Home namma chikmagalur ಮೂಡಿಗೆರೆಯಲ್ಲಿ 9 ಜೋಡಿಗಳ ಸಾಮೂಹಿಕ ವಿವಾಹ
namma chikmagalurchikamagalurHomeLatest News

ಮೂಡಿಗೆರೆಯಲ್ಲಿ 9 ಜೋಡಿಗಳ ಸಾಮೂಹಿಕ ವಿವಾಹ

Share
Share

ಮೂಡಿಗೆರೆ: ‘ಸತ್ಯದ ಹಾದಿ ಯಲ್ಲಿ ಸಾಗುವ ಮೂಲಕ ದಂಪತಿ ಸಂಬಂಧವನ್ನು ಗಟ್ಟಿ ಮಾಡಿಕೊ ಳ್ಳಬೇಕು’ ಎಂದು ಗೌರಿಗದ್ದೆ ಅವಧೂತ ವಿನಯ ಗುರೂಜಿ ಹೇಳಿದರು.

ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಭಾನುವಾರ ಆಶ್ರಯ ಸಾಮಾಜಿಕ ಸೇವಾ ಸಂಸ್ಥೆ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಸಮಿತಿ ವತಿಯಿಂದ ಏರ್ಪಡಿಸಿದ್ದ ಸಾಮೂಹಿಕ ವಿವಾಹಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕೋಟ್ಯಂತರ ರೂಪಾಯಿ ಖರ್ಚು ಮಾಡಿ, ಅದ್ಧೂರಿಯಿಂದ ನಡೆದ ಎಷ್ಟೋ ವಿವಾಹಗಳು ಒಂದೇ ವಾರಕ್ಕೆ ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿರುವುದನ್ನು ಕಾಣುತ್ತಿದ್ದೇವೆ. ಅದು ಉತ್ತಮ ಬೆಳವಣಿಗೆ ಅಲ್ಲ. ಸುಳ್ಳು ವ್ಯಭಿಚಾರಕ್ಕೆ ಸಮ. ಸುಳ್ಳಿನಿಂದ ಮಾನಸಿಕ ವಂಚನೆಯಾಗಿ ಸಂಬಂಧಗಳಲ್ಲಿ ಒಡಕುಂಟಾಗುತ್ತಿವೆ. ಸತ್ಯದ ದಾರಿಯಲ್ಲಿಯೇ ನಡೆದರೆ ನೆಮ್ಮದಿಯ ಜೀವನ ಕಂಡುಕೊಳ್ಳಬಹುದು’ ಎಂದರು.

ಶಾಸಕಿ ನಯನಾ ಮೋಟಮ್ಮ ಮಾತನಾಡಿ, ಬಡವರು ಸಾಲ ಮಾಡಿ, ಅದನ್ನು ತೀರಿಸಲು ಜೀವನ ಪೂರ್ತಿ ಒದ್ದಾಡುವುದನ್ನು ತಪ್ಪಿಸುವ ಉದ್ದೇಶದಿಂದ 27 ವರ್ಷದಿಂದ ತನ್ನ ತಾಯಿ ಈ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದಾರೆ. ಇದರಲ್ಲಿ ರಾಜಕೀಯ ಉದ್ದೇಶವಿಲ್ಲ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಂಗ್ರೆಸ್‌ ನಾಯಕಿ ಮೋಟಮ್ಮ, ‘ಅಂಬೇಡ್ಕರ್ ಅವರು ಹಾಕಿಕೊಟ್ಟ ದಾರಿಯಲ್ಲೇ ಎಲ್ಲರೂ ನಡೆಯಬೇಕು. ದುಶ್ಚಟಕ್ಕೆ ಬಲಿಯಾಗದೆ ಉತ್ತಮ ಜೀವನ ನಡೆಸುವ ಮೂಲಕ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಉನ್ನತ ಹುದ್ದೆ ಅಲಂಕರಿಸುವಂತೆ ಮಾಡಬೇಕು’ ಎಂದು ನವ ದಂಪತಿಗೆ ಕಿವಿಮಾತು ಹೇಳಿ ಪ್ರತಿಜ್ಞಾವಿಧಿ ಬೋಧಿಸಿದರು.

ಸಾಮೂಹಿಕ ವಿವಾಹದಲ್ಲಿ 9 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟವು. ದಲಿತ ಪುರೋಹಿತ ಎಚ್.ಟಿ. ಸುಬ್ರಹ್ಮಣ್ಯ, ಕೆ.ಎಲ್. ಸಾಗರ್, ಕೋಮರಾಜ್ ಚಕ್ರಮಣಿ, ರಮೇಶ್ ದಾರಹಹಳ್ಳಿ, ತಿಮ್ಮಯ್ಯ ಹಾಲೂರು, ದೇವರಾಜ್ ಸಬ್ಲಿ ಕನ್ನಡ ಮಂತ್ರವನ್ನು ಪಠಿಸಿದರು. ಮದುವೆಯಲ್ಲಿ ಬಿಳಿಯಪ್ಪ ಹಾಗೂ ಜಯಶೀಲಾ ದಂಪತಿ ವಧು–ವರರ ಪರವಾಗಿ ಧಾರೆ ಎರೆಯುವ ಕಾರ್ಯ ನೆರವೇರಿಸಿದರು.

