Home ತರೀಕೆರೆ ರಸ್ತೆ ಕಾಮಗಾರಿ ಉತ್ತಮವಾಗಿರಲಿ
HomeLatest Newsnamma chikmagalurTarikere

ತರೀಕೆರೆ ರಸ್ತೆ ಕಾಮಗಾರಿ ಉತ್ತಮವಾಗಿರಲಿ

Share
Share

ತರೀಕೆರೆ: ತರೀಕೆರೆ ಪಟ್ಟಣದ ಹೈವೇ ರಸ್ತೆ ಹಲವು ವರ್ಷಗಳಿಂದ ಕಾಮಗಾರಿ ಕಾಣದೆ ಜನ ಹಿಡಿ ಶಾಪ ಹಾಕುತ್ತಾ ಓಡಾಡುತ್ತಿದ್ದರು.ಈಗ ರಸ್ತೆ ಅಭಿವೃದ್ಧಿಗೆ ಕಾಲ ಕೂಡಿ ಬಂದಿದೆ.ಇದಕ್ಕೆ ಕಾರಣವಾದವರನ್ನು ಮೆಚ್ಚಲೇ ಬೇಕು ನಿಜ .ಹಲವು ವರ್ಷಗಳ ನಂತರ ನಡೆಯುತ್ತಿರುವ ಕಾಮಗಾರಿ ನೋಡಿದರೆ ಮುಂದೆ ಏನು ಕಾದಿದೆಯೋ ಎಂಬ ಚಿಂತೆ ಮಾಡುವಂತೆ ಆಗಿದೆ.

ಎರಡು ತಿಂಗಳಿಂದ ನಡೆಯುತ್ತಿರುವ ಕಾಮಗಾರಿ ಮುಗಿಯುವುದು ಯಾವಾಗ ಎಂಬ ಚಿಂತೆ ಕಾಡುತ್ತಿದೆ.ಸೇತುವೆ ನಿರ್ಮಾಣ ಮಾಡಬೇಕಾಗಿರುವುದರಿಂದ ರಸ್ತೆಯ ಇಕ್ಕೆಲಗಳಲ್ಲೂ ಬಗೆದಿರುವುದರಿಂದ ಅಚೆ- ಇಚೆ ಸಂಚರಿಸುವುದು ಕಷ್ಟವಾಗಿದೆ .ಪಟ್ಟಣದ ಒಳಗಿನ ರಸ್ತೆಗಳಿಗೆ ಹೋಗುವುದು ದುಸ್ತರವಾಗಿದೆ ಎಂದು ಜನ ಪೇಚಾಡುತ್ತಿದ್ದಾರೆ.ಅದರಲ್ಲೂ ಸಾವು_ ನೋವು ನೋಡಲು ಹೋಗುವ ಜನರಿಗೆ ಕಡು ಕಷ್ಟ. ಇದರಿಂದ ಕಳೆದ ಎರಡು ತಿಂಗಳಿಂದ ವಿದ್ಯುತ್ ಅಭಾವ ಸೃಷ್ಟಿಯಾಗಿದೆ ಮಳೆ ಬೇರೆ ಬರುತ್ತಿರುವುದರಿಂದ ಕೆಸರಿನಿಂದ ಜನ ಓಡಾಡಲು ತೊಂದರೆ ಆಗಿದೆ.

ಬಸ್ ನಿಲ್ದಾಣ ಅಕ್ಕ_ಪಕ್ಕ ಕಟ್ಟಡಗಳು ಅರ್ಧಕ್ಕೆ ಮುಚ್ಚಿ ಹೋಗುವಂತೆ ಆಗಿದೆ.ವ್ಯಾಪಾರಿಗಳು ಮಾತನಾಡುವುದಿಲ್ಲ ನಿಜ ನಮ್ಮ ಗತಿ ಇಷ್ಟೇ ಎನ್ನುವಂತೆ ಆಗಿದೆ ಎನ್ನುತ್ತಿದ್ದಾರೆ.

ತಾಂತ್ರಿಕವಾಗಿ ರಸ್ತೆಯ ನಿರ್ಮಾಣ ಮಾಡುವುದನ್ನು ಬಿಟ್ಟು ಬೇಕಾಬಿಟ್ಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ ಎಂದುಇನ್ನೂ ಕೆಲವರು ಹೇಗೋ ರಸ್ತೆ ಕೆಲಸ ಮಾಡಲಿ ಎಂದು ಕೆಲವರು ಹೇಳುತ್ತಾರೆ.

