Home namma chikmagalur chikamagalur ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ
chikamagalurHomeLatest Newsnamma chikmagalur

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

Share
Share

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು.

ಕೆಂಪನಹಳ್ಳಿಯ ಬಡ ಮಕಾನ್‌ನಲ್ಲಿ ಹಬ್ಬದ ಪ್ರಯುಕ್ತ ಏರ್ಪಡಿಸಲಾಗಿದ್ದ ವಿಶೇಷ ಸಾಮೂಹಿಕ ಪ್ರಾರ್ಥನೆಯಲ್ಲಿ ಸಾವಿರಾರು ಸಂಖ್ಯೆಯ ಮುಸ್ಲಿಂ ಬಾಂಧವರು ಪಾಲ್ಗೊಂಡು ಭಕ್ತಿಯಿಂದ ನಮಾಜ್ ಸಲ್ಲಿಸಿದರು.

ಬೆಳಿಗ್ಗೆಯಿಂದಲೇ ಮಕಾನ್‌ನತ್ತ ತಂಡೋಪತಂಡವಾಗಿ ಆಗಮಿಸಿದ ಜನರಲ್ಲಿ ಹಬ್ಬದ ಉತ್ಸಾಹ ಎದ್ದುಕಾಣುತ್ತಿತ್ತು.

ವಿಶೇಷವಾಗಿ ಪುಟ್ಟ ಮಕ್ಕಳು ಬಣ್ಣಬಣ್ಣದ ಹೊಸ ಬಟ್ಟೆಗಳನ್ನು ಧರಿಸಿ, ಟೋಪಿ ತೊಟ್ಟು ಪೋಷಕರೊಂದಿಗೆ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದು ಎಲ್ಲರ ಗಮನ ಸೆಳೆಯಿತು.

ಮಕಾನ್ ಆವರಣದಲ್ಲಿ ಮೊಳಗಿದ ವಿಶೇಷ ಪ್ರಾರ್ಥನೆಯು ಶಾಂತಿ ಮತ್ತು ಭ್ರಾತೃತ್ವದ ಸಂದೇಶವನ್ನು ಸಾರಿತು. ಪ್ರಾರ್ಥನೆಯ ನಂತರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡ ದೃಶ್ಯಗಳು ಕಂಡು ಬಂದವು.

Mass prayers as part of Ramadan in the land of coffee

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...

ಎಮ್ಮೆದೊಡ್ಡಿ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ವೃದ್ಧನ ಸಾವು

ಕಡೂರು: ತಾಲ್ಲೂಕಿನ ಎಮ್ಮೆದೊಡ್ಡಿ ರಸ್ತೆಯ ಕರಿಯಮ್ಮ ದೇವಸ್ಥಾನದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವೃದ್ಧರೊಬ್ಬರು ಮೃತಪಟ್ಟ...