Home namma chikmagalur chikamagalur ಮಗಳನ್ನು ಹಾಸ್ಟೆಲ್‌ಗೆ ಬಿಡಲು ಹೋದ ವಿವಾಹಿತ ಮಹಿಳೆ ನಿಗೂಢ ನಾಪತ್ತೆ
chikamagalurCrime NewsHomeLatest Newsnamma chikmagalur

ಮಗಳನ್ನು ಹಾಸ್ಟೆಲ್‌ಗೆ ಬಿಡಲು ಹೋದ ವಿವಾಹಿತ ಮಹಿಳೆ ನಿಗೂಢ ನಾಪತ್ತೆ

Share
Share

ಮೂಡಿಗೆರೆ: ಸಾಮಾಜಿಕ ಜಾಲತಾಣದ ಪರಿಚಯವೊಂದು ನೆಮ್ಮದಿಯಾಗಿದ್ದ ಸಂಸಾರದಲ್ಲಿ ಬಿರುಗಾಳಿ ಎಬ್ಬಿಸಿರುವ ಘಟನೆ ಮೂಡಿಗೆರೆ ತಾಲೂಕಿನ ಹಳ್ಳಿಬೈಲು ಗ್ರಾಮದಲ್ಲಿ ನಡೆದಿದೆ. ಮಗಳನ್ನು ಹಾಸ್ಟೆಲ್‌ಗೆ ಬಿಡಲು ಹೋದ ವಿವಾಹಿತ ಮಹಿಳೆ ನಿಗೂಢವಾಗಿ ನಾಪತ್ತೆಯಾಗಿದ್ದಾರೆ.

ಹಳ್ಳಿಬೈಲು ಗ್ರಾಮದ ನಿವಾಸಿ ಹರೀಶ್ ಎಂಬುವವರ ಪತ್ನಿ ಕಾವ್ಯ (30 ವರ್ಷ) ನಾಪತ್ತೆಯಾದ ಮಹಿಳೆ. ಕಳೆದ 12 ವರ್ಷಗಳಿಂದ ನೆಮ್ಮದಿಯ ಜೀವನ ನಡೆಸುತ್ತಿದ್ದ ಈ ದಂಪತಿಗೆ 11 ವರ್ಷದ ಹೆಣ್ಣು ಮಗಳಿದ್ದಾಳೆ. ಕಳೆದ ಆರು ತಿಂಗಳಿನಿಂದ ಕಾವ್ಯ ಅವರಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಅಶೋಕ್ ನಾಯ್ಕ ಎಂಬ ಅಪರಿಚಿತನ ಪರಿಚಯವಾಗಿ, ಇಬ್ಬರ ನಡುವೆ ಸ್ನೇಹ ಬೆಳೆದಿತ್ತು ಎನ್ನಲಾಗಿದೆ.

ಈ ವಿಷಯ ಒಂದು ತಿಂಗಳ ಹಿಂದೆ ಪತಿ ಹರೀಶ್‌ಗೆ ತಿಳಿದಾಗ ದಂಪತಿ ನಡುವೆ ತೀವ್ರ ವಾದ-ವಿವಾದ ನಡೆದು, ಸಿಟ್ಟಿನಲ್ಲಿ ಪತಿ ಕಾವ್ಯ ಅವರ ಮೊಬೈಲ್ ಫೋನ್ ಒಡೆದು ಹಾಕಿದ್ದರು. ಈ ಘಟನೆಯ ನಂತರ ಮನೆಯಲ್ಲಿ ಎಲ್ಲವೂ ಸರಿಹೋಯಿತು ಅಂದುಕೊಳ್ಳುವಷ್ಟರಲ್ಲಿಯೇ ಜೂನ್ 1ರಂದು ಕಾವ್ಯ ತನ್ನ 11 ವರ್ಷದ ಮಗಳನ್ನು ಬಿದರಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ನಿಲಯಕ್ಕೆ ಬಿಟ್ಟು ಬರುವುದಾಗಿ ಹೇಳಿ ಮನೆಯಿಂದ ಹೊರಟಿದ್ದಾರೆ.