ಗುತ್ತಿಗೆದಾರ ಕಾಮಗಾರಿ ಮುಗಿಸಿ ಕೈ ತೊಳೆದುಕೊಂಡರೆ ಸಾಕು ಕೊಡುವುದನ್ನು ಕೊಟ್ಟು ಬಿಡುವುದನ್ನು ಬಿಟ್ಟು ಬಿಲ್ ಕರೆಸಿಕೊಳ್ಳುವ ತವಕದಲ್ಲಿ ಇದ್ದಾನೆ.ಹೋದೆಯಾ ಪಿಶಾಚಿ ಎಂದರೆ ಬಂದೆಯಾ ಗವಾಕ್ಷಿ ಎನ್ನುವಂತೆ ಆಗದೆ ರಸ್ತೆ ನಿರ್ಮಾಣ ಜನರಿಗೆ ಅನುಕೂಲ ಆದರೆ ಅಷ್ಟೇ ಸಾಕು.ಈಗಲೂ ಕಾಲ ಮಿಂಚಿಲ್ಲ ಆಗಿರುವ ತಪ್ಪುಗಳನ್ನು ಸರಿಪಡಿಸಿ ರಸ್ತೆ ಮಾಡಲಿ ಎಂದು ಜನರ ಆಸೆ.

May the Tarikere road work go well.

Share

Leave a comment

Leave a Reply

Your email address will not be published. Required fields are marked *

Don't Miss

ತರೀಕೆರೆ-ಕಡೂರು-ಚಿಕ್ಕಮಗಳೂರು: ಅದಲು-ಬದಲು ಕಾಂಗ್ರೆಸ್, ಬಿಜೆಪಿ ಕಿತ್ತಾಟ !

ಚಿಕ್ಕಮಗಳೂರು: ರಸ್ತೆ ಕಾಮಗಾರಿಗಳು, ಭದ್ರ ಉಪಕಣಿವೆ ಯೋಜನೆಗಳಿಗೆ ಕಾಂಗ್ರೆಸ್ ಶಾಸಕರುಗಳಲ್ಲಿ “ಸಿಟ್ಟು” ಮಡಿಗಟ್ಟಿದೆ. ಇದಕ್ಕೆ ಪ್ರತಿಯಾಗಿ ವಿಧಾನ ಪರಿಷತ್ ಸದಸ್ಯಮತ್ತು ಬಿಜೆಪಿ ಮುಖಂಡ ಸಿ.ಟಿ.ರವಿ ಹಾದಿ ರಂಪ,ಬೀದಿ ರಂಪ ಮಾಡಿಕೊಂಡು ದೂರುಪ್ರತಿದೂರು...

ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆಯಿಂದ ಶಾಸಕ ಸಿ.ಟಿ ರವಿ ಹಲ್ಲೆಗೆ ಯತ್ನ

ಚಿಕ್ಕಮಗಳೂರು: ರಾಂಪುರ ರಸ್ತೆ ಕಾಮಗಾರಿ ವೀಕ್ಷಣೆ ಸಂದರ್ಭದಲ್ಲಿ ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ಹಾಗೂ ವಿಧಾನಪರಿಷತ್ ಶಾಸಕ ಸಿ.ಟಿ ರವಿ ರವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು...

Related Articles

ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಜನಪ್ರತಿನಿಧಿಗಳಿಂದ ಸ್ವಾಗತ

ಚಿಕ್ಕಮಗಳೂರು:  ಬೇಸಿಗೆ ರಜೆ ಮುಗಿದು ಇಂದಿನಿಂದ ಶಾಲೆಗಳು ಪ್ರಾರಂಭಗೊಂಡಿದ್ದು, ಅತ್ಯಂತ ಹುರುಪಿನಿಂದ ಶಾಲೆಗಳಿಗೆ ಆಗಮಿಸಿದ ಮಕ್ಕಳಿಗೆ...

ಮತದಾರರ ಪಟ್ಟಿ ಶುದ್ಧೀಕರಣಕ್ಕೆ ಆದ್ಯತೆ ನೀಡಿ

ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಸುಸೂತ್ರ ಹಾಗೂ ಪಾರದರ್ಶಕವಾಗಿ ನಡೆಯಬೇಕಾದರೆ ದೋಷಮುಕ್ತ ಮತದಾರರ ಪಟ್ಟಿ ಅತ್ಯಗತ್ಯ....

 ಮಕ್ಕಳ ಶಾಲಾ ಹಾಜರಾತಿ ಬಗ್ಗೆ ಪೋಷಕರು ನಿಗಾ ವಹಿಸಬೇಕು

ಚಿಕ್ಕಮಗಳೂರು: ಮಕ್ಕಳು ಪ್ರತಿದಿನ ತಪ್ಪದೆ ಶಾಲೆಗೆ ಹಾಜರಾಗಬೇಕು. ಶಿಕ್ಷಣದಲ್ಲಿ ನಿರಂತರತೆ ಅತ್ಯಂತ ಮುಖ್ಯವಾಗಿದ್ದು, ಪೋಷಕರು ಈ...

ನಿವೇಶನಕ್ಕಾಗಿ ಒತ್ತಾಯಿಸಿ 4ನೇ ದಿನಕ್ಕೆ ಮುಂದುವರೆದ ಧರಣಿ

ಮೂಡಿಗೆರೆ: ತಾಲೂಕಿನ ಮಣ್ಣಿಕೆರೆ ಗ್ರಾಮದಲ್ಲಿ ಟಿಯುಸಿಐ ಮತ್ತು ವಸತಿಗಾಗಿ ಹೋರಾಟ ವೇದಿಕೆ ವತಿಯಿಂದ ನಿವೇಶನ ರಹಿತರು...