Home ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ
HomeLatest Newsnamma chikmagalur

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

Share
Oplus_16908288
Share

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ ಬೆಂಗಳೂರಿನ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಪೌರನೀರು ಸರಬರಾಜು ನೌಕರರ ಮಹಾಸಂಘದ ಜಿಲ್ಲಾಧ್ಯಕ್ಷ ರಾಮು ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಮಹಾನಗರ ಪಾಲಿಕೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರನೀರು ಸರಬರಾಜು ನೌಕರರು ಹಲವು ವರ್ಷಗಳಿಂದ ಸಾರ್ವಜನಿಕರಿಗೆ ಪ್ರತಿನಿತ್ಯ ಕುಡಿಯುವ ನೀರು ಪೂರೈಸುವ ಅಗತ್ಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೂ, ಅವರಿಗೆ ಇದುವರೆಗೆ ಸೂಕ್ತ ಸೇವಾ ಭದ್ರತೆ ದೊರೆತಿಲ್ಲ ಎಂದು ಹೇಳಿದರು.

ಪೌರಕಾರ್ಮಿಕರು, ಲೋಡರ್‌ಗಳು, ಕ್ಲೀನರ್‌ಗಳು ಹಾಗೂ ಯುಜಿಡಿ ಸಹಾಯಕರಿಗೆ ವಿಶೇಷ ನಿಯಮಾವಳಿಗಳ ಮೂಲಕ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆ ಕಲ್ಪಿಸಲಾಗಿದೆ. ಅದೇ ಮಾದರಿಯಲ್ಲಿ ನೀರು ಸರಬರಾಜು ನೌಕರರಿಗೂ ಸೇವಾ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.

ಸಿ ಆ್ಯಂಡ್ ಆರ್‌ನಲ್ಲಿ ಮಂಜೂರಾಗಿರುವ ಹಲವು ಹುದ್ದೆಗಳು ವರ್ಷಗಳಿಂದ ಖಾಲಿ ಇದ್ದರೂ ಅವುಗಳನ್ನು ಭರ್ತಿ ಮಾಡಲು ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪೌರನೀರು ಸರಬರಾಜು ನೌಕರರ ಮಹಾಸಂಘದ ಹೋರಾಟದ ಫಲವಾಗಿ ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರಿಗೆ ಸಂಬಂಧಿಸಿದ ಪ್ರತ್ಯೇಕ ಕಡತ ಸಂಖ್ಯೆ 1520933 ಪೌರಾಡಳಿತ ಇಲಾಖೆಯಲ್ಲಿ ಪ್ರಸ್ತಾವನೆಯಲ್ಲಿದೆ. ಈ ಕಡತವನ್ನು ಆರ್ಥಿಕ ಇಲಾಖೆಯ ಮೂಲಕ ಅನುಮೋದನೆ ಪಡೆದು, ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ನೌಕರರು ಹಾಗೂ ಅವರ ಕುಟುಂಬಗಳ ಭವಿಷ್ಯದ ಹಿತದೃಷ್ಟಿಯಿಂದ ಸರ್ಕಾರ ಕೂಡಲೇ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಈ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರಲು ಸೆ.21ರಿಂದ ಸಿದ್ದಗಂಗಾ ಮಠದಿಂದ ಬೆಂಗಳೂರಿನ ಮುಖ್ಯಮಂತ್ರಿ ನಿವಾಸದವರೆಗೆ ಪಾದಯಾತ್ರೆ ನಡೆಸಲಾಗುತ್ತಿದೆ. ಪಾದಯಾತ್ರೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಹೊರಗುತ್ತಿಗೆ ನೀರು ಸರಬರಾಜು ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದು, ಇದಕ್ಕೆ ಅಗತ್ಯ ಅನುಮತಿ, ಸಹಕಾರ ಮತ್ತು ಬೆಂಬಲ ನೀಡುವಂತೆ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಕೃಷ್ಣಗೌಡ, ಶಾಖಾಧ್ಯಕ್ಷ ಮಂಜುನಾಥ್, ಮಂಹತೇಶ್, ಲೋಕೇಶ್, ಅರುಣಾ ಸೇರಿದಂತೆ ಪದಾಧಿಕಾರಿಗಳು ಹಾಗೂ ಹೊರಗುತ್ತಿಗೆ ನೀರು ಸರಬರಾಜು ನೌಕರರು ಉಪಸ್ಥಿತರಿದ್ದರು.

Massive padayatra to the Chief Minister’s residence starting September 21

Share

Leave a comment

Leave a Reply

Your email address will not be published. Required fields are marked *

Don't Miss

ಏಡ್ಸ್ ಭಾದಿತ ವ್ಯಕ್ತಿ ಎಲ್ಲರಂತೆ ಜೀವಿಸಬಹುದು

ಚಿಕ್ಕಮಗಳೂರು:  ಹೆಚ್‌ಐವಿ ಸೋಂಕಿತ ವ್ಯಕ್ತಿಗೆ ಸಾವು ಬಿಟ್ಟರೆ ಬೇರೆ ಯಾವುದೇ ಮಾರ್ಗವಿರ ಲಿಲ್ಲ. ಆದರೆ ಇದೀಗ ವೈದ್ಯಕೀಯ ಸಂಶೋಧನೆಗಳ ಫಲವಾಗಿ ಸೋಂಕಿನ ವ್ಯಕ್ತಿ, ಸಂಪೂರ್ಣ ಕಾಯಿಲೆ ಯಿಂದ ಮುಕ್ತರಾಗದಿದ್ದರೂ ಎಲ್ಲರಂತೆ ದೀರ್ಘಕಾಲ...

ಐದು ದಿನಗಳ ಬ್ಯಾಂಕಿಂಗ್ ಪದ್ಧತಿ ಜಾರಿಗೆ ಆಗ್ರಹಿಸಿ ನೌಕರರ ಪ್ರತಿಭಟನೆ

ಚಿಕ್ಕಮಗಳೂರು:  ಐದು ದಿನಗಳ ಬ್ಯಾಂಕಿಂಗ್ ಪದ್ಧತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ನಗರದ ಕೆನರಾ ಬ್ಯಾಂಕ್ ಮುಖ್ಯ ಕಚೇರಿ ಆವರಣದಲ್ಲಿ ಶುಕ್ರವಾರ ಬ್ಯಾಂಕ್ ಕಾರ್ಮಿಕ ಸಂಘಗಳ ಸಂಯು ಕ್ತ ವೇದಿಕೆ ಜಿಲ್ಲಾ ಸಮಿತಿಯಿಂದ...

Related Articles

ಕಾಫಿ ಉದ್ಯಮ ಉಳಿಸಲು ಸಂಘಟಿತ ಹೋರಾಟ ಅಗತ್ಯ

ಚಿಕ್ಕಮಗಳೂರು: ಕಾಫಿ ಬೆಳೆಗಾರರು ಎದುರಿಸುತ್ತಿರುವ ಕಾರ್ಮಿಕರ ಕೊರತೆ, ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಹೆಚ್ಚಳ, ಮಾರುಕಟ್ಟೆ...

ಮಲೆನಾಡಿನ ಕರಾಳ ಅರಣ್ಯ ಕಾಯ್ದೆ ರದ್ದುಪಡಿಸಿ

ಚಿಕ್ಕಮಗಳೂರು: ಮಲೆನಾಡಿನ ಜನರ ಬದುಕಿಗೆ ತೊಂದರೆ ಉಂಟುಮಾಡುತ್ತಿರುವ ಕರಾಳ ಅರಣ್ಯ ಕಾಯ್ದೆಗಳನ್ನು ರದ್ದುಪಡಿಸುವುದರ ಜೊತೆಗೆ, ಹಲವು...

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್‌ಗೆ 6.87 ಕೋಟಿ ರೂ. ನಿವ್ವಳ ಲಾಭ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್) 2025-26ನೇ ಸಾಲಿನ ಮಾರ್ಚ್ ಅಂತ್ಯಕ್ಕೆ...

ಜನಾಭಿಪ್ರಾಯ ಆಲಿಸಲು ಸಿಎಂ ಆಗಮನ ಜನಪರ ಕಾಳಜಿಯ ಸಾಕ್ಷಿ

ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿ ಕುರಿತು ಜನಸಾಮಾನ್ಯರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಹಾಗೂ ಆಕ್ಷೇಪಣೆಗಳನ್ನು ಆಲಿಸಲು...