Home Political News ಸಹಕಾರ ಸಂಘದ ಚುನಾವಣೆಯಲ್ಲಿ ಶಾಸಕರೇ ಸ್ಪರ್ಧೆ : ರಂಗೇರಿದ ಅಖಾಡ
Political News

ಸಹಕಾರ ಸಂಘದ ಚುನಾವಣೆಯಲ್ಲಿ ಶಾಸಕರೇ ಸ್ಪರ್ಧೆ : ರಂಗೇರಿದ ಅಖಾಡ

Share
Share

ಚಿಕ್ಕಮಗಳೂರು : ತರೀಕೆರೆ ಪಟ್ಟಣದ ಜನರಿಗೆ ಶ್ರೀ ರೇವಣ ಸಿದ್ದೇಶ್ವರ ಸಹಕಾರ ಸಂಘಕ್ಕೆ ನಿರ್ದೇಶಕರಾಗಬೇಕು. ಮತ್ತು ಪುರಸಭೆಗೆ ಒಮ್ಮೆಯಾದರೂ ಸದಸ್ಯನಾಗಿ ಮಾಜಿ ಎಂಬ ಬೋರ್ಡ್ ಇದ್ದರೆ ಸಾಕು ಎಂಬ ಮಹದಾಸೆ ಬಹುತೇಕರದ್ದು ಇಂತಹ ಆಸೆ ಈಗ ಶಾಸಕ ಶ್ರೀನಿವಾಸ್ ಗೆ ಶುರುವಾಗಿ ಚುನಾವಣೆಯ ಅಖಾಡಕ್ಕೆ ಇಳಿದು ರೇವಣ ಸಿದ್ದೇಶ್ವರ ಸಂಘದ ಹಣಾಹಣೊ ರಂಗೇರುವಂತೆ ಮಾಡಿದ್ದಾರೆ.

ಇದು ಎಂತ ಮೋಹ ಎಂತಹ ದಾಹ ವೋ ಅಥವಾ ಅಧಿಕಾರದ ಅಮಲು ಎಂಬುದು ಗೊತ್ತಾಗುತ್ತಿಲ್ಲ, ತರೀಕೆರೆ ರೇವಣ ಸಿದ್ದೇಶ್ವರ ಸಹಕಾರ ಸಂಘದ ಚುನಾವಣೆ ಬಂದರೆ ಒಂದು ರೀತಿಯ ಶಾಸಕರ ಚುನಾವಣೆಯಷ್ಟೇ ರಂಗು ಪಡೆಯುತ್ತದೆ, ಈ ಸಂಘ ಬಹುತೇಕ ಸಹಕಾರಿ ಧಿರೀಣರುಗಳ ಗರಡಿಮನೆ ಎಂದರೆ ತಪ್ಪಾಗಲಾರದು, ಇದೀಗ ಹಾಲಿ ಶಾಸಕ ಜಿ.ಹೆಚ್.ಶ್ರೀನಿವಾಸ್ ಸೊಸೈಟಿ ಚುನಾವಣೆಗೆ ಸ್ಪರ್ಧೆ ಮಾಡಿರುವುದು ಮುಂದೆ ಡಿ.ಸಿ.ಸಿ.ಬ್ಯಾಂಕ್ ಚುಕ್ಕಾಣಿ ಹಿಡಿಯಬೇಕು ಎಂಬ ಆಸೆ ಎಂಬುದರ ಮುನ್ಸೂಚನೆ ರೀತಿ ಗೋಚರಿಸುತ್ತಿದೆ, ತರೀಕೆರೆ ಮಾಜಿ ಶಾಸಕ ಡಿ.ಎಸ್.ಸುರೇಶ್ ಪ್ರಸ್ತುತ ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾಗಿದ್ದು ಇದನ್ನು ನೋಡಿ ಶ್ರೀನಿವಾಸ್ ಗೆ ಕಣ್ಣು ಕುಕ್ಕುತ್ತಿದೆ ಎಂದೇ ವಿಶ್ಲೇಷಣೆ ಮಾಡಲಾಗುತ್ತಿದೆ , ಅಧಿಕಾರ ಎಂಬ ಮಾಯೆ ಮುಂದೆ ಎಲ್ಲಾ ಗೌಣ ಎಂಬುದು ಈ ರೇವಣ ಸಿದ್ದೇಶ್ವರ ಸೊಸೈಟಿ ಚುನಾವಣೆಯ ಲಾಡಾಯಿಯಲ್ಲಿ ತಿಳಿಯಬಹುದು, ಆದರೆ ಡಿ.ಸಿ.ಸಿ ಬ್ಯಾಂಕ್ ಕನಸು ಹೊತ್ತಿರುವ ಶಾಸಕರ ಟೀಮ್ ಗೆ ಸೆಡ್ಡು ಹೊಡೆಯಲು ಮಾಜಿ ಶಾಸಕ ರ ಬೆಂಬಲಿಗರೂ ಭರ್ಜರಿ ತಯಾರಿ ನಡೆಸುತ್ತಿದ್ದಾರೆ

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ಸಿ.ಟಿ.ರವಿ ಸೋಲಿನ ಹತಾಶೆಯಿಂದ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ

ಚಿಕ್ಕಮಗಳೂರು: ಸಿ.ಟಿ.ರವಿ ಅವರು ಸೋಲಿನ ಹತಾಶೆಯಿಂದ ಎಚ್.ಡಿ.ತಮ್ಮಯ್ಯ ವಿರುದ್ಧ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಕಾಂಗ್ರೆಸ್‌...

20 ವರ್ಷ ಹೊರಗಿನವರೆ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿದ್ದಾರೆ

ಮೂಡಿಗೆರೆ:‘ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿರೋಧ ಪಕ್ಷಗಳು ಹತಾಶೆಯಿಂದ ಬಾಯಿ ಚಪಲಕ್ಕಾಗಿ ಮಾತನಾಡುತ್ತಿವೆ’ ಎಂದು...

ರಾಜ್ಯದಲ್ಲಿ ನವೆಂಬರ್ ಕ್ರಾಂತಿಯೋ ! ಭ್ರಾಂತಿಯೋ ?

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿ ಎರಡೂವರೆ ವರ್ಷ ಪೂರೈಸುತ್ತಿದೆ.ಸರ್ಕಾರ ರಚನೆಯಾದಾಗಿನಿಂದ ಇಲ್ಲಿಯವರೆಗೆ “ಮುಖ್ಯಮಂತ್ರಿ” ಬದಲಾಗುತ್ತಾರೆ...

ಶೃಂಗೇರಿ ಲಡಾಯಿ: ಶಾಸಕ ಟಿ.ಡಿ.ರಾಜೇಗೌಡ V/S ಜೀವರಾಜ್

ಶೃಂಗೇರಿ: ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮತ್ತು ಬಿಜೆಪಿ ಮಾಜಿ ಸಚಿವ ಶಾಸಕ ಜೀವರಾಜ್...