Home namma chikmagalur ಚಿಕ್ಕಮಗಳೂರು-ಶಿವಮೊಗ್ಗ ಜಿಲ್ಲೆಗಳ ಪಂಚ ಗ್ಯಾರಂಟಿ ಪ್ರಾಧಿಕಾರದ ಸಭೆ
namma chikmagalurchikamagalurHomeLatest News

ಚಿಕ್ಕಮಗಳೂರು-ಶಿವಮೊಗ್ಗ ಜಿಲ್ಲೆಗಳ ಪಂಚ ಗ್ಯಾರಂಟಿ ಪ್ರಾಧಿಕಾರದ ಸಭೆ

Share
?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Share

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಜನಪ್ರಿಯ ಪಂಚ ಗ್ಯಾರಂಟಿ ಯೋಜನೆಗಳು ಮತ್ತು ಭದ್ರಾ ಕಾಡಾ ಪ್ರಾಧಿಕಾರದ ಸವಲತ್ತುಗಳನ್ನು ಮನೆ ಮನಗಳಿಗೆ ಮುಟ್ಟಿಸುವ ಜವಾಬ್ದಾರಿ ಸದಸ್ಯರ ಮೇಲಿದೆ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಪಿ.ಅಂಶುಮಂತ್ ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ಭದ್ರಾ ಕಾಡಾ ಪ್ರಾಧಿಕಾರದ ಸಭಾಂಗಣದಲ್ಲಿ ಸೋಮವಾರ ನಡೆದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪಂಚ ಗ್ಯಾರಂಟಿ ಪ್ರಾಧಿಕಾರದ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಭದ್ರಾ ಕಾಡಾ ಪ್ರಾಧಿಕಾರದಿಂದ ರೈತರಿಗೆ ಅನೇಕ ಮಾರ್ಗಸೂಚಿಗಳನ್ನು ನೀಡಲಾಗಿದೆ. ಹೆಚ್ಚು ನೀರು ಬಳಕೆಯಿಂದ ಭೂಮಿ ಹದಗೆಡುವ ಸಾಧ್ಯತೆಯಿದ್ದು, ಆದ್ದರಿಂದ ನಿಯಮಿತ ನೀರು ಬಳಸಿಕೊಂಡು ಭೂಮಿ ಫಲವವತ್ತೆ ಕಾಪಾಡಿಕೊಳ್ಳಬೇಕು ಎಂದರು.

ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಿಸಿದ್ದು, ಮುಂದಿನ ದಿನಗಳಲ್ಲಿ ಹೊಸದಾಗಿ ಆಹಾರದ ಕಿಟ್‌ಗಳನ್ನು ವಿತರಿಸುವ ಗುರಿ ಹೊಂದಿದೆ ಎಂದು ತಿಳಿಸಿದರು.

ದೇಶದ ಬೆನ್ನಲುಬಾಗಿರುವ ರೈತರಿಗೆ ನೀರಿನ ಸಮರ್ಪಕ ಬಳಕೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಪ್ರಾಧಿಕಾರ ನಿರಂತರವಾಗಿ ಮಾಡುತ್ತಿದೆ ಎಂದರು.

ಚಿಕ್ಕಮಗಳೂರು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ‘ಪಂಚ ನದಿಗಳ ಉಗಮ ಸ್ಥಾನವಾದ ಜಿಲ್ಲೆಗೆ ವಿಶೇಷ ಗೌರವವಿದೆ. ಅಲ್ಲದೇ ಜಿಲ್ಲೆಯಿಂದ ಹರಿಯುವ ನೀರು ಶಿವಮೊಗ್ಗದತ್ತ ಸಾಗಿ ಲಕ್ಷಾಂತರ ಜನರಿಗೆ ಕುಡಿಯಲು ಬಳಕೆ ಆಗುತ್ತಿದೆ’ ಎಂದರು.

ಗ್ಯಾರಂಟಿ ಯೋಜನೆ ಹಾಗೂ ಸಮರ್ಪಕ ನೀರು ಬಳಸುವ ಸಂಬಂಧ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗುವುದು. ಶಿವಮೊಗ್ಗದಲ್ಲೂ ಈ ರೀತಿಯ ಕಾರ್ಯ ಚಟುವಟಿಕೆಗಳನ್ನು ಕೈಗೊಂಡರೆ ಉಪಯೋಗಿಯಾಗಲಿದೆ. ಜನರಿಂದ ತೆರಿಗೆ ಪಡೆದು ಜನರಿಗಾಗಿ ವ್ಯಯಿಸುವ ಕೆಲಸವನ್ನು ಗ್ಯಾರಂಟಿ ಯೋಜನೆ ಮೂಲಕ ಸರ್ಕಾರ ಮಾಡುತ್ತಿದೆ ಎಂದರು.

ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್ ಮಾತನಾಡಿ, ‘ಪಂಚ ಗ್ಯಾರಂಟಿ ಯೋಜನೆ ಜಿಲ್ಲೆಯಲ್ಲಿ ಅನುಷ್ಠಾನಗೊಂಡು ಶೇ 98.5 ರಷ್ಟು ಪ್ರಗತಿ ಸಾಧಿಸಿದೆ. ಉದ್ಯೋಗ ಮೇಳ ನಡೆಸಿ ಶೇ 90ರಷ್ಟು ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಭದ್ರಾ ಕಾಡಾ ಪ್ರಾಧಿಕಾರದ ಆಡಳಿತಾಧಿಕಾರಿ ಆರ್.ಸತೀಶ, ಭೂ ಅಭಿವೃದ್ದಿ ಬ್ಯಾಂಕ್ ಅಧಿಕಾರಿ ತಾಂತ್ರಿಕ್, ಪ್ರಭಾರ ಕೃಷಿ ಅಧಿಕಾರಿ ಕೆ.ಪ್ರಶಾಂತ್, ಭೂ ಅಭಿವೃದ್ದಿ ಅಧಿಕಾರಿ ನಾಗೇಶ್ ಡೊಂಗ್ರೆ, ಚಿಕ್ಕಮಗಳೂರು-ಶಿವಮೊಗ್ಗ ತಾಲ್ಲೂಕು ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Meeting of the Pancha Guarantee Authority of Chikkamagaluru-Shivamogga districts

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...