Home Political News ಕೋಟಾ ಶ್ರೀನಿವಾಸ ಪೂಜಾರಿ ಬೂಟಾಟಿಕೆ ರಾಜಕೀಯ ಬಿಡಲಿ : ಎಚ್ ಎಚ್ ದೇವರಾಜ್
Political News

ಕೋಟಾ ಶ್ರೀನಿವಾಸ ಪೂಜಾರಿ ಬೂಟಾಟಿಕೆ ರಾಜಕೀಯ ಬಿಡಲಿ : ಎಚ್ ಎಚ್ ದೇವರಾಜ್

Share
Share

ಚಿಕ್ಕಮಗಳೂರು :

ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಬೂಟಾಟಿಕೆ ರಾಜಕಾರಣ ಮಾಡುವುದನ್ನು ನಿಲ್ಲಿಸಿ ಕೂಡಲೇ ಕಾಫಿ ಬೆಳೆಗಾರರು ನೆರವಿಗೆ ಧಾವಿಸಬೇಕು ಎಂದು ಕೆಪಿಸಿಸಿ ವಕ್ತಾರ ಎಚ್ ಎಚ್ ದೇವರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಒಂದೆಡೆ ಕಾಫಿ ಬೆಳೆಗಾರರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳೋದು ಮತ್ತೊಂದೆಡೆ ಬ್ಯಾಂಕ್ ಅಧಿಕಾರಿಗಳ ಜೊತೆ ಸಭೆ ನಡೆಸುವ ಡ್ರಾಮ ಬಿಡಬೇಕು ಎಂದು ಕೋಟಾ ಶ್ರೀನಿವಾಸ ಪೂಜಾರಿ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

ಕೇಂದ್ರ ಸರ್ಕಾರದ ಹಣಕಾಸು ಸಚಿವರನ್ನು ವಾಣಿಜ್ಯ ಸಚಿವರನ್ನು ಭೇಟಿ ಮಾಡಿ ಕಾಫಿ ಬೆಳೆಗಾರರಿಗೆ ಮರಣ ಶಾಸನ ಆಗಿರುವ ಸರ್ಫೇಸಿ ಕಾಯ್ದೆ ರದ್ದುಗೊಳಿಸುವಂತೆ ಮನವಿ ಮಾಡಿ ಎಂದಿರುವ ದೇವರಾಜ್ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದಾಗಿ ಕಾಫಿ ಬೆಳೆ ಸಂಪೂರ್ಣ ನಾಶವಾಗಿದ್ದು ಬೆಳೆಗಾರರ ಸರಣಿ ಆತ್ಮಹತ್ಯೆ ಸಂಭವವಿದೆ. ಕೂಡಲೇ ಕೇಂದ್ರ ಸರ್ಕಾರ ನೆರವಿಗೆ ಧಾವಿಸಿ ವಿದರ್ಭ ಮಾದರಿಯ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಅವರು ಒತ್ತಾಯಿಸಿದರು.

