Home ತರೀಕೆರೆ ರಸ್ತೆ ಕಾಮಗಾರಿ ಉತ್ತಮವಾಗಿರಲಿ
HomeLatest Newsnamma chikmagalurTarikere

ತರೀಕೆರೆ ರಸ್ತೆ ಕಾಮಗಾರಿ ಉತ್ತಮವಾಗಿರಲಿ

Share
Share

ತರೀಕೆರೆ: ತರೀಕೆರೆ ಪಟ್ಟಣದ ಹೈವೇ ರಸ್ತೆ ಹಲವು ವರ್ಷಗಳಿಂದ ಕಾಮಗಾರಿ ಕಾಣದೆ ಜನ ಹಿಡಿ ಶಾಪ ಹಾಕುತ್ತಾ ಓಡಾಡುತ್ತಿದ್ದರು.ಈಗ ರಸ್ತೆ ಅಭಿವೃದ್ಧಿಗೆ ಕಾಲ ಕೂಡಿ ಬಂದಿದೆ.ಇದಕ್ಕೆ ಕಾರಣವಾದವರನ್ನು ಮೆಚ್ಚಲೇ ಬೇಕು ನಿಜ .ಹಲವು ವರ್ಷಗಳ ನಂತರ ನಡೆಯುತ್ತಿರುವ ಕಾಮಗಾರಿ ನೋಡಿದರೆ ಮುಂದೆ ಏನು ಕಾದಿದೆಯೋ ಎಂಬ ಚಿಂತೆ ಮಾಡುವಂತೆ ಆಗಿದೆ.

ಎರಡು ತಿಂಗಳಿಂದ ನಡೆಯುತ್ತಿರುವ ಕಾಮಗಾರಿ ಮುಗಿಯುವುದು ಯಾವಾಗ ಎಂಬ ಚಿಂತೆ ಕಾಡುತ್ತಿದೆ.ಸೇತುವೆ ನಿರ್ಮಾಣ ಮಾಡಬೇಕಾಗಿರುವುದರಿಂದ ರಸ್ತೆಯ ಇಕ್ಕೆಲಗಳಲ್ಲೂ ಬಗೆದಿರುವುದರಿಂದ ಅಚೆ- ಇಚೆ ಸಂಚರಿಸುವುದು ಕಷ್ಟವಾಗಿದೆ .ಪಟ್ಟಣದ ಒಳಗಿನ ರಸ್ತೆಗಳಿಗೆ ಹೋಗುವುದು ದುಸ್ತರವಾಗಿದೆ ಎಂದು ಜನ ಪೇಚಾಡುತ್ತಿದ್ದಾರೆ.ಅದರಲ್ಲೂ ಸಾವು_ ನೋವು ನೋಡಲು ಹೋಗುವ ಜನರಿಗೆ ಕಡು ಕಷ್ಟ. ಇದರಿಂದ ಕಳೆದ ಎರಡು ತಿಂಗಳಿಂದ ವಿದ್ಯುತ್ ಅಭಾವ ಸೃಷ್ಟಿಯಾಗಿದೆ ಮಳೆ ಬೇರೆ ಬರುತ್ತಿರುವುದರಿಂದ ಕೆಸರಿನಿಂದ ಜನ ಓಡಾಡಲು ತೊಂದರೆ ಆಗಿದೆ.

ಬಸ್ ನಿಲ್ದಾಣ ಅಕ್ಕ_ಪಕ್ಕ ಕಟ್ಟಡಗಳು ಅರ್ಧಕ್ಕೆ ಮುಚ್ಚಿ ಹೋಗುವಂತೆ ಆಗಿದೆ.ವ್ಯಾಪಾರಿಗಳು ಮಾತನಾಡುವುದಿಲ್ಲ ನಿಜ ನಮ್ಮ ಗತಿ ಇಷ್ಟೇ ಎನ್ನುವಂತೆ ಆಗಿದೆ ಎನ್ನುತ್ತಿದ್ದಾರೆ.

ತಾಂತ್ರಿಕವಾಗಿ ರಸ್ತೆಯ ನಿರ್ಮಾಣ ಮಾಡುವುದನ್ನು ಬಿಟ್ಟು ಬೇಕಾಬಿಟ್ಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ ಎಂದುಇನ್ನೂ ಕೆಲವರು ಹೇಗೋ ರಸ್ತೆ ಕೆಲಸ ಮಾಡಲಿ ಎಂದು ಕೆಲವರು ಹೇಳುತ್ತಾರೆ.

ಗುತ್ತಿಗೆದಾರ ಕಾಮಗಾರಿ ಮುಗಿಸಿ ಕೈ ತೊಳೆದುಕೊಂಡರೆ ಸಾಕು ಕೊಡುವುದನ್ನು ಕೊಟ್ಟು ಬಿಡುವುದನ್ನು ಬಿಟ್ಟು ಬಿಲ್ ಕರೆಸಿಕೊಳ್ಳುವ ತವಕದಲ್ಲಿ ಇದ್ದಾನೆ.ಹೋದೆಯಾ ಪಿಶಾಚಿ ಎಂದರೆ ಬಂದೆಯಾ ಗವಾಕ್ಷಿ ಎನ್ನುವಂತೆ ಆಗದೆ ರಸ್ತೆ ನಿರ್ಮಾಣ ಜನರಿಗೆ ಅನುಕೂಲ ಆದರೆ ಅಷ್ಟೇ ಸಾಕು.ಈಗಲೂ ಕಾಲ ಮಿಂಚಿಲ್ಲ ಆಗಿರುವ ತಪ್ಪುಗಳನ್ನು ಸರಿಪಡಿಸಿ ರಸ್ತೆ ಮಾಡಲಿ ಎಂದು ಜನರ ಆಸೆ.

May the Tarikere road work go well.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...