Home Political News ಕೋಟಾ ಶ್ರೀನಿವಾಸ ಪೂಜಾರಿ ಬೂಟಾಟಿಕೆ ರಾಜಕೀಯ ಬಿಡಲಿ : ಎಚ್ ಎಚ್ ದೇವರಾಜ್
Political News

ಕೋಟಾ ಶ್ರೀನಿವಾಸ ಪೂಜಾರಿ ಬೂಟಾಟಿಕೆ ರಾಜಕೀಯ ಬಿಡಲಿ : ಎಚ್ ಎಚ್ ದೇವರಾಜ್

Share
Share

ಚಿಕ್ಕಮಗಳೂರು :

ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಬೂಟಾಟಿಕೆ ರಾಜಕಾರಣ ಮಾಡುವುದನ್ನು ನಿಲ್ಲಿಸಿ ಕೂಡಲೇ ಕಾಫಿ ಬೆಳೆಗಾರರು ನೆರವಿಗೆ ಧಾವಿಸಬೇಕು ಎಂದು ಕೆಪಿಸಿಸಿ ವಕ್ತಾರ ಎಚ್ ಎಚ್ ದೇವರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಒಂದೆಡೆ ಕಾಫಿ ಬೆಳೆಗಾರರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳೋದು ಮತ್ತೊಂದೆಡೆ ಬ್ಯಾಂಕ್ ಅಧಿಕಾರಿಗಳ ಜೊತೆ ಸಭೆ ನಡೆಸುವ ಡ್ರಾಮ ಬಿಡಬೇಕು ಎಂದು ಕೋಟಾ ಶ್ರೀನಿವಾಸ ಪೂಜಾರಿ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

ಕೇಂದ್ರ ಸರ್ಕಾರದ ಹಣಕಾಸು ಸಚಿವರನ್ನು ವಾಣಿಜ್ಯ ಸಚಿವರನ್ನು ಭೇಟಿ ಮಾಡಿ ಕಾಫಿ ಬೆಳೆಗಾರರಿಗೆ ಮರಣ ಶಾಸನ ಆಗಿರುವ ಸರ್ಫೇಸಿ ಕಾಯ್ದೆ ರದ್ದುಗೊಳಿಸುವಂತೆ ಮನವಿ ಮಾಡಿ ಎಂದಿರುವ ದೇವರಾಜ್ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದಾಗಿ ಕಾಫಿ ಬೆಳೆ ಸಂಪೂರ್ಣ ನಾಶವಾಗಿದ್ದು ಬೆಳೆಗಾರರ ಸರಣಿ ಆತ್ಮಹತ್ಯೆ ಸಂಭವವಿದೆ. ಕೂಡಲೇ ಕೇಂದ್ರ ಸರ್ಕಾರ ನೆರವಿಗೆ ಧಾವಿಸಿ ವಿದರ್ಭ ಮಾದರಿಯ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಅವರು ಒತ್ತಾಯಿಸಿದರು.

