ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ದುರ್ಗದಹಳ್ಳಿಯಲ್ಲಿ ಕಾಡುಕೋಣ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಭಾನುವಾರ ನಡೆದಿದ್ದು, ರಮೇಶ್ (೫೨) ಕಾಡುಕೋಣ ದಾಳಿಯಿಂದ ಮೃತಪಟ್ಟಿದ್ದಾರೆ.
ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕಾಡುಕೋಣ ಏಕಾಏಕಿ ದಾಳಿ ನಡೆಸಿದ ಪರಿಣಾಮ ರಮೇಶ್ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಬಾಳೂರು ಠಾಣೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ ದ್ದಾರೆ.
ಇತ್ತೀಚಿನ ದಿನಗಳಲ್ಲಿ ಮೂಡಿಗೆರೆ, ಕಳಸ ಭಾಗದಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು ಇದರಿಂದ ಇಲ್ಲಿನ ಸ್ಥಳೀಯರು ಭಯಭೀತರಾಗಿದ್ದು, ದೈನಂದಿನ ಕೃಷಿ ಹಾಗೂ ತೋಟದ ಕೆಲಸಕ್ಕೆ ತೆರಳಲು ಹಿಂಜರಿಯುತ್ತಿದ್ದಾರೆ.
ಕಾಡುಕೋಣಗಳ ಹಾವ ಳಿಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
Man killed in wild buffalo attack in Mudigere
Leave a comment