Home Political News ಸಹಕಾರ ಸಂಘದ ಚುನಾವಣೆಯಲ್ಲಿ ಶಾಸಕರೇ ಸ್ಪರ್ಧೆ : ರಂಗೇರಿದ ಅಖಾಡ
Political News

ಸಹಕಾರ ಸಂಘದ ಚುನಾವಣೆಯಲ್ಲಿ ಶಾಸಕರೇ ಸ್ಪರ್ಧೆ : ರಂಗೇರಿದ ಅಖಾಡ

Share
Share

ಚಿಕ್ಕಮಗಳೂರು : ತರೀಕೆರೆ ಪಟ್ಟಣದ ಜನರಿಗೆ ಶ್ರೀ ರೇವಣ ಸಿದ್ದೇಶ್ವರ ಸಹಕಾರ ಸಂಘಕ್ಕೆ ನಿರ್ದೇಶಕರಾಗಬೇಕು. ಮತ್ತು ಪುರಸಭೆಗೆ ಒಮ್ಮೆಯಾದರೂ ಸದಸ್ಯನಾಗಿ ಮಾಜಿ ಎಂಬ ಬೋರ್ಡ್ ಇದ್ದರೆ ಸಾಕು ಎಂಬ ಮಹದಾಸೆ ಬಹುತೇಕರದ್ದು ಇಂತಹ ಆಸೆ ಈಗ ಶಾಸಕ ಶ್ರೀನಿವಾಸ್ ಗೆ ಶುರುವಾಗಿ ಚುನಾವಣೆಯ ಅಖಾಡಕ್ಕೆ ಇಳಿದು ರೇವಣ ಸಿದ್ದೇಶ್ವರ ಸಂಘದ ಹಣಾಹಣೊ ರಂಗೇರುವಂತೆ ಮಾಡಿದ್ದಾರೆ.

ಇದು ಎಂತ ಮೋಹ ಎಂತಹ ದಾಹ ವೋ ಅಥವಾ ಅಧಿಕಾರದ ಅಮಲು ಎಂಬುದು ಗೊತ್ತಾಗುತ್ತಿಲ್ಲ, ತರೀಕೆರೆ ರೇವಣ ಸಿದ್ದೇಶ್ವರ ಸಹಕಾರ ಸಂಘದ ಚುನಾವಣೆ ಬಂದರೆ ಒಂದು ರೀತಿಯ ಶಾಸಕರ ಚುನಾವಣೆಯಷ್ಟೇ ರಂಗು ಪಡೆಯುತ್ತದೆ, ಈ ಸಂಘ ಬಹುತೇಕ ಸಹಕಾರಿ ಧಿರೀಣರುಗಳ ಗರಡಿಮನೆ ಎಂದರೆ ತಪ್ಪಾಗಲಾರದು, ಇದೀಗ ಹಾಲಿ ಶಾಸಕ ಜಿ.ಹೆಚ್.ಶ್ರೀನಿವಾಸ್ ಸೊಸೈಟಿ ಚುನಾವಣೆಗೆ ಸ್ಪರ್ಧೆ ಮಾಡಿರುವುದು ಮುಂದೆ ಡಿ.ಸಿ.ಸಿ.ಬ್ಯಾಂಕ್ ಚುಕ್ಕಾಣಿ ಹಿಡಿಯಬೇಕು ಎಂಬ ಆಸೆ ಎಂಬುದರ ಮುನ್ಸೂಚನೆ ರೀತಿ ಗೋಚರಿಸುತ್ತಿದೆ, ತರೀಕೆರೆ ಮಾಜಿ ಶಾಸಕ ಡಿ.ಎಸ್.ಸುರೇಶ್ ಪ್ರಸ್ತುತ ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾಗಿದ್ದು ಇದನ್ನು ನೋಡಿ ಶ್ರೀನಿವಾಸ್ ಗೆ ಕಣ್ಣು ಕುಕ್ಕುತ್ತಿದೆ ಎಂದೇ ವಿಶ್ಲೇಷಣೆ ಮಾಡಲಾಗುತ್ತಿದೆ , ಅಧಿಕಾರ ಎಂಬ ಮಾಯೆ ಮುಂದೆ ಎಲ್ಲಾ ಗೌಣ ಎಂಬುದು ಈ ರೇವಣ ಸಿದ್ದೇಶ್ವರ ಸೊಸೈಟಿ ಚುನಾವಣೆಯ ಲಾಡಾಯಿಯಲ್ಲಿ ತಿಳಿಯಬಹುದು, ಆದರೆ ಡಿ.ಸಿ.ಸಿ ಬ್ಯಾಂಕ್ ಕನಸು ಹೊತ್ತಿರುವ ಶಾಸಕರ ಟೀಮ್ ಗೆ ಸೆಡ್ಡು ಹೊಡೆಯಲು ಮಾಜಿ ಶಾಸಕ ರ ಬೆಂಬಲಿಗರೂ ಭರ್ಜರಿ ತಯಾರಿ ನಡೆಸುತ್ತಿದ್ದಾರೆ

Share

Leave a comment

Leave a Reply

Your email address will not be published. Required fields are marked *

Don't Miss

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

Related Articles

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ಡಿ.ಕೆ.ಗೆ ಪ್ರಾರಂಭದಲ್ಲಿ ಡಿಚ್ಚಿ ! ಹರಿ ಬ್ರೇಕ್, ಸಿದ್ದು ಸ್ಟೀರಿಂಗ್ ಯಾವ ಕಡೆ ತಿರುಗುತ್ತದೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾರನ್ನು ನಂಬಿದ್ದರು ಅವರೇ ಕೈ ಕೊಡುವ ಸೂಚನೆ ಅರಿತು ರಾಹುಲ್...