ಚಿಕ್ಕಮಗಳೂರು: ನಿಂತಿದ್ದ ಕಂಟೇನರ್ ಗೆ ಕಾರು ಅಪ್ಪಳಿಸಿ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ. ಫೆ 17 ರ ಬೆಳಗಿನ ಜಾವ ಸುಮಾರು 02.10 ಗಂಟೆಗೆ ದೀಪಕ್ ಕಾರಿನಲ್ಲಿ ಹೌಸಿಂಗ್ ಬೋರ್ಡ್ ನಲ್ಲಿರುವ ಬಾಡಿಗೆ ಮನೆಗೆ ತೆರಳುತ್ತಿದ್ದರು.
ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್ ಸಮೀಪದ ಮಹಾಲಕ್ಷ್ಮೀ ದೇವಸ್ಥಾನದ ಮುಂಭಾಗ ಕಂಟೇನರ್ ಅನ್ನು ಯಾವುದೇ ಸಿಗ್ನಲ್ ಇಲ್ಲದೇ ನಿಲ್ಲಿಸಲಾಗಿತ್ತು ಎನ್ನಲಾಗಿದೆ.
ಈ ವಾಹನ ಕಾಣಿಸದೇ ದೀಪಕ್ ರವರ ಕಾರು ಕಂಟೇನರ್ ಗೆ ಡಿಕ್ಕಿಯಾಗಿ ತೀವ್ರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ .
ಕಂಟೈನರ್ ವಾಹನದಲ್ಲಿದ್ದ ಚಾಲಕ ಗಾಯಗೊಂಡಿದ್ದವರನ್ನು ಉಪಚರಿಸಿ ಚಿಕಿತ್ಸೆ ಕೊಡಿಸದೆ ಸ್ಥಳದಿಂದ ಪರಾರಿ ಆಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Man dies after car crashes into parked container
Leave a comment