Home namma chikmagalur ಮೂಡಿಗೆರೆಯಲ್ಲಿ 9 ಜೋಡಿಗಳ ಸಾಮೂಹಿಕ ವಿವಾಹ
namma chikmagalurchikamagalurHomeLatest News

ಮೂಡಿಗೆರೆಯಲ್ಲಿ 9 ಜೋಡಿಗಳ ಸಾಮೂಹಿಕ ವಿವಾಹ

Share
Share

ಮೂಡಿಗೆರೆ: ‘ಸತ್ಯದ ಹಾದಿ ಯಲ್ಲಿ ಸಾಗುವ ಮೂಲಕ ದಂಪತಿ ಸಂಬಂಧವನ್ನು ಗಟ್ಟಿ ಮಾಡಿಕೊ ಳ್ಳಬೇಕು’ ಎಂದು ಗೌರಿಗದ್ದೆ ಅವಧೂತ ವಿನಯ ಗುರೂಜಿ ಹೇಳಿದರು.

ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಭಾನುವಾರ ಆಶ್ರಯ ಸಾಮಾಜಿಕ ಸೇವಾ ಸಂಸ್ಥೆ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಸಮಿತಿ ವತಿಯಿಂದ ಏರ್ಪಡಿಸಿದ್ದ ಸಾಮೂಹಿಕ ವಿವಾಹಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕೋಟ್ಯಂತರ ರೂಪಾಯಿ ಖರ್ಚು ಮಾಡಿ, ಅದ್ಧೂರಿಯಿಂದ ನಡೆದ ಎಷ್ಟೋ ವಿವಾಹಗಳು ಒಂದೇ ವಾರಕ್ಕೆ ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿರುವುದನ್ನು ಕಾಣುತ್ತಿದ್ದೇವೆ. ಅದು ಉತ್ತಮ ಬೆಳವಣಿಗೆ ಅಲ್ಲ. ಸುಳ್ಳು ವ್ಯಭಿಚಾರಕ್ಕೆ ಸಮ. ಸುಳ್ಳಿನಿಂದ ಮಾನಸಿಕ ವಂಚನೆಯಾಗಿ ಸಂಬಂಧಗಳಲ್ಲಿ ಒಡಕುಂಟಾಗುತ್ತಿವೆ. ಸತ್ಯದ ದಾರಿಯಲ್ಲಿಯೇ ನಡೆದರೆ ನೆಮ್ಮದಿಯ ಜೀವನ ಕಂಡುಕೊಳ್ಳಬಹುದು’ ಎಂದರು.

ಶಾಸಕಿ ನಯನಾ ಮೋಟಮ್ಮ ಮಾತನಾಡಿ, ಬಡವರು ಸಾಲ ಮಾಡಿ, ಅದನ್ನು ತೀರಿಸಲು ಜೀವನ ಪೂರ್ತಿ ಒದ್ದಾಡುವುದನ್ನು ತಪ್ಪಿಸುವ ಉದ್ದೇಶದಿಂದ 27 ವರ್ಷದಿಂದ ತನ್ನ ತಾಯಿ ಈ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದಾರೆ. ಇದರಲ್ಲಿ ರಾಜಕೀಯ ಉದ್ದೇಶವಿಲ್ಲ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಂಗ್ರೆಸ್‌ ನಾಯಕಿ ಮೋಟಮ್ಮ, ‘ಅಂಬೇಡ್ಕರ್ ಅವರು ಹಾಕಿಕೊಟ್ಟ ದಾರಿಯಲ್ಲೇ ಎಲ್ಲರೂ ನಡೆಯಬೇಕು. ದುಶ್ಚಟಕ್ಕೆ ಬಲಿಯಾಗದೆ ಉತ್ತಮ ಜೀವನ ನಡೆಸುವ ಮೂಲಕ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಉನ್ನತ ಹುದ್ದೆ ಅಲಂಕರಿಸುವಂತೆ ಮಾಡಬೇಕು’ ಎಂದು ನವ ದಂಪತಿಗೆ ಕಿವಿಮಾತು ಹೇಳಿ ಪ್ರತಿಜ್ಞಾವಿಧಿ ಬೋಧಿಸಿದರು.

ಸಾಮೂಹಿಕ ವಿವಾಹದಲ್ಲಿ 9 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟವು. ದಲಿತ ಪುರೋಹಿತ ಎಚ್.ಟಿ. ಸುಬ್ರಹ್ಮಣ್ಯ, ಕೆ.ಎಲ್. ಸಾಗರ್, ಕೋಮರಾಜ್ ಚಕ್ರಮಣಿ, ರಮೇಶ್ ದಾರಹಹಳ್ಳಿ, ತಿಮ್ಮಯ್ಯ ಹಾಲೂರು, ದೇವರಾಜ್ ಸಬ್ಲಿ ಕನ್ನಡ ಮಂತ್ರವನ್ನು ಪಠಿಸಿದರು. ಮದುವೆಯಲ್ಲಿ ಬಿಳಿಯಪ್ಪ ಹಾಗೂ ಜಯಶೀಲಾ ದಂಪತಿ ವಧು–ವರರ ಪರವಾಗಿ ಧಾರೆ ಎರೆಯುವ ಕಾರ್ಯ ನೆರವೇರಿಸಿದರು.

