Home Political News ಅವಿಶ್ವಾಸಕ್ಕೆ ಮುಂದಾದ ಸದಸ್ಯರ ತಂತ್ರಕ್ಕೆ ತಿರುಮಂತ್ರ ಹಾಕಿದ ತ್ರಿಮೂರ್ತಿ
Political News

ಅವಿಶ್ವಾಸಕ್ಕೆ ಮುಂದಾದ ಸದಸ್ಯರ ತಂತ್ರಕ್ಕೆ ತಿರುಮಂತ್ರ ಹಾಕಿದ ತ್ರಿಮೂರ್ತಿ

Share
Share

ಚಿಕ್ಕಮಗಳೂರು : ಸಖರಾಯಪಟ್ಟಣ ಹೋಬಳಿಯ ಜೋಡಿ ಹೋಚಿಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಜಿಲ್ಲೆಯ ಕೆಎಎಸ್ ಐಎಎಸ್ ಅಧಿಕಾರಿಗಳೇ ಬೆಚ್ಚಿಬೀಳಿಸುವ ರೀತಿಯ ಪ್ರಕರಣ ಒಂದಕ್ಕೆ ನಾಂದಿ ಹಾಡಿದ್ದಾರೆ. ತನ್ನ ವಿರುದ್ಧ ಅವಿಶ್ವಾಸ ನಿರ್ಣಯ ಕೈಗೊಳ್ಳಲು ಮುಂದಾದ ಪಂಚಾಯ್ತಿ ಸದಸ್ಯರಿಗೆ ತಿರುಮಂತ್ರ ಹೂಡಲು ಮಾಸ್ಟರ್ ಪ್ಲಾನ್ ಮಾಡಿದ ಈ ತ್ರಿಮೂರ್ತಿ ಜಿಲ್ಲಾ ಪಂಚಾಯ್ತಿ ಸಿಇಓ ತರೀಕೆರೆ ಎ.ಸಿ ಕಡೂರು ತಾಲ್ಲೂಕು ಪಂಚಾಯ್ತಿ ಇಓ ಸೇರಿದಂತೆ ಗ್ರಾಮ ಪಂಚಾಯ್ತಿ ಪಿಡಿಓ ನನ್ನು ಕೋರ್ಟ್ ಗೆ ಎಳೆದಿದ್ದಾರೆ.

ವರ್ಷದ ಹಿಂದೆ ಜೋಡಿ ಹೋಚಿಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷನಾಗಿ ಆಯ್ಕೆಯಾದ ಈ ತ್ರಿಮೂರ್ತಿ ಆರಂಭದಲ್ಲಿ ಎಲ್ಲಾ ಸದಸ್ಯರ ಜೊತೆ ಉತ್ತಮ ಹೊಂದಾಣಿಕೆ ಮಾಡಿಕೊಂಡಿದ್ದರು, ಕ್ರಮೇಣ ಸಂಬಂಧಗಳು ಹಳಸಿದ್ದರಿಂದ ಅಧ್ಯಕ್ಷರ ಮೇಲೆ ಅವಿಶ್ವಾಸ ತರಲು ಸದಸ್ಯರು ಮುಂದಾಗುತ್ತಾರೆ, ಈ ಬಗ್ಗೆ ಮಾಹಿತಿ ಪಡೆದುಕೊಂಡ ತ್ರಿಮೂರ್ತಿ ಅವಿಶ್ವಾಸಕ್ಕೆ ಸೆಡ್ಡು ಹೊಡೆಯಲು ಹೈಕೋರ್ಟ್ ಮೆಟ್ಟಿಲೇರಿ ಕೇವಿಯಟ್ ತರುವ ಮೂಲಕ ಎಲ್ಲ ಅಧಿಕಾರಿಗಳನ್ನು ನ್ಯಾಯಾಲಯದ ಕಟಕಟೆಯಲ್ಲಿ ನಿಲ್ಲುವಂತೆ ಮಾಡಿದ್ದಾರೆ.

ಹತ್ತು ಜನ ಸದಸ್ಯರಲ್ಲಿ ಎಂಟು ಮಂದಿ ಅವಿಶ್ವಾಸಕ್ಕೆ ಸಹಿ ಹಾಕಿ ತ್ರಿಮೂರ್ತಿಯನ್ನು ಇಳಿಸಲು ಯತ್ನಿಸಿದ್ದರು, ಇದೀಗ ತಮ್ಮ ಅಧಿಕಾರ ಉಳಿಸಿಕೊಳ್ಳಲು ವಿಕೇಂದ್ರಿಕರಣ ವ್ಯವಸ್ಥೆಯ ಬಲ ಬಳಸಿ ಜೋಡಿ ಹೋಚಿಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಭ್ರಷ್ಟಾಚಾರ ನಡೆದಿದ್ದು ಇದನ್ನು ತನ್ನ ತಲೆಗೆ ಕಟ್ಟಲು ಅವಿಶ್ವಾಸ ಮಂಡನೆ ಮಾಡುತ್ತಿದ್ದಾರೆ ಎಂದು ಕೋರ್ಟ್ ನಿಂದ ಕೇವಿಯಟ್ ಪಡೆದಿರುವ ತ್ರಿಮೂರ್ತಿ ವಿರೋಧಿಗಳಿಗೆ ಸಖತ್ ಟಾಂಗ್ ಕೊಟ್ಟಿದ್ದಾರೆ. ಸದ್ಯ ತರೀಕೆರೆ ಎ.ಸಿ ಗೆ ಅವಿಶ್ವಾಸ ಮಂಡನೆ ಮಾಡದಂತೆ ಆದೇಶವಿದ್ದು ಮಿನಿಮಂ ಆರು ತಿಂಗಳು ಬೀಸೊ ದೊಣ್ಣೆಯಿಂದ ತ್ರಿಮೂರ್ತಿ ತಪ್ಪಿಸಿಕೊಂಡಂತಾಗಿದೆ. ಈ ನಡುವೆ ಗ್ರಾಮ ಪಂಚಾಯ್ತಿ ಪಿಡಿಓ ಮಂಜುನಾಥ್ ನನ್ನು ಜಿಲ್ಲಾ ಪಂಚಾಯ್ತಿ ಸಿಇಓ ಎಚ್ ಎಸ್ ಕೀರ್ತನಾ ಅಮಾನತು ಮಾಡಿದ್ದಾರೆ.

ಇಷ್ಟೆಲ್ಲಾ ವಿಷಯಗಳ ಹಿಂದೆ ಇರುವ ಮಾಸ್ಟರ್ ಮೈಂಡ್ ಶ್ರೀ ಶ್ರೀ ಶ್ರೀ ಎಸ್ ಎಲ್ ಭೋಜೇಗೌಡ ಎಂಬುದು ತಿಳಿದವರ ಅಂಬೋಣ……..

Share

Leave a comment

Leave a Reply

Your email address will not be published. Required fields are marked *

Don't Miss

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

Related Articles

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ಡಿ.ಕೆ.ಗೆ ಪ್ರಾರಂಭದಲ್ಲಿ ಡಿಚ್ಚಿ ! ಹರಿ ಬ್ರೇಕ್, ಸಿದ್ದು ಸ್ಟೀರಿಂಗ್ ಯಾವ ಕಡೆ ತಿರುಗುತ್ತದೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾರನ್ನು ನಂಬಿದ್ದರು ಅವರೇ ಕೈ ಕೊಡುವ ಸೂಚನೆ ಅರಿತು ರಾಹುಲ್...