Home ದೇವಾಲಯಗಳಲ್ಲಿ ಕಳವು ವ್ಯಕ್ತಿ ಸೆರೆ: ೧ ಲಕ್ಷ ರೂ.ವಶ
HomeKadurLatest Newsnamma chikmagalur

ದೇವಾಲಯಗಳಲ್ಲಿ ಕಳವು ವ್ಯಕ್ತಿ ಸೆರೆ: ೧ ಲಕ್ಷ ರೂ.ವಶ

Share
Share

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ದೇವಸ್ಥಾನಗಳಲ್ಲಿ ಕಳ್ಳತನ ಮಾಡುತ್ತಿದ್ದ ಎಂಟು ಪ್ರಕರಣಗಳಲ್ಲಿಆರೋಪಿಯನ್ನು ಬಂಧಿಸಿರುವ ಪೊಲೀಸರು ಒಂದು ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ

ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ. ವಿಕ್ರಮ್ ಅಮಟೆ, ಉಪಪೊಲೀಸ್ ಮುಖ್ಯಾಧಿಕಾರಿ ಹೆಚ್.ಎಂ.ಶೈಲೇಂದ್ರ,ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ವಿ.ಎಸ್.ಹಾಲಮೂರ್ತಿರಾವ್ ಇವರುಗಳ ಮಾರ್ಗದರ್ಶನದಲ್ಲಿ ಕಡೂರು ವೃತ್ತನಿರೀಕ್ಷಕ ರಫೀಕ್ ನೇತೃತ್ವದಲ್ಲಿ ಜಿಲ್ಲಾದ್ಯಂತ ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವಹಿನ್ನಲೆಯಲ್ಲಿ ಆರೋಪಿಗಳನ್ನು ಪತ್ತೆ ಮಾಡಲು ತಂಡವನ್ನು ರಚಿಸಲಾಗಿತ್ತು.

ಕಾರ್ಯಪ್ರವೃತ್ತವಾದ ತಂಡವು ವಿವಿಧ ಆಯಾಮಗಳಿಂದ ಮಾಹಿತಿ ಕಲೆ ಹಾಕಿ ವೈಜ್ಞಾನಿಕ ತನಿಖೆ ನಡೆಸಿ ಆರೋಪಿ ಬಳ್ಳಾರಿ ನಗರ ಈಗ ಚಿಕ್ಕಮಗಳೂರು ನಗರದ ಟಿಪ್ಪುನಗರದಲ್ಲಿ ವಾಸವಾಗಿದ್ದ ಮೊಹಮ್ಮದ್ ಸಾಂ ಸದ್ದಾಂನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಈತನ ಮೇಲೆ ಈ ಹಿಂದೆ ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಳ್ಳತನ ಹಾಗೂ ದರೋಡೆ ಪ್ರಕರಣಗಳು ದಾಖಲಾಗಿರುವುದು ಕಂಡುಬಂದಿರುತ್ತದೆ.

ಈ ವ್ಯಕ್ತಿಯ ತನ್ನ ಸಹಚರನೊಂದಿಗೆ ಕಡೂರು, ಯಗಟಿ, ಬೀರೂರು, ಸಖರಾಯಪಟ್ಟಣ, ಅಜ್ಜಂಪುರ, ಚಿಕ್ಕಮಗಳೂರು ನಗರ, ಬಸವನಹಳ್ಳಿ, ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಹಲವಾರು ದೇವಸ್ಥಾನಗಳಲ್ಲಿ ಕಳ್ಳತನ ಮಾಡಿರುವುದು ವಿಚಾರಣೆಯಲ್ಲಿ ತಿಳಿದು ಬಂದಿದೆ. ಕೃತ್ಯಕ್ಕೆ ಬಳಸಿದ್ದ ಬೈಕ್, ಕಳ್ಳತನ ಮಾಡಿದ್ದ ಕಾಣಿಕೆ ಹುಂಡಿ ಮತ್ತು ವಿವಿಧ ಮುಖಬೆಲೆಯ ಚಿಲ್ಲರೆ ಹಣವನ್ನು ವಶಕ್ಕೆ ಪಡೆಯಲಾಗಿದೆ.

ಇವುಗಳ ಒಟ್ಟು ಮೌಲ್ಯ ಸುಮಾರು ೧ ಲಕ್ಷ, ರೂ.ಗಳಾಗಿದೆ. ಈತನ ಬಂಧನದಿಂದ ಕಡೂರು ಠಾಣೆಯಲ್ಲಿ ೧ ಕಳ್ಳತನ ಪ್ರಕರಣ. ಹಾಗೂ ಚಿಕ್ಕಮಗಳೂರು ಜಿಲ್ಲೆಯ ವಿವಿದ ಪೊಲೀಸ್ ಠಾಣೆಗ ಲ್ಲಿ ದಾಖಲಾಗಿದ್ದ ೭ ಪ್ರಕರಣಗಳು ಸೇರಿದಂತೆ ಒಟ್ಟು ೮ ಕಳ್ಳತನ ಪ್ರಕರಣಗಳು ಪತ್ತೆಯಾಗಿರುತ್ತವೆ.

ಆರೋಪಿ ಪತ್ತೆಕಾರ್ಯದಲ್ಲಿ ಕಡೂರು ಪೊಲೀಸ್ ಠಾಣೆಯ ಪಿಎಸ್‌ಐ ಸಿ.ಸಿ.ಪವನ್‌ಕುಮಾರ್, ಡಿ.ಹೆಚ್.ಧನಂಜಯ್, ಲೀಲಾವತಿ ಮತ್ತು ಸಿಬ್ಬಂದಿಗಳಾದ, ಕುಚೇಲ, ಮಧುಕುಮಾರ್, ಬಿ.ಸಿ. ಹರೀಶ್, ಧನಪಾಲ್ ನಾಯ್ಕ, ಸ್ವಾಮಿ, ಪರಮೇಶ್, ರಬ್ಬಾನಿ ಮತ್ತು ನಯಾಜ್ ತಾಂತ್ರಿಕ ವಿಭಾಗದ ಡಿ ಪಿ ಓ. ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಶ್ರಮಿಸಿರುತ್ತಾರೆ.

ಪ್ರಕರಣಗಳಲ್ಲಿ ಯಶಸ್ವಿಯಾಗಿ ಆರೋಪಿಯನ್ನು ಪತ್ತೆ ಮಾಡಿ ಕದ್ದ ಮಾಲನ್ನು ವಶಕ್ಕೆ ಪಡೆದು ಜಿಲ್ಲೆಯ ಒಟ್ಟು ೦೮ ಪ್ರಕರಣಗಳನ್ನು ಭೇದಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲು ಶ್ರಮಿಸಿದ ಅಪರಾಧ ಪತ್ತೆ ತಂಡದ ಅಧಿಕಾರಿ ಸಿಬ್ಬಂದಿಯವರನ್ನು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಚಿಶ್ಲಾಘಿಸಿ ಬಹುಮಾನ ಘೋಷಿಸಿದ್ದಾರೆ.

Man arrested for stealing from temples: Rs 1 lakh seized

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...