Home namma chikmagalur ಮುತ್ತಿಗೆಪುರ ಗ್ರಾಮದಲ್ಲಿ ಕಾಡಾನೆ ದಾಳಿಯಲ್ಲಿ ವ್ಯಕ್ತಿಗೆ ಗಂಭೀರ ಗಾಯ
namma chikmagalurchikamagalurHomeLatest News

ಮುತ್ತಿಗೆಪುರ ಗ್ರಾಮದಲ್ಲಿ ಕಾಡಾನೆ ದಾಳಿಯಲ್ಲಿ ವ್ಯಕ್ತಿಗೆ ಗಂಭೀರ ಗಾಯ

Share
Share

ಚಿಕ್ಕಮಗಳೂರು : ಮೂಡಿಗೆರೆ ಪಟ್ಟಣ ಸಮೀಪದ ಮುತ್ತಿಗೆಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಸ್ಥಳೀಯ ವ್ಯಕ್ತಿ ಒಬ್ಬರಿಗೆ ಗಂಭೀರ ಗಾಯಗಳಾಗಿವೆ.

63 ವರ್ಷದ ಫಿಲಿಪ್ ಎಂಬ ವ್ಯಕ್ತಿ ಕಾಡಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದಾರೆ. ಮಧ್ಯ ರಾತ್ರಿ ವೇಳೆ ಮನೆಯ ಸಮೀಪ ನಾಯಿ ಬೊಗಳಿದಾಗ ಮನೆ ಸಮೀಪ ಏನೋ ಶಬ್ದವಾಗುತ್ತಿರುವುದನ್ನು ಗಮನಿಸಿ ಜಾನುವಾರುಗಳು ಬಂದಿರಬಹುದು ಎಂದು ಮನೆಯ ಹೊರಗೆ ಬಂದಿದ್ದಾರೆ.

ಮನೆಯಿಂದ ಹೊರಬಂದ ವೇಳೆ ಮನೆಯ ಸಮೀಪವೆ ಬಂದಿದ್ದ ಕಾಡಾನೆ ಏಕಾಏಕಿ ಫಿಲಿಪ್ ಅವರ ಮೇಲೆ ದಾಳಿ ನಡೆಸಿದೆ. ಕಾಡಾನೆ ಸೊಂಡಿಲಿನಿಂದ ಫಿಲಿಪ್ ಅವರನ್ನು ತೆಗೆದು ಎಸೆದಿದೆ. ಆನೆ ದಾಳಿಯಿಂದ ಕಾಲು, ಎದೆ ಹಾಗೂ ಕೈಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಫಿಲಿಪ್ ಕ್ಯಾಸ್ಟೋಲಿನಾ ಅವರು ಮುತ್ತಿಗೆಪುರ ನಿವಾಸಿಯಾಗಿದ್ದು, ಟ್ರಾಕ್ಟರ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ತನ್ನ ಪತ್ನಿ ಹಾಗೂ ಮಗನೊಂದಿಗೆ ವಾಸವಾಗಿದ್ದಾರೆ. ಇದೀಗ ಅವರು ತೀವ್ರ ಗಾಯಗೊಂಡಿದ್ದು ಮುಂದಿನ ದಿನಗಳಲ್ಲಿ ದುಡಿದು ತಿನ್ನುವುದಕ್ಕೆ ಕಷ್ಟವಾಗಿದೆ. ಆನೆ ದಾಳಿಯಿಂದ ಅವರ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿದೆ.

ಗ್ರಾಮದ ಕಾಫಿ ತೋಟಗಳಲ್ಲಿ ಕಳೆದ ಕೆಲವು ವಾರಗಳಿಂದ ಸುಮಾರು 35 ಕಾಡಾನೆಗಳು ವಾಸ್ತವ್ಯ ಹೂಡಿದ್ದು, ಅವು ನಿರಂತರವಾಗಿ ವಸತಿ ಪ್ರದೇಶಗಳಿಗೆ ನುಗ್ಗುತ್ತಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ತಾಲ್ಲೂಕಿನ ಮಾಕೋನಹಳ್ಳಿ, ಕಾರಬೈಲ್, ದುಂಡುಗ, ಹಳಸೆ, ಮುತ್ತಿಗೆಪುರ ಗ್ರಾಮಗಳ ಸುತ್ತಾ ಸಂಚರಿಸುತ್ತಾ ತೀವ್ರ ಉಪಟಳ ನೀಡುತ್ತಿವೆ. ಜನರ ನೋವುಗಳನ್ನು ಕೇಳುವವರು ಇಲ್ಲದಾಗಿದೆ.

ಘಟನೆ ತಿಳಿಯುತ್ತಿದ್ದಂತೆಯೇ, ಮಧ್ಯರಾತ್ರಿ ಹೊತ್ತಿಗೆ ಮೂಡಿಗೆರೆ ಅರಣ್ಯ ಅಧಿಕಾರಿ ಕಾವ್ಯ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

Man seriously injured in wild elephant attack in Muttigepura village

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...