ಸುಗ್ಗಿ ಕುಣಿತ, ಕೋಲಾಟ, ಜಾನಪದ ನೃತ್ಯ, ಜಾನಪದ ಗೀತೆ, ಸೋಬಾನೆ ಹಾಡು, ಭತ್ತ ಕುಟ್ಟುವ ಹಾಡು, ನಟ್ಟಿ ಹಾಡು ಸೇರಿದಂತೆ ಇತರೇ ಜಾನಪದ ಸೊಗಡಿನ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.ಮಾಜಿ ಸಚಿವ ಬಿ.ಬಿ. ನಿಂಗಯ್ಯ, ಪ.ಪಂ. ಉಪಾಧ್ಯಕ್ಷ ರಮೇಶ್ ಹೊಸ್ಕೆರೆ, ಸದಸ್ಯ ಹಂಝಾ, ಬೆಂಗಳೂ ರಿನ ಡಾ. ಪಾರ್ವತಿ ಧನಂಜಯ್, ರೇಣುಕಾ, ಲಕ್ಷ್ಮಯ್ಯ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಎಚ್.ಜಿ. ಸುರೇಂದ್ರ, ಮುಖಂ ಡರಾದ ಬಿ.ಎಸ್. ಜಯರಾಂ, ಸುಬ್ರಾ ಯಗೌಡ, ಬಿ.ಎಂ. ಶಂಕರ್, ಶ್ರೀನಾಥ್, ವೆಂಕಟಮ್ಮ ಹಾಲಯ್ಯ ಇದ್ದರು.

Mass wedding of 9 couples in Mudigere

Share

Leave a comment

Leave a Reply

Your email address will not be published. Required fields are marked *

Don't Miss

ಸಮುದಾಯದ ಅಭಿವೃದ್ಧಿಗೆ ದುಡಿಯುವ ಸಂಕಲ್ಪ ಮಾಡಬೇಕು

ಚಿಕ್ಕಮಗಳೂರು: ಪರಿಶಿಷ್ಟಜಾತಿ,ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರು, ನಿವೃತ್ತ ಸರ್ಕಾರಿ ನೌಕರ ಸಂಘದವರು ಸಮುದಾಯದ ಅಭಿವೃದ್ಧಿಗೆ ದುಡಿಯುವ ಸಂಕಲ್ಪ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆಲಸ ನಿರ್ವಹಿಸಿ ಬೆಂಗಳೂರಿಗೆ ವರ್ಗಾವಣೆ ಗೊಂಡಿರುವ ಎನ್.ಎಂ. ನಾಗರಾಜ್...

ಗ್ರಾಮಲೆಕ್ಕಿಗನಿಗೆ ನಕಲಿ ಕೆ.ಜಿ. ಬೆಳ್ಳಿ ಗಟ್ಟಿ ನೀಡಿ ವಂಚನೆ

ಚಿಕ್ಕಮಗಳೂರು : ಗ್ರಾಮಲೆಕ್ಕಿಗರೊಬ್ಬರಿಗೆ ಚಿನ್ನ, ಬೆಳ್ಳಿ ಮೇಲೆ ಹೂಡಿಕೆ ಮಾಡಿ ಲಾಭಮಾಡಿಕೊಡುವ ಆಮಿಷವೊಡ್ಡಿದ ಬ್ಯಾಂಕ್ ಉದ್ಯೋಗಿಯೊಬ್ಬ ೪೫.೨೦ ಲಕ್ಷ ಹಣಕ್ಕೆ ೫೦ ನಕಲಿ ಕೆ.ಜಿ. ಬೆಳ್ಳಿ ಗಟ್ಟಿ ನೀಡಿ ವಂಚಿಸಿರುವ ಬಗ್ಗೆ...

Related Articles

ಸಿದ್ದು ಮೌನಂ ಸಮ್ಮತಿ ಯಾವಾಗ ಸ್ಪೋಟಿಸುತ್ತದೆ ?

ಕರ್ನಾಟಕದ ರಾಜಕಾರಣದಲ್ಲಿ ಇಂತಹ ಬೆಳವಣಿಗೆ ನಡೆಯ ಬಹುದು ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ. 2013...

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ...

ಸಂವಿಧಾನ ವಿರೋಧಿ ಎಸ್.ಐ.ಆರ್ ರದ್ಧತಿಗೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ಸಂವಿಧಾನ, ಪ್ರಜಾತಂತ್ರ, ಜನವಿರೋಧಿ ಆಗಿರುವ ಸರ್ವಾಧಿಕಾರಿ ಗುಣವಿರುವ ಎಸ್.ಐ.ಆರ್ ರದ್ಧಾಗಬೇಕು ಸಂವಿಧಾನ ಬದ್ಧವಾದ, ಜನಸ್ನೇಹಿಯಾದ...