಕ್ಕೆ ಕಾರಣ. ಜಗತ್ತಿನ ಸಂರಕ್ಷಕ ಶ್ರೀಕೃ?ನ ವಿಶೇ? ಗುಣಗಳು ಗಮನ ಸೆಳೆಯುತ್ತವೆ. ಇಂದಿಗೂ ಸಹ ಶ್ರೀಕೃ?ನ ವ್ಯಕ್ತಿತ್ವ ಮಾದರಿಯಾಗಿದೆ ಎಂದರು.

ಶ್ರೀಕೃ? ಉತ್ತಮ ರಾಜನೀತಿಜ್ಞನಾಗಿದ್ದು, ಸಹನೆ, ತಾಳ್ಮೆಯಂತಹ ಗುಣಗಳಿಂದ ವಿಶಿ?ವಾಗಿ ನಿಲ್ಲುತ್ತಾನೆ. ಕಲಿಯುಗದಲ್ಲಿ ನಡೆಯಬಹುದಾದ ವಿದ್ಯಮಾನಗಳ ಬಗ್ಗೆ ದ್ವಾಪರ ಯುಗದಲ್ಲಿಯೇ ಶ್ರೀಕೃಷ್ಣ ತಿಳಿಸಿದ್ದ. ಧರ್ಮ, ಪರಂಪರೆ, ಸಾತ್ವಿಕತೆಯ ರಕ್ಷಣೆಗೆ ಶ್ರೀಕೃ? ಕಾರಣನಾದ. ಶ್ರೀಕೃಷ್ಣನ ಸಂದೇಶವನ್ನು ಮನು? ತಿಳಿದುಕೊಂಡರೆ ಅಧಿಕಾರದ ಲಾಲಸೆ. ತಪ್ಪು ಕಲ್ಪನೆ. ಅಹಂಕಾರ. ಭಿನ್ನಾಭಿಪ್ರಾಯಗಳನ್ನು ತೊರೆದು ಸರಳ ಜೀವನ ಕಂಡುಕೊಳ್ಳಬಹುದು ಎಂದು ಹೇಳಿದರು.

ಉಪತಹಸೀಲ್ದಾರ್ ರಾಮ್‌ರಾವ್ ದೇಸಾಯಿ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಇದೇ ವೇಳೆ ಶ್ರೀಕೃ? ಹಾಗೂ ರಾಧೆಯ ವೇ?ಧಾರಿಗಳ ಸ್ಪರ್ಧೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರುಗು ತಂದ ಚಿಕ್ಕ ಮಕ್ಕಳು ಮಕ್ಕಳಿಗೆ ಪ್ರಶಂಸಾ ಪತ್ರವನ್ನು ವಿತರಿಸಲಾಯಿತು. ಸ್ವಾಗತಿಸಿದ ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ರಮೇಶ್ ಪ್ರಾಸ್ತ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಯಾದವ ಸಂಘದ ಅಧ್ಯಕ್ಷ ನಾಗರಾಜ್, ಉಪಾಧ್ಯಕ್ಷ ತಿಪ್ಪೇಸ್ವಾಮಿ, ಹಳ್ಳಿಕಾರ್ ಸಂಘದ ಜಿಲ್ಲಾ ಅಧ್ಯಕ್ಷ ಕೋಟೆ ಸೋಮಣ್ಣ, ಬಸವರಾಜ್ ಮುಂತಾದವರು ಉಪಸ್ಥಿತರಿದ್ದರು.

Lord Krishna dedicated his life to establishing religion.

 

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...