Home namma chikmagalur chikamagalur ನಿಂತಿದ್ದ ಕಂಟೇನರ್ ಗೆ ಕಾರು ಡಿಕ್ಕಿ-ವ್ಯಕ್ತಿ ಸಾವು
chikamagalurHomeLatest Newsnamma chikmagalur

ನಿಂತಿದ್ದ ಕಂಟೇನರ್ ಗೆ ಕಾರು ಡಿಕ್ಕಿ-ವ್ಯಕ್ತಿ ಸಾವು

Share
Share

ಚಿಕ್ಕಮಗಳೂರು: ನಿಂತಿದ್ದ ಕಂಟೇನರ್ ಗೆ ಕಾರು ಅಪ್ಪಳಿಸಿ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ. ಫೆ 17 ರ ಬೆಳಗಿನ ಜಾವ ಸುಮಾರು 02.10 ಗಂಟೆಗೆ ದೀಪಕ್ ಕಾರಿನಲ್ಲಿ ಹೌಸಿಂಗ್ ಬೋರ್ಡ್ ನಲ್ಲಿರುವ ಬಾಡಿಗೆ ಮನೆಗೆ ತೆರಳುತ್ತಿದ್ದರು.

ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್ ಸಮೀಪದ ಮಹಾಲಕ್ಷ್ಮೀ ದೇವಸ್ಥಾನದ ಮುಂಭಾಗ ಕಂಟೇನರ್ ಅನ್ನು ಯಾವುದೇ ಸಿಗ್ನಲ್ ಇಲ್ಲದೇ ನಿಲ್ಲಿಸಲಾಗಿತ್ತು ಎನ್ನಲಾಗಿದೆ.

ಈ ವಾಹನ ಕಾಣಿಸದೇ ದೀಪಕ್ ರವರ ಕಾರು ಕಂಟೇನರ್ ಗೆ ಡಿಕ್ಕಿಯಾಗಿ ತೀವ್ರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ .

ಕಂಟೈನರ್ ವಾಹನದಲ್ಲಿದ್ದ ಚಾಲಕ ಗಾಯಗೊಂಡಿದ್ದವರನ್ನು ಉಪಚರಿಸಿ ಚಿಕಿತ್ಸೆ ಕೊಡಿಸದೆ ಸ್ಥಳದಿಂದ ಪರಾರಿ ಆಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Man dies after car crashes into parked container

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...