ಮಗಳನ್ನು ಸುರಕ್ಷಿತವಾಗಿ ವಸತಿ ನಿಲಯಕ್ಕೆ ತಲುಪಿಸಿದ ಕಾವ್ಯ, ಆನಂತರ ಮನೆಗೆ ಮರಳಿ ಬಂದಿಲ್ಲ. ಕೈಯಲ್ಲಿ ಮೊಬೈಲ್ ಸಹ ಇಲ್ಲದ ಕಾರಣ ಆಕೆಯನ್ನು ಸಂಪರ್ಕಿಸುವುದು ಕುಟುಂಬಸ್ಥರಿಗೆ ಅಸಾಧ್ಯವಾಗಿದೆ. ಇದರಿಂದ ಕಂಗಾಲಾದ ಪತಿ ಮತ್ತು ಸಂಬಂಧಿಕರು ಪರಿಚಿತರ ಮನೆಗಳು ಸೇರಿದಂತೆ ಸಂಭಾವ್ಯ ಎಲ್ಲಾ ಸ್ಥಳಗಳಲ್ಲೂ ಹುಡುಕಾಟ ನಡೆಸಿದ್ದರೂ ಯಾವುದೇ ಸುಳಿವು ಲಭ್ಯವಾಗಿಲ್ಲ. ಹೀಗಾಗಿ ಈ ಕುರಿತು ಪತಿ ಹರೀಶ್ ಮೂಡಿಗೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾದ ಮಹಿಳೆಯ ಪತ್ತೆಗಾಗಿ ಹುಡುಕಾಟ ಆರಂಭಿಸಿದ್ದಾರೆ.

Married woman mysteriously disappears after dropping off daughter at hostel

Share

Leave a comment

Leave a Reply

Your email address will not be published. Required fields are marked *

Don't Miss

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿಅಹ್ವಾನ

ಚಿಕ್ಕಮಗಳೂರು: ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳು ಒಳಗೊಂಡಂತೆ) ೨೦೨೬-೨೭ನೇ ಶೈಕ್ಷಣಿಕ ಸಾಲಿಗೆ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ...

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ ಕರ್ತವ್ಯ ಆಗಿರುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ...

Related Articles

ಅಂಬೇಡ್ಕರ್ ವಸತಿ ಶಾಲೆಯಲ್ಲಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಳಪೆ ಮಟ್ಟದ ಹಾಗೂ ಅರೆಬೆಂದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ...

15.99 ಲಕ್ಷ ಜನರ ಸಂಧ್ಯಾ ಸುರಕ್ಷಾ ಯೋಜನೆಯ ರದ್ದು

ಚಿಕ್ಕಮಗಳೂರು: ರಾಜ್ಯ ಸರಕಾರ ನೀಡುತ್ತಿರುವ ಸಂಧ್ಯಾ ಸುರಕ್ಷಾ ಯೋಜನೆಯ ಪ್ರಯೋಜನ ೧೫.೯೯ ಲಕ್ಷ ಜನರಿಗೆ ರದ್ದಾಗಿದ್ದು...

ಅಯೋದ್ಯೆ ಹಣ ಕಳವು-ಸುಪ್ರೀಂನಿಂದ ಪಾರದರ್ಶಕ ತನಿಖೆಯಾಗಲಿ

ಚಿಕ್ಕಮಗಳೂರು: ಶ್ರೀರಾಮನ ಹೆಸರಲ್ಲಿ ಅಕಾರಕ್ಕೆ ಬಂದ ಬಿಜೆಪಿ ಶ್ರೀರಾಮನ ಟ್ರಸ್ಟ್ ಮೂಲಕ ಹಣಲೂಟಿ ಮಾಡಿದ್ದೇ ಸಾಧನೆಯಾಗಿದೆ....

ಚಿಕ್ಕಮಗಳೂರು ಜಿಲ್ಲೆಯ ಯಾರಿಗೂ ಸಚಿವ ಸ್ಥಾನವಿಲ್ಲ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಯಾವ ಶಾಸಕರಿಗೂ ಮಂತ್ರಿ ಸ್ಥಾನ ಸಿಗುವುದಿಲ್ಲ ಎಂದು ಖಚಿತ ಮಾಹಿತಿ ಇದೆ....