Home Political News ಅವಿಶ್ವಾಸಕ್ಕೆ ಮುಂದಾದ ಸದಸ್ಯರ ತಂತ್ರಕ್ಕೆ ತಿರುಮಂತ್ರ ಹಾಕಿದ ತ್ರಿಮೂರ್ತಿ
Political News

ಅವಿಶ್ವಾಸಕ್ಕೆ ಮುಂದಾದ ಸದಸ್ಯರ ತಂತ್ರಕ್ಕೆ ತಿರುಮಂತ್ರ ಹಾಕಿದ ತ್ರಿಮೂರ್ತಿ

Share
Share

ಚಿಕ್ಕಮಗಳೂರು : ಸಖರಾಯಪಟ್ಟಣ ಹೋಬಳಿಯ ಜೋಡಿ ಹೋಚಿಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಜಿಲ್ಲೆಯ ಕೆಎಎಸ್ ಐಎಎಸ್ ಅಧಿಕಾರಿಗಳೇ ಬೆಚ್ಚಿಬೀಳಿಸುವ ರೀತಿಯ ಪ್ರಕರಣ ಒಂದಕ್ಕೆ ನಾಂದಿ ಹಾಡಿದ್ದಾರೆ. ತನ್ನ ವಿರುದ್ಧ ಅವಿಶ್ವಾಸ ನಿರ್ಣಯ ಕೈಗೊಳ್ಳಲು ಮುಂದಾದ ಪಂಚಾಯ್ತಿ ಸದಸ್ಯರಿಗೆ ತಿರುಮಂತ್ರ ಹೂಡಲು ಮಾಸ್ಟರ್ ಪ್ಲಾನ್ ಮಾಡಿದ ಈ ತ್ರಿಮೂರ್ತಿ ಜಿಲ್ಲಾ ಪಂಚಾಯ್ತಿ ಸಿಇಓ ತರೀಕೆರೆ ಎ.ಸಿ ಕಡೂರು ತಾಲ್ಲೂಕು ಪಂಚಾಯ್ತಿ ಇಓ ಸೇರಿದಂತೆ ಗ್ರಾಮ ಪಂಚಾಯ್ತಿ ಪಿಡಿಓ ನನ್ನು ಕೋರ್ಟ್ ಗೆ ಎಳೆದಿದ್ದಾರೆ.

ವರ್ಷದ ಹಿಂದೆ ಜೋಡಿ ಹೋಚಿಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷನಾಗಿ ಆಯ್ಕೆಯಾದ ಈ ತ್ರಿಮೂರ್ತಿ ಆರಂಭದಲ್ಲಿ ಎಲ್ಲಾ ಸದಸ್ಯರ ಜೊತೆ ಉತ್ತಮ ಹೊಂದಾಣಿಕೆ ಮಾಡಿಕೊಂಡಿದ್ದರು, ಕ್ರಮೇಣ ಸಂಬಂಧಗಳು ಹಳಸಿದ್ದರಿಂದ ಅಧ್ಯಕ್ಷರ ಮೇಲೆ ಅವಿಶ್ವಾಸ ತರಲು ಸದಸ್ಯರು ಮುಂದಾಗುತ್ತಾರೆ, ಈ ಬಗ್ಗೆ ಮಾಹಿತಿ ಪಡೆದುಕೊಂಡ ತ್ರಿಮೂರ್ತಿ ಅವಿಶ್ವಾಸಕ್ಕೆ ಸೆಡ್ಡು ಹೊಡೆಯಲು ಹೈಕೋರ್ಟ್ ಮೆಟ್ಟಿಲೇರಿ ಕೇವಿಯಟ್ ತರುವ ಮೂಲಕ ಎಲ್ಲ ಅಧಿಕಾರಿಗಳನ್ನು ನ್ಯಾಯಾಲಯದ ಕಟಕಟೆಯಲ್ಲಿ ನಿಲ್ಲುವಂತೆ ಮಾಡಿದ್ದಾರೆ.

