Home namma chikmagalur chikamagalur ರಸ್ತೆ ಅಪಘಾತದಲ್ಲಿ ಗಾಯವಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು
chikamagalurCrime NewsHomeLatest Newsnamma chikmagalur

ರಸ್ತೆ ಅಪಘಾತದಲ್ಲಿ ಗಾಯವಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Share
Share

ಕೊಪ್ಪ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಹಮ್ಮದ್ ರಫೀಕ್ ಎಂಬ 32 ವರ್ಷದ ಯುವಕ ದುರಂತ ಅಂತ್ಯ ಕಂಡಿರುವ ಘಟನೆ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

ಹೊನಗೋಡಿನ ದೇವಸ್ಥಾನದ ಬಳಿ ಮೇ 25 ರಂದು ಹರಿಹರಪುರದ ಮತ್ವಾನಿಯಲ್ಲಿರುವ ನಾದಿನಿಯ ಮನೆಗೆ ಸ್ಕೂಟಿಯಲ್ಲಿ ಬಂದಿದ್ದ ರಫೀಕ್, ಮರುದಿನ ಬೆಳಗಿನ ಜಾವ ಶೃಂಗೇರಿಯ ತಮ್ಮ ಮನೆಗೆ ವಾಪಸ್ ಹೊರಟಿದ್ದರು.

ಈ ವೇಳೆ ಹೊನಗೋಡು ರಸ್ತೆಯಲ್ಲಿ ಅತಿ ವೇಗ ಮತ್ತು ಅಜಾಗರೂಕತೆಯಿಂದ ಬಂದ ಅಪರಿಚಿತ ವಾಹನವೊಂದು ಇವರ ಸ್ಕೂಟಿಗೆ ಜೋರಾಗಿ ಡಿಕ್ಕಿ ಹೊಡೆದು, ಗಾಯಾಳುವನ್ನು ಉಪಚರಿಸದೆ ಸ್ಥಳದಿಂದ ಪರಾರಿಯಾಗಿದೆ.

ಅಪಘಾತದಿಂದ ತಲೆ ಹಾಗೂ ಕಾಲಿಗೆ ತೀವ್ರ ಪೆಟ್ಟಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ರಫೀಕ್ ಅವರನ್ನು ಆ ಮಾರ್ಗವಾಗಿ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಸಹೃದಯಿ ಪ್ರವಾಸಿಗರು ಗಮನಿಸಿ, ತಕ್ಷಣ ತಮ್ಮದೇ ವಾಹನದಲ್ಲಿ ಶೃಂಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಆದರೆ ಪರಿಸ್ಥಿತಿ ಗಂಭೀರವಾಗಿದ್ದರಿಂದ ವೈದ್ಯರ ಸೂಚನೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಶೃಂಗೇರಿಯ ಶ್ರೀ ಅಭಿನವ ವಿದ್ಯಾ ತೀರ್ಥ ಆಸ್ಪತ್ರೆಗೆ ತಕ್ಷಣವೇ ಅಂಬುಲೆನ್ಸ್ ಮೂಲಕ ಕರೆದೊಯ್ಯಲಾಯಿತಾದರೂ, ಬೆಳಿಗ್ಗೆ ಸುಮಾರು 6-30 ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಕೊನೆಯುಸಿರೆಳೆದಿದ್ದಾರೆ.

ಮೃತರ ತಂದೆ ಅಬ್ದುಲ್ ರಹೀಂ ನೀಡಿದ ಲಿಖಿತ ದೂರಿನನ್ವಯ ಹರಿಹರಪುರ ಪೊಲೀಸರು ಹಿಟ್ ಅಂಡ್ ರನ್ ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತ ಎಸಗಿ ಮಾನವೀಯತೆಯೇ ಇಲ್ಲದೆ ಓಡಿಹೋದ ಅಪರಿಚಿತ ವಾಹನ ಮತ್ತು ಅದರ ಚಾಲಕನ ಪತ್ತೆಗಾಗಿ ತೀವ್ರ ಜಾಲ ಬೀಸಿದ್ದಾರೆ.

Man injured in road accident dies due to lack of treatment

Share

Leave a comment

Leave a Reply

Your email address will not be published. Required fields are marked *

Don't Miss

ಮೂರು ವರ್ಷಗಳ ಅವಧಿಯಲ್ಲಿ ಮೂಲ ಸೌಕರ್ಯಕ್ಕೆ ಆದ್ಯತೆ

ಚಿಕ್ಕಮಗಳೂರು: ಮೂರು ವರ್ಷಗಳ ಅವಧಿಯಲ್ಲಿ ಕ್ಷೇತ್ರದ ರಸ್ತೆ ಅಭಿವೃದ್ಧಿ, ಸೇತುವೆ, ಬಸ್ ನಿಲ್ದಾಣ ನಿರ್ಮಾಣ ಸೇರಿ ಮೂಲ ಸೌಕರ್ಯಕ್ಕೆ ಆದ್ಯತೆ ನೀಡಲಾಗಿದೆ. ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿಯಲ್ಲೂ ಮುಂಚೂಣಿ ಸಾಧಿಸಲಾಗಿದೆ ಎಂದು...

ಚಿಕಿತ್ಸೆ ಸಿಗದೆ 24 ಗಂಟೆಗಳ ಕಾಲ ಆಂಬುಲೆನ್ಸ್‌ನಲ್ಲೇ ನರಕಯಾತನೆ

ಚಿಕ್ಕಮಗಳೂರು: ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಹಾಗೂ ಅತ್ಯಂತ ಕರುಣಾಜನಕ ಘಟನೆಯೊಂದು ಚಿಕ್ಕಮಗಳೂರು ತಾಲೂಕಿನ ಆಲ್ಲೂರಿನಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಯುವಕನಿಗೆ ವಿವಿಧ ಆಸ್ಪತ್ರೆಗಳಲ್ಲಿ ಬೆಡ್ ಮತ್ತು ಸರಿಯಾದ ಸಮಯಕ್ಕೆ...

Related Articles

ಕಂದಾಯ-ಅರಣ್ಯ ಇಲಾಖೆ ಭೂಮಿ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಧರಣಿ

ಚಿಕ್ಕಮಗಳೂರು: ಕಂದಾಯ ಮತ್ತು ಅರಣ್ಯ ಇಲಾಖೆ ಭೂಮಿ ಸಮಸ್ಯೆ ಶೀಘ್ರ ಪರಿಹರಿಸುವಂತೆ ಒತ್ತಾಯಿಸಿ ಜಿಲ್ಲಾ ನಾಗರಿಕ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ರೈತರು ಎದುರಿಸುತ್ತಿರುವ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ...

ತೋಟದ ಗೋಡೋನ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಕಳ್ಳತನ

ಎನ್.ಆ‌ರ್.ಪುರ: ತೋಟದ ಗೋಡೋನ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಕಳ್ಳತನವಾಗಿರುವ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣಾ...

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಬಲಿ

ಚಿಕ್ಕಮಗಳೂರು: ಬೇಲಿ ದಾಟುವಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಬಲಿಯಾಗಿರುವ ಘಟನೆ ಕಡೂರು...