ಸುಗ್ಗಿ ಕುಣಿತ, ಕೋಲಾಟ, ಜಾನಪದ ನೃತ್ಯ, ಜಾನಪದ ಗೀತೆ, ಸೋಬಾನೆ ಹಾಡು, ಭತ್ತ ಕುಟ್ಟುವ ಹಾಡು, ನಟ್ಟಿ ಹಾಡು ಸೇರಿದಂತೆ ಇತರೇ ಜಾನಪದ ಸೊಗಡಿನ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.ಮಾಜಿ ಸಚಿವ ಬಿ.ಬಿ. ನಿಂಗಯ್ಯ, ಪ.ಪಂ. ಉಪಾಧ್ಯಕ್ಷ ರಮೇಶ್ ಹೊಸ್ಕೆರೆ, ಸದಸ್ಯ ಹಂಝಾ, ಬೆಂಗಳೂ ರಿನ ಡಾ. ಪಾರ್ವತಿ ಧನಂಜಯ್, ರೇಣುಕಾ, ಲಕ್ಷ್ಮಯ್ಯ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಎಚ್.ಜಿ. ಸುರೇಂದ್ರ, ಮುಖಂ ಡರಾದ ಬಿ.ಎಸ್. ಜಯರಾಂ, ಸುಬ್ರಾ ಯಗೌಡ, ಬಿ.ಎಂ. ಶಂಕರ್, ಶ್ರೀನಾಥ್, ವೆಂಕಟಮ್ಮ ಹಾಲಯ್ಯ ಇದ್ದರು.

Mass wedding of 9 couples in Mudigere

Share

Leave a comment

Leave a Reply

Your email address will not be published. Required fields are marked *

Don't Miss

ಗಿರಿ ಪ್ರದೇಶದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ನೂತನ ಸಂಚಾರ ವ್ಯವಸ್ಥೆ

ಚಿಕ್ಕಮಗಳೂರು: : ಮುಳ್ಳಯ್ಯನಗಿರಿ ಭಾಗದಲ್ಲಿ ಇತ್ತೀಚೆಗೆ ವಾರಾಂತ್ಯದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗುತ್ತಿದ್ದು, ಎರಡು ಸ್ಲಾಟ್‌ಗಳಲ್ಲಿ ಪ್ರತೀದಿನ ವಾಹನಗಳನ್ನು ಗಿರಿಭಾಗಕ್ಕೆ ಬಿಡಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ತಿಳಿಸಿದರು....

ಕಾವೇರುತ್ತಿದೆ ಅಜ್ಜಂಪುರ ಪಟ್ಟಣ ಪಂಚಾಯತಿ ಚುನಾವಣೆ

ಅಜ್ಜಂಪುರ: ಕಳೆದ ಏಳು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳು ಇಲ್ಲದೆ ಬಣಗುಡುತ್ತಿದ್ದ ಪಟ್ಟಣ ಪಂಚಾಯತಿಗೆ ಆಗಷ್ಟ್ 17 ರಂದು ಚುನಾವಣೆ ದಿನಾಂಕ ನಿಗದಿಯಾಗಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಹಾಗೂ ಜನತಾದಳದ ಮಧ್ಯೆ ಬಿರುಸಿನ...

Related Articles

ಮಕ್ಕಳ ಬಾಲ್ಯ ಸುರಕ್ಷತೆಗಾಗಿ ಭದ್ರ ಬಾಲ್ಯ ಯೋಜನೆ ಅನುಷ್ಠಾನ

ಚಿಕ್ಕಮಗಳೂರು: ಮಕ್ಕಳ ಬಾಲ್ಯವನ್ನು ಸುರಕ್ಷಿತಗೊಳಿಸುವ ಗುರಿ ಇರಿಸಿಕೊಂಡು ಜಿಲ್ಲೆಯಲ್ಲಿ ಭದ್ರ ಬಾಲ್ಯ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಎಲ್ಲಾ...

ಕ್ಷೌರಿಕ ವೃತ್ತಿಯ ದರಪಟ್ಟಿಯ ದುರ್ಬಳಕೆ ವಿರುದ್ಧ ಸಮಾಜದಿಂದ ಪ್ರತಿಭಟನೆ

ಚಿಕ್ಕಮಗಳೂರು:  ಕ್ಷೌರಿಕ ವೃತ್ತಿಯ ದರಪಟ್ಟಿಯ ದುರ್ಬಳಕೆ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ನಿಗಧಿತ ದರಕ್ಕಿಂತ ಕಡಿಮೆ...

ಮಾದಕ ವಸ್ತು ವಿರೋಧಿ ಜಾಗೃತಿ ಸಮಿತಿ ರಚನೆ ಕಡ್ಡಾಯ 

ಚಿಕ್ಕಮಗಳೂರು:  ಶಾಲಾ ಕಾಲೇಜುಗಳಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ಸಮಿತಿಗಳನ್ನು ಕಡ್ಡಾಯವಾಗಿ ರಚಿಸುವ ಮೂಲಕ ಮಾದಕ ವಸ್ತು...

ವೇದಾನದಿ ನೀರಿನ ಹಂಚಿಕೆಯಲ್ಲಿ ರೈತರು ಸಂಯಮ ಕಾಪಾಡಬೇಕು

ಚಿಕ್ಕಮಗಳೂರು: ವೇದಾ ನದಿ ನೀರಿನ ಹಂಚಿಕೆ ವಿಚಾರದಲ್ಲಿ ರೈತರು ಸಂಯಮ ಕಾಪಾಡಬೇಕು. ಜೊತೆಗೆ ಕೆರೆ ತುಂಬಿಸುವ...