ಹತ್ತು ಜನ ಸದಸ್ಯರಲ್ಲಿ ಎಂಟು ಮಂದಿ ಅವಿಶ್ವಾಸಕ್ಕೆ ಸಹಿ ಹಾಕಿ ತ್ರಿಮೂರ್ತಿಯನ್ನು ಇಳಿಸಲು ಯತ್ನಿಸಿದ್ದರು, ಇದೀಗ ತಮ್ಮ ಅಧಿಕಾರ ಉಳಿಸಿಕೊಳ್ಳಲು ವಿಕೇಂದ್ರಿಕರಣ ವ್ಯವಸ್ಥೆಯ ಬಲ ಬಳಸಿ ಜೋಡಿ ಹೋಚಿಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಭ್ರಷ್ಟಾಚಾರ ನಡೆದಿದ್ದು ಇದನ್ನು ತನ್ನ ತಲೆಗೆ ಕಟ್ಟಲು ಅವಿಶ್ವಾಸ ಮಂಡನೆ ಮಾಡುತ್ತಿದ್ದಾರೆ ಎಂದು ಕೋರ್ಟ್ ನಿಂದ ಕೇವಿಯಟ್ ಪಡೆದಿರುವ ತ್ರಿಮೂರ್ತಿ ವಿರೋಧಿಗಳಿಗೆ ಸಖತ್ ಟಾಂಗ್ ಕೊಟ್ಟಿದ್ದಾರೆ. ಸದ್ಯ ತರೀಕೆರೆ ಎ.ಸಿ ಗೆ ಅವಿಶ್ವಾಸ ಮಂಡನೆ ಮಾಡದಂತೆ ಆದೇಶವಿದ್ದು ಮಿನಿಮಂ ಆರು ತಿಂಗಳು ಬೀಸೊ ದೊಣ್ಣೆಯಿಂದ ತ್ರಿಮೂರ್ತಿ ತಪ್ಪಿಸಿಕೊಂಡಂತಾಗಿದೆ. ಈ ನಡುವೆ ಗ್ರಾಮ ಪಂಚಾಯ್ತಿ ಪಿಡಿಓ ಮಂಜುನಾಥ್ ನನ್ನು ಜಿಲ್ಲಾ ಪಂಚಾಯ್ತಿ ಸಿಇಓ ಎಚ್ ಎಸ್ ಕೀರ್ತನಾ ಅಮಾನತು ಮಾಡಿದ್ದಾರೆ.

ಇಷ್ಟೆಲ್ಲಾ ವಿಷಯಗಳ ಹಿಂದೆ ಇರುವ ಮಾಸ್ಟರ್ ಮೈಂಡ್ ಶ್ರೀ ಶ್ರೀ ಶ್ರೀ ಎಸ್ ಎಲ್ ಭೋಜೇಗೌಡ ಎಂಬುದು ತಿಳಿದವರ ಅಂಬೋಣ……..

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ ಮಳೆಯ ಆರ್ಭಟ – ಕಾಫಿಬೆಳೆ ನಾಶ – ರಸ್ತೆ ಹುಡುಕಾಡುವ ಕಾಟ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡ ಬಿಡದೆ ಮಳೆ ಸುರಿಯುತ್ತಿದೆ ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಮಳೆಯ ಆರ್ಭಟದಿಂದ ಕಾಫಿ ಕೊಳೆಯಲು ಆರಂಭವಾಗಿದೆ ಎಂದು ಕಾಫಿ ಬೆಳೆಗಾರರ...

12ನೇ ಶತಮಾನದಲ್ಲೇ ಕನ್ನಡಕ್ಕೆ ವಚನಾಕಾರಿಂದ ಬಹಳ ದೊಡ್ಡ ಕೊಡುಗೆ

ಚಿಕ್ಕಮಗಳೂರು: ವಚನಾಕಾರರು ಕನ್ನಡಕ್ಕೆ ಬಹಳ ದೊಡ್ಡ ಕೊಡುಗೆಯನ್ನು ೧೨ನೇ ಶತಮಾನದಲ್ಲೇ ನೀಡಿದ್ದಾರೆ. ಜಗಜ್ಯೋತಿ ಬಸವಣ್ಣನವರು ಕೊಟ್ಟ ಸಾಂಸ್ಕೃತಿಕ ಚಳುವಳಿ ಬದುಕಿನ ಅನುಭವಗಳು ಅನುಭಾವವಾಗಿ ಜನರ ಆಡುಭಾಷೆಯಲ್ಲಿ ಸಾಹಿತ್ಯ ರಚಿಸಿ ಇಡೀ ಜಗತ್ತಿಗೆ ನೈತಿಕ...

Related Articles

ಕೇಂದ್ರ ಸರ್ಕಾರದ ಅನುದಾನ ಹಾಗೂ ತೆರಿಗೆ ಪಾಲು ಕುರಿತು ನಮ್ಮ ಸರ್ಕಾರ ‘ಶ್ವೇತಪತ್ರ’ ಪತ್ರ

ವಿಧಾನಸಭೆ:  ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು...

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಎಂಬ ನಾಟಕ…!

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಲು ತುದಿಗಾಲಿನಲ್ಲಿ ನಿಂತಿದ್ದವರಿಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಲು...

ಬಿ.ಎಲ್.ಶಂಕರ್ ರಾಜಕೀಯ ಹಿನ್ನಡೆ ಏಕೆ ?

ಚಿಕ್ಕಮಗಳೂರು: ಬಿ.ಎಲ್.ಶಂಕರ್ ರಾಜಕೀಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದೊಡ್ಡ ಶಕ್ತಿಯಾಗಿದ್ದವರು ಹಿನ್ನಡೆ ಅನುಭವಿಸುತ್ತಿರುವುದು ಏಕೆ ?...

ಬಿ.ಎಲ್.ಶಂಕರ್ ಗೆ ಮತ್ತೆ ಮತ್ತೆ ಮಿಸ್…?

ಚಿಕ್ಕಮಗಳೂರು: ರಾಜ್ಯ ಸಭೆ ಅಥವಾ ವಿಧಾನ ಪರಿಷತ್ ಸ್ಥಾನಗಳಿಗೆ ಆಯ್ಕೆ ಮಾಡುವಾಗ ಬಿ.ಎಲ್.ಶಂಕರ್ ಹೆಸರು ಎವರೆಸ್ಟ್...