Home namma chikmagalur chikamagalur ಭಾರಿ ಮಳೆಯ ಆರ್ಭಟಕ್ಕೆ ಮೆಸ್ಕಾಂಗೆ 3.21 ಕೋಟಿ ಹಾನಿ
chikamagalurHomeLatest Newsnamma chikmagalur

ಭಾರಿ ಮಳೆಯ ಆರ್ಭಟಕ್ಕೆ ಮೆಸ್ಕಾಂಗೆ 3.21 ಕೋಟಿ ಹಾನಿ

Share
Share

ಚಿಕ್ಕಮಗಳೂರು: ಮುಂಗಾರುಪೂರ್ವ ಮಳೆ ಮತ್ತು ಭಾರಿ ಗಾಳಿಯ ಆರ್ಭಟಕ್ಕೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮೆಸ್ಕಾಂ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ.

ಏಪ್ರಿಲ್ ಒಂದರಿಂದ ಜೂನ್ ಒಂದರವರೆಗೆ ಮೆಸ್ಕಾಂ ಅಂಕಿ ಅಂಶಗಳ ಪ್ರಕಾರ ಪ್ರಕೃತಿಯ ವಿಕೋಪಕ್ಕೆ ಜಿಲ್ಲೆಯಲ್ಲಿ ಬರೋಬ್ಬರಿ 3.21 ಕೋಟಿ ರೂಪಾಯಿಗಳಿಗೂ ಅಧಿಕ ನಷ್ಟ ಉಂಟಾಗಿದ್ದು ದೊಡ್ಡ ಹೊಡೆತ ಬಿದ್ದಿದೆ. ಜಿಲ್ಲೆಯಾದ್ಯಂತ ಬೀಸಿದ ಬಿರುಗಾಳಿಗೆ ಸಿಲುಕಿ ಒಟ್ಟು 1881 ವಿದ್ಯುತ್ ಕಂಬಗಳು ಧರೆಗುರುಳಿವೆ.

ಕಂಬಗಳು ನೆಲಕಚ್ಚಿದ್ದಲ್ಲದೆ, ಜಿಲ್ಲೆಯ ಒಟ್ಟು 37.62 ಕಿಲೋಮೀಟರ್ ಉದ್ದದ ವಿದ್ಯುತ್ ಮಾರ್ಗಗಳು ಸಂಪೂರ್ಣವಾಗಿ ಹಾನಿಗೀಡಾಗಿದೆ ಇದರಿಂದಾಗಿ ಜಿಲ್ಲೆಯ ಹಲವು ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿತ್ತು. ಆದರೆ ಮೆಸ್ಕಾಂ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿ ಯುದ್ಧೋಪಾದಿಯಲ್ಲಿ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.

ಹಾನಿಗೊಳಗಾಗಿದ್ದ ಎಲ್ಲಾ 37.62 ಕಿಲೋಮೀಟರ್ ವಿದ್ಯುತ್ ಮಾರ್ಗಗಳನ್ನು ಸರಿಪಡಿಸಲಾಗಿದ್ದು, ಬಿದ್ದಿದ್ದ ಕಂಬಗಳ ಜಾಗದಲ್ಲಿ ಹೊಸ ಕಂಬಗಳನ್ನು ಅಳವಡಿಸುವ ಮೂಲಕ ಬಹುತೇಕ ಕಡೆಗಳಲ್ಲಿ ವಿದ್ಯುತ್ ಸಮಸ್ಯೆಯನ್ನು ಯಶಸ್ವಿಯಾಗಿ ಬಗೆಹರಿಸಲಾಗಿದೆ.

MESCOM suffers Rs 3.21 crore damage due to heavy rains

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ರೈಲ್ವೆ ಲೆವೆಲ್ ಕ್ರಾಸಿಂಗ್ ರಸ್ತೆ ಮೇಲ್ಸೇತುವೆ ಕಾಮಗಾರಿಗೆ ಚಾಲನೆ

ಚಿಕ್ಕಮಗಳೂರು:  ದೇಶದ ಅಭಿವೃದ್ಧಿಯ ಸಂಕೇತವೇ ರೈಲ್ವೆಯಾಗಿದ್ದು, ರೈಲ್ವೆ ಇಲಾಖೆಯನ್ನು ಎಷ್ಟು ಮಟ್ಟಿಗೆ ಅಭಿವೃದ್ಧಿಪಡಿಸುತ್ತೇವೆಯೋ ಅಷ್ಟು ದೇಶಕ್ಕೆ ಒಳ್ಳೆಯದಾಗುತ್ತದೆ ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಸಂದೇಶವಾಗಿದೆ ಎಂದು ಕೇಂದ್ರ ರೈಲ್ವೆ ರಾಜ್ಯ...

ಗುಡುಗು ಸಿಡಿಲಿನ ಆರ್ಭಟಕ್ಕೆ ಬಸ್ ತಂಗುದಾಣದನಲ್ಲಿದ್ದ ದಂಪತಿ ಗಾಯ

ಎನ್.ಆ‌ರ್.ಪುರ: ಕಾಫಿನಾಡಿನಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಗುಡುಗು ಸಿಡಿಲಿನ ಆರ್ಭಟಕ್ಕೆ ದಂಪತಿ ಗಾಯಗೊಂಡಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಸೀಗುವಾನಿ ಗ್ರಾಮದಲ್ಲಿ ಸಂಭವಿಸಿದೆ. ಮಂಜುನಾಥ ಮತ್ತು ಮಮತಾ ಎಂಬ ದಂಪತಿ ಎನ್.ಆರ್.ಪುರ...

Related Articles

ಧಾರಾಕಾರ ಮಳೆಗೆ ಕಾಫಿಸಿಟಿ ಫುಲ್ ಕೂಲ್

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ವರುಣನ ಅಬ್ಬರ ಜೋರಾಗಿದ್ದು ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು ಕಾಫಿ ಸಿಟಿ ಈಗ...

ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶ

ಕಳಸ: ಸರ್ಕಾರದ ಬೇಜವಾಬ್ದಾರಿತನ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶದ ತೊಡೆ ತಟ್ಟಿದ್ದಾರೆ. ಸ್ವಾತಂತ್ರ್ಯ...

ಅಜ್ಜಂಪುರದ ರಸ್ತೆ ಅಪಘಾತದಲ್ಲಿ ಚಾಲಕನ ಸಾವು

ಅಜ್ಜಂಪುರ: ಬುಕ್ಕಂಬುದಿಯಿಂದ ಅಜ್ಜಂಪುರ ರಸ್ತೆಯ ಸಿದ್ದಾಪುರ ತಿರುವಿನಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸಿದ್ದಾಪುರ...

ಮಲ್ಲೇಗೌಡ ಆಸ್ಪತ್ರೆಯಲ್ಲಿ ಯುವಕನ ಮೇಲೆ ಹಲ್ಲೆ

ಚಿಕ್ಕಮಗಳೂರು: ಹಳೇ ಗಲಾಟೆಯೊಂದರ ವಿಚಾರವಾಗಿ ನಗರದ ಮಲ್ಲೇಗೌಡ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ಮುಂಭಾಗದಲ್ಲೇ ಯುವಕನೋರ್ವನ...