Home namma chikmagalur chikamagalur ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶ
chikamagalurHomeLatest Newsnamma chikmagalur

ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶ

Share
Share

ಕಳಸ: ಸರ್ಕಾರದ ಬೇಜವಾಬ್ದಾರಿತನ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶದ ತೊಡೆ ತಟ್ಟಿದ್ದಾರೆ.

ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಕೋಡು ಕುಗ್ರಾಮದ ಜನರಿಗೆ ಮಾತ್ರ ಇದುವರೆಗೂ ರಸ್ತೆ ಭಾಗ್ಯ ಸಿಕ್ಕಿಲ್ಲ. ಈ ಕುರಿತು ಹತ್ತಾರು ಬಾರಿ ಸರ್ಕಾರ ಮತ್ತು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿ ಸಾಕಾದ ಗ್ರಾಮಸ್ಥರು, ಕೊನೆಗೆ ತಾವೇ ರಸ್ತೆ ದುರಸ್ತಿಗೆ ಇಳಿಯುವ ಮೂಲಕ ವ್ಯವಸ್ಥೆಗೆ ಚಾಟಿ ಬೀಸಿದ್ದಾರೆ.

ಕಳಸದಿಂದ ಐದಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಈ ಪ್ರಮುಖ ರಸ್ತೆ ಹಳ್ಳಿಗರ ದೈನಂದಿನ ಬದುಕಿಗೆ ಅತ್ಯಂತ ಅನಿವಾರ್ಯವಾಗಿದೆ. ಆದರೆ ರಸ್ತೆ ಸಂಪೂರ್ಣ ಹದಗೆಟ್ಟಿರುವುದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರತಿನಿತ್ಯ 8 ರಿಂದ 10 ಕಿಲೋಮೀಟರ್ ನಡೆದುಕೊಂಡೇ ಬರಬೇಕಾದ ದುಸ್ಥಿತಿ ಇದೆ.

ಅದರಲ್ಲೂ ಮಳೆಗಾಲದಲ್ಲಿ ದಾಖಲೆ ಮಳೆ ಬೀಳುವ ಕಳಸ ತಾಲೂಕಿನಲ್ಲಿ ಈ ಭಾಗದ ಪರಿಸ್ಥಿತಿ ಮತ್ತಷ್ಟು ಭೀಕರವಾಗುತ್ತದೆ. ತುರ್ತು ಸಂದರ್ಭ ಎದುರಾದರೆ ಗ್ರಾಮಕ್ಕೆ ಬರಲು ಯಾವುದೇ ವಾಹನ ಸವಾರರು ಸಿದ್ಧರಿರುವುದಿಲ್ಲ. ಇಷ್ಟೇ ಅಲ್ಲದೆ, ವಿದ್ಯುತ್ ಇಲ್ಲದ ಸಮಯದಲ್ಲಿ ತುರ್ತು ಪರಿಸ್ಥಿತಿಯಲ್ಲಿ ಯಾರಿಗಾದರೂ ಕರೆ ಮಾಡೋಣ ಎಂದರೆ ನೆಟ್ವರ್ಕ್‌ ಕೂಡ ಸಿಗುವುದಿಲ್ಲ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಪ್ರತಿ ವರ್ಷ ಜನಪ್ರತಿನಿಧಿಗಳಿಗೆ ಮನವಿ ಮಾಡಿ ಸುಸ್ತಾಗಿರುವ ಮಲೆನಾಡಿಗರು, ಪ್ರತಿ ಮಳೆಗಾಲದಲ್ಲೂ ತಾವೇ ರಸ್ತೆಯನ್ನು ದುರಸ್ತಿ ಮಾಡಿಕೊಳ್ಳುತ್ತಾ ಬಂದಿದ್ದಾರೆ. ಈ ಬಾರಿಯೂ ವ್ಯವಸ್ಥೆಯನ್ನು ನಂಬಿ ಪ್ರಯೋಜನವಿಲ್ಲ ಎಂದು ಅರಿತು, ಇಡೀ ಹಳ್ಳಿಗರೆಲ್ಲ ಒಟ್ಟಾಗಿ ಸೇರಿ ರಸ್ತೆಯ ಗುಂಡಿಗಳನ್ನು ಮುಚ್ಚಿ ಸಂಚಾರ ಯೋಗ್ಯವಾಗಿ ಮಾಡಿಕೊಂಡಿದ್ದಾರೆ.

Malnadi residents outraged by government negligence

Share

Leave a comment

Leave a Reply

Your email address will not be published. Required fields are marked *

Don't Miss

ಸಿಐಡಿ ಪೊಲೀಸ್ ರಿಂದ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿ ವಶ

ಚಿಕ್ಕಮಗಳೂರು : ಅಕ್ರಮವಾಗಿ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ವಶಕ್ಕೆ ಪಡೆದಿದೆ ನಗರದ ಟಿಪ್ಪುನಗರದ ಚಾಮುಂಡಿ ಕಾಫಿ ಕ್ಯೂರಿಂಗ್ ಹಿಂಭಾಗದ ರಾಜಸ್ತಾನ ಕುಳ್ಳಿ ರಸ್ತೆಯ...

ಸಖರಾಯಪಟ್ಟಣದಲ್ಲಿ ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ

ಕಡೂರು: ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದ ಎಂದು ಭಾವಿಸಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ ಮಾಡಿರುವುದನ್ನು ಸಖರಾಯಪಟ್ಟಣ ಪೊಲೀಸರು ಪತ್ತೆ ಮಾಡಿದ್ದಾರೆ. ಜೂನ್ 13ರ ರಾತ್ರಿ ಸಖರಾಯಪಟ್ಟಣ ಪೊಲೀಸ್...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ರೂಬೆನ್ ಮೊಸಸ್ ಗೆ ನ್ಯಾಷನಲ್ ಬೆಸ್ಟ್ ಸೋಷಿಯಲ್ ವರ್ಕರ್ ಅವಾರ್ಡ್ 

ಚಿಕ್ಕಮಗಳೂರು: ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ರೂಬೆನ್ ಮೊಸಸ್ ರವರಿಗೆ ನ್ಯಾಷನಲ್ ಬೆಸ್ಟ್ ಸೋಷಿಯಲ್ ವರ್ಕರ್ ಅವಾರ್ಡ್ ದೊರೆತಿದೆ....

ಹಿರಿಯ ನಾಗರಿಕರಿಗೆ ಪಿಂಚಣಿ ಸೌಲಭ್ಯ ನೀಡಲು ಮನವಿ

ಚಿಕ್ಕಮಗಳೂರು:  ಹಿರಿಯ ನಾಗರೀಕರಿಗೆ ಸಂಧ್ಯಾ ಸುರಕ್ಷಾ, ವಿಧವಾ ಹಾಗೂ ಅಂಗವಿಕಲ ವೇತನವನ್ನು ಒದಗಿಸಿಕೊಡಬೇಕು ಎಂದು ಆಗ್ರಹಿಸಿ...

ಜಲಾಶಯದ ನೀರು ಕುಡಿಯುವ ನೀರಿಗೆ ಬಳಕೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಕ್ಷೀಣಿಸುತ್ತಿದ್ದು,...