Home Political News ಸಹಕಾರ ಸಂಘದ ಚುನಾವಣೆಯಲ್ಲಿ ಶಾಸಕರೇ ಸ್ಪರ್ಧೆ : ರಂಗೇರಿದ ಅಖಾಡ
Political News

ಸಹಕಾರ ಸಂಘದ ಚುನಾವಣೆಯಲ್ಲಿ ಶಾಸಕರೇ ಸ್ಪರ್ಧೆ : ರಂಗೇರಿದ ಅಖಾಡ

Share
Share

ಚಿಕ್ಕಮಗಳೂರು : ತರೀಕೆರೆ ಪಟ್ಟಣದ ಜನರಿಗೆ ಶ್ರೀ ರೇವಣ ಸಿದ್ದೇಶ್ವರ ಸಹಕಾರ ಸಂಘಕ್ಕೆ ನಿರ್ದೇಶಕರಾಗಬೇಕು. ಮತ್ತು ಪುರಸಭೆಗೆ ಒಮ್ಮೆಯಾದರೂ ಸದಸ್ಯನಾಗಿ ಮಾಜಿ ಎಂಬ ಬೋರ್ಡ್ ಇದ್ದರೆ ಸಾಕು ಎಂಬ ಮಹದಾಸೆ ಬಹುತೇಕರದ್ದು ಇಂತಹ ಆಸೆ ಈಗ ಶಾಸಕ ಶ್ರೀನಿವಾಸ್ ಗೆ ಶುರುವಾಗಿ ಚುನಾವಣೆಯ ಅಖಾಡಕ್ಕೆ ಇಳಿದು ರೇವಣ ಸಿದ್ದೇಶ್ವರ ಸಂಘದ ಹಣಾಹಣೊ ರಂಗೇರುವಂತೆ ಮಾಡಿದ್ದಾರೆ.

ಇದು ಎಂತ ಮೋಹ ಎಂತಹ ದಾಹ ವೋ ಅಥವಾ ಅಧಿಕಾರದ ಅಮಲು ಎಂಬುದು ಗೊತ್ತಾಗುತ್ತಿಲ್ಲ, ತರೀಕೆರೆ ರೇವಣ ಸಿದ್ದೇಶ್ವರ ಸಹಕಾರ ಸಂಘದ ಚುನಾವಣೆ ಬಂದರೆ ಒಂದು ರೀತಿಯ ಶಾಸಕರ ಚುನಾವಣೆಯಷ್ಟೇ ರಂಗು ಪಡೆಯುತ್ತದೆ, ಈ ಸಂಘ ಬಹುತೇಕ ಸಹಕಾರಿ ಧಿರೀಣರುಗಳ ಗರಡಿಮನೆ ಎಂದರೆ ತಪ್ಪಾಗಲಾರದು, ಇದೀಗ ಹಾಲಿ ಶಾಸಕ ಜಿ.ಹೆಚ್.ಶ್ರೀನಿವಾಸ್ ಸೊಸೈಟಿ ಚುನಾವಣೆಗೆ ಸ್ಪರ್ಧೆ ಮಾಡಿರುವುದು ಮುಂದೆ ಡಿ.ಸಿ.ಸಿ.ಬ್ಯಾಂಕ್ ಚುಕ್ಕಾಣಿ ಹಿಡಿಯಬೇಕು ಎಂಬ ಆಸೆ ಎಂಬುದರ ಮುನ್ಸೂಚನೆ ರೀತಿ ಗೋಚರಿಸುತ್ತಿದೆ, ತರೀಕೆರೆ ಮಾಜಿ ಶಾಸಕ ಡಿ.ಎಸ್.ಸುರೇಶ್ ಪ್ರಸ್ತುತ ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾಗಿದ್ದು ಇದನ್ನು ನೋಡಿ ಶ್ರೀನಿವಾಸ್ ಗೆ ಕಣ್ಣು ಕುಕ್ಕುತ್ತಿದೆ ಎಂದೇ ವಿಶ್ಲೇಷಣೆ ಮಾಡಲಾಗುತ್ತಿದೆ , ಅಧಿಕಾರ ಎಂಬ ಮಾಯೆ ಮುಂದೆ ಎಲ್ಲಾ ಗೌಣ ಎಂಬುದು ಈ ರೇವಣ ಸಿದ್ದೇಶ್ವರ ಸೊಸೈಟಿ ಚುನಾವಣೆಯ ಲಾಡಾಯಿಯಲ್ಲಿ ತಿಳಿಯಬಹುದು, ಆದರೆ ಡಿ.ಸಿ.ಸಿ ಬ್ಯಾಂಕ್ ಕನಸು ಹೊತ್ತಿರುವ ಶಾಸಕರ ಟೀಮ್ ಗೆ ಸೆಡ್ಡು ಹೊಡೆಯಲು ಮಾಜಿ ಶಾಸಕ ರ ಬೆಂಬಲಿಗರೂ ಭರ್ಜರಿ ತಯಾರಿ ನಡೆಸುತ್ತಿದ್ದಾರೆ

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...