Home namma chikmagalur chikamagalur ಸಾವಿನ ಹೆಣ ಇಟ್ಟುಕೊಂಡು ಕೀಳು ಮಟ್ಟದ ರಾಜಕೀಯ
chikamagalurHomeLatest Newsnamma chikmagalur

ಸಾವಿನ ಹೆಣ ಇಟ್ಟುಕೊಂಡು ಕೀಳು ಮಟ್ಟದ ರಾಜಕೀಯ

Share
Oplus_16908288
Share

ಚಿಕ್ಕಮಗಳೂರು: ಇತ್ತೀಚೆಗೆ ನಡೆದ ಆನೆ ದಾಳಿಯಿಂದಾದ ಸಾವು ಮತ್ತು ಅದರ ಸುತ್ತ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಕೆಪಿಸಿಸಿ ವಕ್ತಾರ ರವೀಶ್ ಕ್ಯಾತನಬೀಡು ಅವರು ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ.

ನಮ್ಮ ಸರ್ಕಾರದ ಅವಧಿಯಲ್ಲಿ ಏನಾದರೂ ಲೋಪಗಳಾಗಿದ್ದರೆ ಅದನ್ನು ಒಪ್ಪಿಕೊಳ್ಳಲು ತಾವು ಸಿದ್ಧರಿರುವುದಾಗಿ ತಿಳಿಸಿದ ಅವರು, ಆದರೆ ಈ ಸೂಕ್ಷ್ಮ ವಿಷಯದಲ್ಲಿ ಮಾಜಿ ಶಾಸಕರಾದ ಜೀವರಾಜ್ ಮತ್ತು ಸುಧಾಕರ್ ಶೆಟ್ಟಿ ಅವರು ನಡೆದುಕೊಳ್ಳುತ್ತಿರುವ ರೀತಿ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಂದು ಸಾವು ಅಥವಾ ಹೆಣವನ್ನು ಇಟ್ಟುಕೊಂಡು ರಾಜಕೀಯ ಮಾಡುವುದು ಅತ್ಯಂತ ಕೆಳಮಟ್ಟದ ನಡೆ ಎಂದು ಅವರು ಟೀಕಿಸಿದ್ದಾರೆ.

ರಾಜಕೀಯ ಲಾಭಕ್ಕಿಂತ ಮಾನವೀಯತೆ ಮುಖ್ಯ ಹೆಣದ ಮುಂದೆ ರಾಜಕೀಯ ಮಾಡಿ ಗಳಿಸಿಕೊಳ್ಳುವಂಥದ್ದು ಯಾವುದೂ ಇಲ್ಲ ಎಂದು ಹೇಳಿದ ರವೀಶ್, ಆಂಬುಲೆನ್ಸ್‌ನಲ್ಲಿ ಹೆಣವನ್ನು ಕೊಂಡೊಯ್ಯಲು ಬಿಡದೆ ಅಧಿಕಾರದ ಹಪಹಪಿತನ ಪ್ರದರ್ಶಿಸುತ್ತಿರುವುದು ಖಂಡನೀಯ ಎಂದಿದ್ದಾರೆ.

ಕಾಡುಪ್ರಾಣಿಗಳಿಗೆ ಬಿಜೆಪಿ, ಕಾಂಗ್ರೆಸ್ ಅಥವಾ ಜೆಡಿಎಸ್ ಎಂಬ ಭೇದವಿಲ್ಲ ಹಾಗೂ ಅವುಗಳಿಗೆ ಯಾವುದೇ ಪಕ್ಷದ ಅಥವಾ ಜಾತಿಯ ಹಂಗಿಲ್ಲ ಎಂಬುದನ್ನು ಮರೆಯಬಾರದು ಎಂದು ಅವರು ಚಾಟಿ ಬೀಸಿದ್ದಾರೆ. ಆನೆ ಮತ್ತು ಮಾನವ ಸಂಘರ್ಷ ನಿರಂತರವಾಗಿದ್ದು, ಈ ಬಗ್ಗೆ ಅರಣ್ಯ ಸಚಿವರು ನಾಳೆಯೇ ಭೇಟಿ ನೀಡಿ ಚರ್ಚೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.

Low-level politics while holding the body of death

Share

Leave a comment

Leave a Reply

Your email address will not be published. Required fields are marked *

Don't Miss

ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರ ಬಂಧನ

ಚಿಕ್ಕಮಗಳೂರು : ಮನುಷ್ಯತ್ವಕ್ಕೆ ಮಸಿ ಬಳಿಯುವಂತೆ ವೃದ್ಧ ರೈತರೊಬ್ಬರ ಮೇಲೆ ಹಲ್ಲೆ ನಡೆಸಿ ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರನ್ನು ಚಿಕ್ಕಮಗಳೂರು ನಗರ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕುರಿಚಿಕ್ಕನಹಳ್ಳಿಯ ನಿಂಗೇಗೌಡ...

ಹೋಂ ಸ್ಟೇ’ನಲ್ಲಿ ಯುವತಿ ಸಾವು-ಮಾಲೀಕ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು : ತಾಲೂಕಿನ ಹಾಂದಿ ಗ್ರಾಮದ ‘ಹಿಪ್ಲಾ ಹೋಂ ಸ್ಟೇ’ನಲ್ಲಿ ನಡೆದಿದ್ದ ಯುವತಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ಕು ತಿಂಗಳ ಬಳಿಕ ಮಾಲೀಕ ಸುಧಾಕರ್ ವಿರುದ್ಧ ಅಲ್ಲೂರು ಪೊಲೀಸ್ ಠಾಣೆಯಲ್ಲಿ...

Related Articles

ಇಂದಿನಿಂದ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ

ಚಿಕ್ಕಮಗಳೂರು : ಶನಿವಾರದಿಂದ ರಾಜ್ಯಾದ್ಯಂತ 2025 26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು ಇದಕ್ಕೆ...

ವೃದ್ಧ ಮಹಿಳೆಯೊಬ್ಬರ ಚಿನ್ನದ ಸರ ಕಳವು

ಚಿಕ್ಕಮಗಳೂರು: ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಯುವಿಹಾರಕ್ಕೆ ತೆರಳಿದ್ದ ವೃದ್ಧ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ, ಹಲ್ಲೆ ನಡೆಸಿ...

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ

ಚಿಕ್ಕಮಗಳೂರು: ಕೆ.ಎಂ. ರಸ್ತೆಯ ಕತ್ರಿಮಾರಮ್ಮ ದೇವಸ್ಥಾನದ ಸಮೀಪವಿರುವ ಬಸ್ ನಿಲ್ದಾಣದಿಂದ ಸಖರಾಯಪಟ್ಟಣಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ...

ಶೃಂಗೇರಿಯಲ್ಲಿ ಮದುವೆ ಮಂಟಪದಲ್ಲೇ ಮುರಿದುಬಿದ್ದ ಮದುವೆ

ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದ ಈಡಿಗ ಸಮುದಾಯದ ಭವನದಲ್ಲಿ ನಡೆಯಬೇಕಿದ್ದ ವಿವಾಹವೊಂದು ಮದುವೆ ಮಂಟಪದಲ್ಲೇ...