Home namma chikmagalur ಆ.10ಕ್ಕೆ ಬಸವ ಮಾಚಿದೇವ ಶ್ರೀಗಳ ಸಾಮೂಹಿಕ ಪಾದಪೂಜೆ
namma chikmagalurchikamagalurHomeLatest News

ಆ.10ಕ್ಕೆ ಬಸವ ಮಾಚಿದೇವ ಶ್ರೀಗಳ ಸಾಮೂಹಿಕ ಪಾದಪೂಜೆ

Share
Share

ಚಿಕ್ಕಮಗಳೂರು: ಶ್ರಾವಣ ಮಾಸದ ಪೂಜೆ ಕಾರ್ಯಕ್ರಮದ ಅಂಗವಾಗಿ ಬಸವನಹಳ್ಳಿಯ ಜಿಲ್ಲಾ ಮಡಿವಾಳರ ಸಂಘದ ಆವರಣದಲ್ಲಿ ಆ.೧೦ ರಂದು ಭಾನುವಾರ ಬೆಳಗ್ಗೆ ೧೦.೩೦ ಕ್ಕೆ ಶ್ರೀ ಬಸವ ಮಾಚಿದೇವ ಸ್ವಾಮಿಗಳ ಸಾಮೂಹಿಕ ಪಾದಪೂಜೆ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ವಿ ರಾಮಚಂದ್ರ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕಾರ್ಯಕ್ರಮದಲ್ಲಿ ಮಡಿವಾಳ ಸಮಾಜದ ಬಂಧುಗಳು ಸಕುಟುಂಬ ಸಮೇತರಾಗಿ ಆಗಮಿಸಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಆಸಕ್ತ ಭಕ್ತಾಧಿಗಳು ವಯಕ್ತಿಕವಾಗಿ ತಮ್ಮ ತಮ್ಮ ಮನೆಯಲ್ಲಿ ಪಾದಪೂಜೆ ಮಾಡಲಿಚ್ಚಿಸುವವರು ಅಂದು ಮಧ್ಯಾಹ್ನ ೨ ಗಂಟೆಯ ನಂತರ ಶ್ರೀಗಳ ಪಾದಪೂಜೆಗೆ ಅವಕಾಶ ಕಲ್ಪಿಸಲಾಗಿದೆ. ಈ ಸಂಬಂಧ ೩ ದಿನ ಮುಂಚಿತವಾಗಿ ಸಂಘಕ್ಕೆ ಮಾಹಿತಿ ತಿಳಿಸಬೇಕೆಂದು ವಿನಂತಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯ ಮಡಿವಾಳ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಏರ್ಪಡಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ ಎಂದರು.

ಹೆಚ್ಚಿನ ಮಾಹಿತಿಗೆ ಪ್ರಧಾನ ಕಾರ್ಯದರ್ಶಿ ೯೩೪೨೦೨೩೨೩೫ ಈ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಸಂಘದ ಕಡೂರು ತಾಲ್ಲೂಕು ಅಧ್ಯಕ್ಷ ಷಡಾಕ್ಷರಿ, ಖಜಾಂಚಿ ಸತೀಶ್, ಸದಸ್ಯ ಮಂಜುನಾಥ್ ಉಪಸ್ಥಿತರಿದ್ದರು.

Mass foot worship of Lord Basava Machideva on August 10th

Share

Leave a comment

Leave a Reply

Your email address will not be published. Required fields are marked *

Don't Miss

ತಾಯಿಗೆ ಬೆಂಕಿ ಹಾಕಿ ಕೊಂದ ಮಗ

ಚಿಕ್ಕಮಗಳೂರು: ತಾಯಿಯನ್ನು ಮಗ ಬೆಂಕಿ ಹಾಕಿ ಸುಟ್ಟು ಕೊಂದಿರುವ ಅಮಾನುಷ ಘಟನೆ ನಡೆದಿದೆ. ಆಲ್ದೂರು ಠಾಣೆ ವ್ಯಾಪ್ತಿಯ ಅರೆನೂರು ಗ್ರಾಮದಲ್ಲಿ ನಡೆದಿದ್ದು ವಿಷಯ ತಿಳಿದ ತಕ್ಷಣ ಪೊಲೀಸ್ ಸಿಬ್ಬಂದಿ ತೆರಳಿದ್ದಾರೆ. Son...

ಸಖರಾಯಪಟ್ಟಣದ ಅಗ್ರಹಾರ ಬಳಿ ನಿಷೇಧಾಜ್ಞೆ ಜಾರಿ

ಚಿಕ್ಕಮಗಳೂರು: ಸಖರಾಯಪಟ್ಟಣ ಹೋಬಳಿ ಅಗ್ರಹಾರ ಗ್ರಾಮದ ಚೆಕ್‌ಡ್ಯಾಂ ನಿರ್ಮಾಣ ಕಾಮಗಾರಿಗೆ ಪರ-ವಿರೋಧ ವ್ಯಕ್ತವಾಗಿದ್ದು, ಉಭಯ ಕಡೆ ಅಹಿತಕರ ಘಟನೆ ನಡೆಯುವ ಸಂಭವವಿರುವುದರಿಂದ ಸ್ಥಳದಿಂದ ಒಂದು ಕಿ.ಮೀ. ವ್ಯಾಪ್ತಿಯವರೆಗೆ ಜುಲೈ ೨೮ ರಿಂದ...

Related Articles

ಸಮರ್ಪಕ ಪಡಿತರ ವಿತರಣೆಗೆ ರಾಜ್ಯ ಪಡಿತರ ಸಂಘ ಆಗ್ರಹ

ಚಿಕ್ಕಮಗಳೂರು:  ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳು ೫ನೇ ತಾರೀಖಿನೊಳಗೆ ಪಡಿತರ ಹಂಚಿಕೆ ಮಾಡಬೇಕು. ಅನ್ನಭಾಗ್ಯ ಅಕ್ಕಿಯ...

ಆ.7-8 ಕ್ಕೆ ಸಿಪಿಐ ಸಮಾವೇಶ-ಬಹಿರಂಗ ಅಧಿವೇಶನ

ಚಿಕ್ಕಮಗಳೂರು: ಭಾರತ ಕಮ್ಯುನಿಷ್ಟ ಪಾರ್ಟಿ ಸ್ಥಾಪನೆಯಾಗಿ ೧೦೦ ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಆ.೭ ಮತ್ತು ೮...

ಬೀದಿಗಿಳಿಯದ ಕೆಎಸ್‌ಆರ್‌ಟಿಸಿ ಬಸ್‌ಗಳು-ಜಿಲ್ಲೆಯಾದ್ಯಂತ ಪರದಾಡಿದ ಪ್ರಯಾಣಿಕರು

ಚಿಕ್ಕಮಗಳೂರು: ವೇತನ ಪರಿಷ್ಕರಣೆ, ಬಾಕಿ ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಸಾರಿಗೆ ನೌಕರರು...

’ವಿಶ್ವ ಸ್ತನ್ಯಪಾನ ಸಪ್ತಾಹ’ – ೨೦೨೫

ಚಿಕ್ಕಮಗಳೂರು: ತಾಯಿ ಹಾಲು ಅದರ ಮಹತ್ವ ಮಗುವಿನ ಮೇಲಾಗುವ ಪ್ರಯೋಜನದ ಬಗ್ಗೆ ಅರಿವು ಮೂಡಿಸುವ ಉದ್ದೇಶದೊಂದಿಗೆ ಆಗಸ್ಟ್...