Home namma chikmagalur ಚಿಕ್ಕಮಗಳೂರು-ಶಿವಮೊಗ್ಗ ಜಿಲ್ಲೆಗಳ ಪಂಚ ಗ್ಯಾರಂಟಿ ಪ್ರಾಧಿಕಾರದ ಸಭೆ
namma chikmagalurchikamagalurHomeLatest News

ಚಿಕ್ಕಮಗಳೂರು-ಶಿವಮೊಗ್ಗ ಜಿಲ್ಲೆಗಳ ಪಂಚ ಗ್ಯಾರಂಟಿ ಪ್ರಾಧಿಕಾರದ ಸಭೆ

Share
?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Share

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಜನಪ್ರಿಯ ಪಂಚ ಗ್ಯಾರಂಟಿ ಯೋಜನೆಗಳು ಮತ್ತು ಭದ್ರಾ ಕಾಡಾ ಪ್ರಾಧಿಕಾರದ ಸವಲತ್ತುಗಳನ್ನು ಮನೆ ಮನಗಳಿಗೆ ಮುಟ್ಟಿಸುವ ಜವಾಬ್ದಾರಿ ಸದಸ್ಯರ ಮೇಲಿದೆ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಪಿ.ಅಂಶುಮಂತ್ ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ಭದ್ರಾ ಕಾಡಾ ಪ್ರಾಧಿಕಾರದ ಸಭಾಂಗಣದಲ್ಲಿ ಸೋಮವಾರ ನಡೆದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪಂಚ ಗ್ಯಾರಂಟಿ ಪ್ರಾಧಿಕಾರದ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಭದ್ರಾ ಕಾಡಾ ಪ್ರಾಧಿಕಾರದಿಂದ ರೈತರಿಗೆ ಅನೇಕ ಮಾರ್ಗಸೂಚಿಗಳನ್ನು ನೀಡಲಾಗಿದೆ. ಹೆಚ್ಚು ನೀರು ಬಳಕೆಯಿಂದ ಭೂಮಿ ಹದಗೆಡುವ ಸಾಧ್ಯತೆಯಿದ್ದು, ಆದ್ದರಿಂದ ನಿಯಮಿತ ನೀರು ಬಳಸಿಕೊಂಡು ಭೂಮಿ ಫಲವವತ್ತೆ ಕಾಪಾಡಿಕೊಳ್ಳಬೇಕು ಎಂದರು.

ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಿಸಿದ್ದು, ಮುಂದಿನ ದಿನಗಳಲ್ಲಿ ಹೊಸದಾಗಿ ಆಹಾರದ ಕಿಟ್‌ಗಳನ್ನು ವಿತರಿಸುವ ಗುರಿ ಹೊಂದಿದೆ ಎಂದು ತಿಳಿಸಿದರು.

ದೇಶದ ಬೆನ್ನಲುಬಾಗಿರುವ ರೈತರಿಗೆ ನೀರಿನ ಸಮರ್ಪಕ ಬಳಕೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಪ್ರಾಧಿಕಾರ ನಿರಂತರವಾಗಿ ಮಾಡುತ್ತಿದೆ ಎಂದರು.

ಚಿಕ್ಕಮಗಳೂರು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ‘ಪಂಚ ನದಿಗಳ ಉಗಮ ಸ್ಥಾನವಾದ ಜಿಲ್ಲೆಗೆ ವಿಶೇಷ ಗೌರವವಿದೆ. ಅಲ್ಲದೇ ಜಿಲ್ಲೆಯಿಂದ ಹರಿಯುವ ನೀರು ಶಿವಮೊಗ್ಗದತ್ತ ಸಾಗಿ ಲಕ್ಷಾಂತರ ಜನರಿಗೆ ಕುಡಿಯಲು ಬಳಕೆ ಆಗುತ್ತಿದೆ’ ಎಂದರು.

ಗ್ಯಾರಂಟಿ ಯೋಜನೆ ಹಾಗೂ ಸಮರ್ಪಕ ನೀರು ಬಳಸುವ ಸಂಬಂಧ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗುವುದು. ಶಿವಮೊಗ್ಗದಲ್ಲೂ ಈ ರೀತಿಯ ಕಾರ್ಯ ಚಟುವಟಿಕೆಗಳನ್ನು ಕೈಗೊಂಡರೆ ಉಪಯೋಗಿಯಾಗಲಿದೆ. ಜನರಿಂದ ತೆರಿಗೆ ಪಡೆದು ಜನರಿಗಾಗಿ ವ್ಯಯಿಸುವ ಕೆಲಸವನ್ನು ಗ್ಯಾರಂಟಿ ಯೋಜನೆ ಮೂಲಕ ಸರ್ಕಾರ ಮಾಡುತ್ತಿದೆ ಎಂದರು.

ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್ ಮಾತನಾಡಿ, ‘ಪಂಚ ಗ್ಯಾರಂಟಿ ಯೋಜನೆ ಜಿಲ್ಲೆಯಲ್ಲಿ ಅನುಷ್ಠಾನಗೊಂಡು ಶೇ 98.5 ರಷ್ಟು ಪ್ರಗತಿ ಸಾಧಿಸಿದೆ. ಉದ್ಯೋಗ ಮೇಳ ನಡೆಸಿ ಶೇ 90ರಷ್ಟು ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಭದ್ರಾ ಕಾಡಾ ಪ್ರಾಧಿಕಾರದ ಆಡಳಿತಾಧಿಕಾರಿ ಆರ್.ಸತೀಶ, ಭೂ ಅಭಿವೃದ್ದಿ ಬ್ಯಾಂಕ್ ಅಧಿಕಾರಿ ತಾಂತ್ರಿಕ್, ಪ್ರಭಾರ ಕೃಷಿ ಅಧಿಕಾರಿ ಕೆ.ಪ್ರಶಾಂತ್, ಭೂ ಅಭಿವೃದ್ದಿ ಅಧಿಕಾರಿ ನಾಗೇಶ್ ಡೊಂಗ್ರೆ, ಚಿಕ್ಕಮಗಳೂರು-ಶಿವಮೊಗ್ಗ ತಾಲ್ಲೂಕು ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Meeting of the Pancha Guarantee Authority of Chikkamagaluru-Shivamogga districts

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...