Home Crime News ಕತ್ತು ಕೊಯ್ದುಕೊಂಡು ಸ್ನೇಹಿತರಿಗೆ ವಿಡಿಯೊ ಕಾಲ್ ಮಾಡಿದ ಯುವಕ
Crime News

ಕತ್ತು ಕೊಯ್ದುಕೊಂಡು ಸ್ನೇಹಿತರಿಗೆ ವಿಡಿಯೊ ಕಾಲ್ ಮಾಡಿದ ಯುವಕ

Share
Share

ಚಿಕ್ಕಮಗಳೂರು : ಬ್ಲೇಡ್ ನಿಂದ ಕತ್ತು ಕೊಯ್ದುಕೊಂಡು ಯುವಕನೊರ್ವ ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿದ್ದಾನೆ,
ಹೆಂಡ್ತಿ ಜೊತೆಯಲ್ಲಿನ ಜಗಳದಿಂದ ಮನನೊಂದು ಈತ ಆತ್ಮಹತ್ಯೆ ಯತ್ನ ಮಾಡಿದ್ದಾನೆ.

ಹಾಸನದಿಂದ ಬಂದು ಕಾಫಿನಾಡಲ್ಲಿ ಆತ್ಮಹತ್ಯೆಗೆ ಯತ್ನ ಮಾಡಿದ್ದು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಏಕಲವ್ಯ ವಸತಿ ಶಾಲೆ ಬಳಿ ಘಟನೆ ನಡೆದಿದೆ,
ಮನು ಎಂಬಾತನೇ ಹಾಸನದಿಂದ ಬಂದು ಚಾರ್ಮಾಡಿ ಘಾಟಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ

ಘಟನೆ ತಿಳಿದ ಸ್ನೇಹಿತರು ಕೂಡಲೇ 112 ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ, ಕೂಡಲೇ ಸ್ಥಳಕ್ಕೆ ಬೇಡಿ ನೀಡಿದ ಪೊಲೀಸರು ಆತನನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ
ತಕ್ಷಣ ಪೊಲೀಸರು ಅಲರ್ಟ್ ಆಗಿದ್ದರಿಂದ‌ ಸಾವಿನಿಂದ ಮನು ಪಾರಾಗಿದ್ದಾನೆ,

ಬ್ಲೇಡ್ ನಿಂದ ಕತ್ತು ಕೊಯ್ದುಕೊಂಡು ತೀವ್ರ ರಕ್ತ ಸುರಿಯುತ್ತಿದ್ದಾಗ ಕೂಡಲೇ ಬಣಕಲ್‌ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಪೊಲೀಸರು ಕೊಡಿಸಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ಆತನನ್ನು ರವಾನೆ ಮಾಡಿದ್ದಾರೆ, ಕುತ್ತಿಗೆಗೆ ಹೊಲಿಗೆ ಹಾಕಿಸಿ ಅವನ ಹೆಂಡತಿಗೆ ಕರೆ ಮಾಡಿ ಕರೆಸಿದ ಪೊಲೀಸರು
ಗಂಡ-ಹೆಂಡತಿಗೆ ಬುದ್ಧಿ ಹೇಳಿ ಹಾಸನಕ್ಕೆ ವಾಪಸ್ ಕಳುಹಿಸಿ ಕೊಟ್ಟಿದ್ದಾರೆ, ಬಣಕಲ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...

ಗಾಂಜಾ ಸೇವಿಸಿ ರಂಪಾಟ – ಏಳು ಮಂದಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಾದಕ ದ್ರವ್ಯ ಸೇವನೆ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಚುರುಕುಗೊಳಿಸಿದ್ದು ಸಾರ್ವಜನಿಕ ಸ್ಥಳಗಳಲ್ಲಿ...

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು...