ಚಿಕ್ಕಮಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ದೇಶದ ಕಾರ್ಮಿಕ ಸಂಘಟನೆಗಳು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಸುವಂತೆ ನೀಡಿರುವ ಕರೆಯ ಭಾಗವಾಗಿ ನಗರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು,ಕಟ್ಟಡಕಾರ್ಮಿಕರು,ಬ್ಯಾಂಕ್ ನೌಕರರು, ಕಾರ್ಮಿಕಸಂಘಟನೆಗಳ ಜಂಟಿ ಸಮಿತಿ, ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ ನ್ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಭಾರತಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಗ್ರಾಚ್ಯುಟಿ ಸೌಲಭ್ಯವನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಎಐಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ನಿವೃತ್ತರಾಗಿರುವ ಅಂಗನವಾಡಿ ಕಾರ್ಯಕರ್ತೆಯರುಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ನೀಡಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೂರಕ್ಕೂ ಹೆಚ್ಚು ವಯೋವೃದ್ಧ ನಿವೃತ್ತ ಅಂಗನವಾಡಿ ನೌಕರರು ತಮ್ಮ ಇಳಿ ವಯಸ್ಸಿನಲ್ಲಿ ಜೀವನ ನಿರ್ವಹಿಸಲು ಅನುಕೂಲ ವಾಗುವಂತೆ ಗ್ರಾಚ್ಯುಟಿ ಸೌಲಭ್ಯವನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.
ಅಂಗನವಾಡಿಕಾರ್ಯಕರ್ತೆಯರನ್ನು ಡಿ.ದರ್ಜೆನೌಕರರನ್ನಾಗಿ ಪರಿಗಣಿಸಬೇಕು, ಪೌಷ್ಟಿಕಾಹಾರ ವಿತರಣೆಗೆ ಜಾರಿತಂದಿರುವ ಎಫ್.ಆರ್ .ಎಸ್ ಪದ್ದತಿಯನ್ನು ಕೈಬಿಡಬೇಕು,ಗೌರವ ಧನದ ಬದಲಾಗಿ ಕನಿಷ್ಟವೇತನ ೨೬೦೦೦ ನಿಗಧಿಗೊಳಿಸಬೇಕು, ನೀಡುತ್ತಿರುವ ಗೌರವಧನ ಹೆಚ್ಚಿಸಬೇಕು,ನಿವೃತ್ತರಿಗೆ ಮಾಸಿಕ ೧೦೦೦೦ ಪಿಂಚಣಿ ಯೋಜನೆ ರೂಪಿಸಬೇಕು,ಸಮಗ್ರಶಿಶುಅಭಿವೃದ್ದಿಯೋಜನೆಗೆ ಕೇಂದ್ರಸರ್ಕಾರ ಅನುದಾನ ಹೆಚ್ಚಿಸಬೇಕು,ನಿವೃತ್ತಿಯ ವಯಸ್ಸನ್ನು ೬೫ಕ್ಕೆ ಏರಿಸಬೇಕು,ಹೆಚ್ಚುವರಿ ಪ್ರಭಾರ ನಿಯೋಜನೆಗಳಿಗೆ ಭತ್ಯೆನೀಡಬೇಕು,ಬೇರೆಇಲಾಖೆಗಳ ಕೆಲಸಕ್ಕೆ ನಿಯೋಜಿಸಬಾರದು ಮಾರಕವಾಗಿರುವ ನಾಲ್ಕು ಸಂಹಿತೆಗಳನ್ನು ಕೂಡಲೆ ಹಿಂಪಡೆಯಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಅಂಗನವಾಡಿ ಫೆಡರೇಷನ್ ರಾಜ್ಯಾಧ್ಯಕ್ಷ ಬಿ. ಅಮ್ಜದ್ ಜಿಲ್ಲಾಧ್ಯಕ್ಷೆ ಗ್ರೇಟ್ಟಾ ಫರ್ನಾಂಡಿಸ್ ವಿವಿಧ ತಾಲೂಕುಗಳ ಅಧ್ಯಕ್ಷರಾದ ,ಶೈಲಾ ಬಸವರಾಜು, ಯು. ಆರ್. ಪಾರ್ವತಮ್ಮ, ,ಶೈಲಾ ನಾರಾಯಣಗೌಡ, ಸವಿತಾ ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಸ್. ಎಲ್. ರಾಧಾ ಸುಂದರೇಶ್, ಎಐಟಿಯುಸಿ ರಾಜ್ಯ ಉಪಾಧ್ಯಕ್ಷರಾದ ಸಿ. ಧರ್ಮರಾಜು ಹಾಗೂ ಜಿ. ರಮೇಶ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.
Massive protest in the city against central labor policy
Leave a comment