ಸಂಸದ ಕೋಟಾ ಶ್ರೀನಿವಾಸ ಪೂಜಾರಿಗೆ ಅನುಭವದ ಕೊರತೆ ಇದೆ ಬ್ಯಾಂಕರ್ ಗಳ ಸಭೆ ಕೇವಲ ಕಣ್ಣೊರೆಸುವ ತಂತ್ರವಾಗಿದ್ದು ಇದರಿಂದ ಯಾವುದೇ ಪ್ರಯೋಜನ ಇಲ್ಲ ಕಾಫಿ ಬೆಳೆಗಾರರಿಗೆ ಟೋಪಿ ಹಾಕುವುದನ್ನು ಮೊದಲು ನಿಲ್ಲಿಸಿ ಶೋಭಾ ಕರಂದ್ಲಾಜೆ ಧಾಟಿಯಲ್ಲಿ ನೀವು ಹೋಗಬೇಡಿ ಎಂದು ಎಚ್ಚರಿಸಿರುವ ಎಚ್ ಎಚ್ ದೇವರಾಜ್ ಮುಂದಿನ ದಿನಗಳಲ್ಲಿ ಪೂಜಾರಿ ಹೋದಲೆಲ್ಲಾ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದೇ ವೇಳೆ ಎಂಎಲ್.ಸಿ ಸಿ.ಟಿ ರವಿ ಬಗ್ಗೆಯೂ ಟೀಕಾಸ್ತ್ರ ಪ್ರಯೋಗಿಸಿರುವ ದೇವರಾಜ್ ರಾಜ್ಯ ಸರ್ಕಾರ ಅಭಿವೃದ್ಧಿ ಮಾಡುತ್ತಿದೆ ಎಂಬುದು ರವಿಗೆ ಇವಾಗ ಜ್ಞಾನೋದಯ ಆಗಿದೆ. ಅಭಿವೃದ್ಧಿಗೆ ಬೆಂಬಲ ಇದೆ ಎನ್ನುವ ಸಿ.ಟಿ ರವಿ ಬೆಂಗಳೂರಿನಲ್ಲಿ ಹೋಗಿ ರಾಜ್ಯ ಸರ್ಕಾರವನ್ನು ಟೀಕಿಸಿ ಚಿಕ್ಕಮಗಳೂರಲ್ಲಿ ಬಂದು ಅಭಿವೃದ್ಧಿ ಗೆ ಬೆಂಬಲ ಅನ್ನೋದನ್ನು ಬಿಡಬೇಕು ಇದರಿಂದ ರವಿ ಹತಾಶೆ ಎದ್ದು ಕಾಣುತ್ತದೆ. ನಮಗೆ ರವಿ ಸಹಕಾರ ಅಗತ್ಯವಿಲ್ಲ ಎಂದಿರುವ ದೇವರಾಜ್
ಮನಃ ಪರಿವರ್ತನೆ ಆಗಿದ್ದರೆ ಕಾಂಗ್ರೆಸ್ ಸರ್ಕಾರಕ್ಕೆ ಸಹಕಾರ ಇದೆ ಎಂದು ಹೇಳಲಿ ಎಂದಿದ್ದಾರೆ

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಕೇಂದ್ರ ಸರ್ಕಾರದ ಅನುದಾನ ಹಾಗೂ ತೆರಿಗೆ ಪಾಲು ಕುರಿತು ನಮ್ಮ ಸರ್ಕಾರ ‘ಶ್ವೇತಪತ್ರ’ ಪತ್ರ

ವಿಧಾನಸಭೆ:  ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು...

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಎಂಬ ನಾಟಕ…!

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಲು ತುದಿಗಾಲಿನಲ್ಲಿ ನಿಂತಿದ್ದವರಿಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಲು...

ಬಿ.ಎಲ್.ಶಂಕರ್ ರಾಜಕೀಯ ಹಿನ್ನಡೆ ಏಕೆ ?

ಚಿಕ್ಕಮಗಳೂರು: ಬಿ.ಎಲ್.ಶಂಕರ್ ರಾಜಕೀಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದೊಡ್ಡ ಶಕ್ತಿಯಾಗಿದ್ದವರು ಹಿನ್ನಡೆ ಅನುಭವಿಸುತ್ತಿರುವುದು ಏಕೆ ?...

ಬಿ.ಎಲ್.ಶಂಕರ್ ಗೆ ಮತ್ತೆ ಮತ್ತೆ ಮಿಸ್…?

ಚಿಕ್ಕಮಗಳೂರು: ರಾಜ್ಯ ಸಭೆ ಅಥವಾ ವಿಧಾನ ಪರಿಷತ್ ಸ್ಥಾನಗಳಿಗೆ ಆಯ್ಕೆ ಮಾಡುವಾಗ ಬಿ.ಎಲ್.ಶಂಕರ್ ಹೆಸರು ಎವರೆಸ್ಟ್...