Home Latest News ಗಾಂಧಿ ಜಯಂತಿಗೆ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಅರ್ಪಣೆ
Latest NewschikamagalurHomenamma chikmagalur

ಗಾಂಧಿ ಜಯಂತಿಗೆ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಅರ್ಪಣೆ

Share
Share

ಚಿಕ್ಕಮಗಳೂರು: ಅತ್ಯಾಧುನಿಕ ಮತ್ತು ಆಕರ್ಷಕವಾದ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ನಿರ್ಮಾಣ ಮಾಡಿ ಮಹಾತ್ಮ ಗಾಂಧಿ ಜಯಂತಿ ದಿನವೇ ಅರ್ಪಿಸುತ್ತಿರುವುದು ವಿಶೇಷ.

ಬ್ರಿಗೇಡ್ ಗ್ರೂಪ್ ನವರು ಹೊಸಮನೆ ಸರ್ಕಲ್ ನಲ್ಲಿ 8.000 ಚದುರ ಅಡಿ ಜಾಗದಲ್ಲಿ ಹದಿನೈದು ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸ್ಮಾರಕ ನಿರ್ಮಾಣ ಮಾಡಿ ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಗಳನ್ನು ಪ್ರತಿಷ್ಟಾಪನೆ ಮಾಡುತ್ತಿರುವುದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ಸ್ಮಾರಕದ ಹಿಂಬದಿಯ ಗೋಡೆಯಲ್ಲಿ ನೂಲುವ ಚರಕ ಹಿಡಿದಿರುವ ಮಹಾತ್ಮ ಗಾಂಧಿಜೀಯವರ ಚಿತ್ರ ಕಲ್ಲುಗಳಿಂದ ಅಳವಡಿಸಲಾಗಿದ್ದು ಕಂಬಗಳ ಮೇಲೆ ಕೂಡ ಅಂಬೇಡ್ಕರ್ ಮತ್ತು ಗಾಂಧಿಜೀ ಚಿತ್ರಗಳಿವೆ.

ಬೆಲೆ ಬಾಳುವ ಕಲ್ಲುಗಳಿಂದ ಇಡೀ ಸ್ಮಾರಕ ನಿರ್ಮಿಸಿರುವುದು ಸುತ್ತಲೂ ಕಲ್ಲು ಹಾಸು ಒದಿಸುವುದರ ಜೊತೆಗೆ ಸುತ್ತ ಮುತ್ತಲಿನ ರಸ್ತೆಗಳಿಗೆ ಟಾರ್ ಹಾಕಿಸಲಾಗಿದೆ. ಝಗ ಮಗಿಸುವ ಬೆಳಕಿನ ಚಿತ್ತಾರ ಮತ್ತು ” ಟವರ್ ಕ್ಲಾಕ್ ” ಜನರ ಮನ ಸೆಳೆಯುವುದು ಖಚಿತ.ಇದರ ಜೊತೆಗೆ ಉತ್ತಮ ಕೆಫೆ ಕೂಡ ಇರುತ್ತದೆ ಎನ್ನಲಾಗಿದೆ.

ಕಳೆದ ಒಂಬತ್ತು ತಿಂಗಳಿಂದ ನೂರಾರು ಕೆಲಸಗಾರರು ,ಪರಿಣಿತರು ಮತ್ತು ಇಂಜಿನಿಯರ್ ಗಳು ಕೆಲಸ ಮಾಡಿದ್ದಾರೆ. ಚಿಕ್ಕಮಗಳೂರು ಜನರಷ್ಟೇ ಅಲ್ಲ ಪ್ರವಾಸಿಗರು ಬಂದು ಹೋಗುವಂತಹ ತಾಣವಾಗುವುದರಲ್ಲಿ ಅನುಮಾನವಿಲ್ಲಾ.

ಅಪಕರ್ಷಕ ವಿಶೇಷ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ನಿರ್ಮಾಣ ಮಾಡಿರುವ ಬ್ರಿಗೇಡ್ ಗ್ರೂಪ್ ಮಾಲೀಕರು ಜಿಲ್ಲೆಗೆ ನೀಡಿರುವ ಕೊಡುಗೆಯನ್ನು ಮುಕ್ತವಾಗಿ ಶ್ಲಾಘಸಿ ಸದಾಭಿನಂದನೆಗಳನ್ನು ಹೇಳ ಬೇಕು.

Memorial dedication of freedom fighters on Gandhi Jayanti

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...