Home namma chikmagalur ಹಿರೇಕೊಳಲೆ ಕೆರೆಗೆ ಶಾಸಕರಿಂದ ಬಾಗಿನ ಅರ್ಪಣೆ
namma chikmagalurchikamagalurHomeLatest News

ಹಿರೇಕೊಳಲೆ ಕೆರೆಗೆ ಶಾಸಕರಿಂದ ಬಾಗಿನ ಅರ್ಪಣೆ

Share
Share

ಚಿಕ್ಕಮಗಳೂರು:  ನಗರಕ್ಕೆ ನೀರು ಪೂರೈಸುವ ಹಿರೇಕೊಳಲೆ ಕೆರೆಗೆ ಇಂದು ಬೆಳಿಗ್ಗೆ ಶಾಸಕ ಹೆಚ್.ಡಿ.ತಮ್ಮಯ್ಯ ಸಪತ್ನೀಕರಾಗಿ ಬಾಗಿನ ಅರ್ಪಿಸುವ ಮೂಲಕ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಗರಕ್ಕೆ ಸುಮಾರು ೪೦ ವರ್ಷದಿಂದ ಗುರುತ್ವಾಕರ್ಷಣೆ ಮೂಲಕ ಕುಡಿಯುವ ನೀರಿನ ವ್ಯವಸ್ಥೆಯನ್ನು ಯಾವುದೇ ಖರ್ಚಿಲ್ಲದೆ ಸರಬರಾಜು ಮಾಡಲಾಗುತ್ತಿದೆ ಎಂದು ಹೇಳಿದರು.

ರಾಜ್ಯದ ಕೆಲವೇ ಕೆಲವು ನಗರದ ಕುಡಿಯುವ ನೀರು ಸರಬರಾಜು ಮಾಡುವ ಗುರುತ್ವಾಕರ್ಷಣಾ ಕೆರೆಗಳಲ್ಲಿ ಈ ಹಿರೇಕೊಳಲೆ ಕೆರೆಯು ಒಂದು. ನಗರದ ೪೦ ಸಾವಿರ ಜನಸಂಖ್ಯೆಗೆ ಅನುಗುಣವಾಗಿ ಅಂದು ಈ ಕೆರೆಯನ್ನು ನಿರ್ಮಾಣ ಮಾಡಿ ಈ ನೀರನ್ನು ಜನರು ಕುಡಿಯುವುದಕ್ಕೆ ಬಳಸುತ್ತಿದ್ದಾರೆ. ಇಂತಹ ಸುಂದರವಾದ ಕೆರೆ ಇತಿಹಾಸದಲ್ಲಿ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ನೀರು ತುಂಬಿ ಕೋಡಿ ಬಿದ್ದಿದೆ ಎಂದು ಹೇಳಿದರು.

ಅಮೃತ್ ಯೋಜನೆಯಡಿ ೨೪ ಗಂಟೆ ನೀರು ಪೂರೈಸಬೇಕಿತ್ತು. ಆದರೆ ತಾಂತ್ರಿಕ ಕಾರಣದಿಂದ ಎರಡು ದಿನಕೊಮ್ಮೆ ಸತತವಾಗಿ ನೀರನ್ನು ಸರಬರಾಜು ಮಾಡುತ್ತಿದ್ದೇವೆ ಎಂದ ಅವರು ಯಗಚಿ ಡ್ಯಾಂ ಹಾಗೂ ಹಿರೇಕೊಳಲೆ ಕೆರೆ ಕೋಡಿ ಬಿದ್ದಿರುವುದರಿಂದ ಇನ್ನು ಎರಡು ವರ್ಷಗಳ ಕಾಲ ನಗರದ ಜನರಿಗೆ ಕುಡಿಯುವ ನೀರಿಗೆ ಯಾವುದೇ ತೊಂದರೆ ಇರುವುದಿಲ್ಲ ಎಂದು ಹೇಳಿದರು.

ನರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ತಹಶೀಲ್ದಾರ್ ರೇಷ್ಮಾಶೆಟ್ಟಿ, ಉಪಾಧಕ್ಷ ಅನುಮಧುಕರ್, ಹಿರೇಕೊಳಲೆ ಗ್ರಾ.ಪಂ ಅಧಕ್ಷೆ ಕವಿತಾ ಹಾಗೂ ಉಪಾಧ್ಯಕ್ಷರು, ಸದಸ್ಯರು, ಗಾಮಸ್ಥರು ಮುಂತಾದವರು ಹಾಜರಿದ್ದರು.

MLA offers alms to Hirekolale Lake

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಸ್ಥಾಪನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್ ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ...

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...