ಸಂಸದ ಕೋಟಾ ಶ್ರೀನಿವಾಸ ಪೂಜಾರಿಗೆ ಅನುಭವದ ಕೊರತೆ ಇದೆ ಬ್ಯಾಂಕರ್ ಗಳ ಸಭೆ ಕೇವಲ ಕಣ್ಣೊರೆಸುವ ತಂತ್ರವಾಗಿದ್ದು ಇದರಿಂದ ಯಾವುದೇ ಪ್ರಯೋಜನ ಇಲ್ಲ ಕಾಫಿ ಬೆಳೆಗಾರರಿಗೆ ಟೋಪಿ ಹಾಕುವುದನ್ನು ಮೊದಲು ನಿಲ್ಲಿಸಿ ಶೋಭಾ ಕರಂದ್ಲಾಜೆ ಧಾಟಿಯಲ್ಲಿ ನೀವು ಹೋಗಬೇಡಿ ಎಂದು ಎಚ್ಚರಿಸಿರುವ ಎಚ್ ಎಚ್ ದೇವರಾಜ್ ಮುಂದಿನ ದಿನಗಳಲ್ಲಿ ಪೂಜಾರಿ ಹೋದಲೆಲ್ಲಾ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದೇ ವೇಳೆ ಎಂಎಲ್.ಸಿ ಸಿ.ಟಿ ರವಿ ಬಗ್ಗೆಯೂ ಟೀಕಾಸ್ತ್ರ ಪ್ರಯೋಗಿಸಿರುವ ದೇವರಾಜ್ ರಾಜ್ಯ ಸರ್ಕಾರ ಅಭಿವೃದ್ಧಿ ಮಾಡುತ್ತಿದೆ ಎಂಬುದು ರವಿಗೆ ಇವಾಗ ಜ್ಞಾನೋದಯ ಆಗಿದೆ. ಅಭಿವೃದ್ಧಿಗೆ ಬೆಂಬಲ ಇದೆ ಎನ್ನುವ ಸಿ.ಟಿ ರವಿ ಬೆಂಗಳೂರಿನಲ್ಲಿ ಹೋಗಿ ರಾಜ್ಯ ಸರ್ಕಾರವನ್ನು ಟೀಕಿಸಿ ಚಿಕ್ಕಮಗಳೂರಲ್ಲಿ ಬಂದು ಅಭಿವೃದ್ಧಿ ಗೆ ಬೆಂಬಲ ಅನ್ನೋದನ್ನು ಬಿಡಬೇಕು ಇದರಿಂದ ರವಿ ಹತಾಶೆ ಎದ್ದು ಕಾಣುತ್ತದೆ. ನಮಗೆ ರವಿ ಸಹಕಾರ ಅಗತ್ಯವಿಲ್ಲ ಎಂದಿರುವ ದೇವರಾಜ್
ಮನಃ ಪರಿವರ್ತನೆ ಆಗಿದ್ದರೆ ಕಾಂಗ್ರೆಸ್ ಸರ್ಕಾರಕ್ಕೆ ಸಹಕಾರ ಇದೆ ಎಂದು ಹೇಳಲಿ ಎಂದಿದ್ದಾರೆ

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಸಿ.ಟಿ.ರವಿ ಸೋಲಿನ ಹತಾಶೆಯಿಂದ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ

ಚಿಕ್ಕಮಗಳೂರು: ಸಿ.ಟಿ.ರವಿ ಅವರು ಸೋಲಿನ ಹತಾಶೆಯಿಂದ ಎಚ್.ಡಿ.ತಮ್ಮಯ್ಯ ವಿರುದ್ಧ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಕಾಂಗ್ರೆಸ್‌...

20 ವರ್ಷ ಹೊರಗಿನವರೆ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿದ್ದಾರೆ

ಮೂಡಿಗೆರೆ:‘ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿರೋಧ ಪಕ್ಷಗಳು ಹತಾಶೆಯಿಂದ ಬಾಯಿ ಚಪಲಕ್ಕಾಗಿ ಮಾತನಾಡುತ್ತಿವೆ’ ಎಂದು...

ರಾಜ್ಯದಲ್ಲಿ ನವೆಂಬರ್ ಕ್ರಾಂತಿಯೋ ! ಭ್ರಾಂತಿಯೋ ?

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿ ಎರಡೂವರೆ ವರ್ಷ ಪೂರೈಸುತ್ತಿದೆ.ಸರ್ಕಾರ ರಚನೆಯಾದಾಗಿನಿಂದ ಇಲ್ಲಿಯವರೆಗೆ “ಮುಖ್ಯಮಂತ್ರಿ” ಬದಲಾಗುತ್ತಾರೆ...

ಶೃಂಗೇರಿ ಲಡಾಯಿ: ಶಾಸಕ ಟಿ.ಡಿ.ರಾಜೇಗೌಡ V/S ಜೀವರಾಜ್

ಶೃಂಗೇರಿ: ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮತ್ತು ಬಿಜೆಪಿ ಮಾಜಿ ಸಚಿವ ಶಾಸಕ ಜೀವರಾಜ್...