Home namma chikmagalur ಹಿರೇಕೊಳಲೆ ಕೆರೆಗೆ ಶಾಸಕರಿಂದ ಬಾಗಿನ ಅರ್ಪಣೆ
namma chikmagalurchikamagalurHomeLatest News

ಹಿರೇಕೊಳಲೆ ಕೆರೆಗೆ ಶಾಸಕರಿಂದ ಬಾಗಿನ ಅರ್ಪಣೆ

Share
Share

ಚಿಕ್ಕಮಗಳೂರು:  ನಗರಕ್ಕೆ ನೀರು ಪೂರೈಸುವ ಹಿರೇಕೊಳಲೆ ಕೆರೆಗೆ ಇಂದು ಬೆಳಿಗ್ಗೆ ಶಾಸಕ ಹೆಚ್.ಡಿ.ತಮ್ಮಯ್ಯ ಸಪತ್ನೀಕರಾಗಿ ಬಾಗಿನ ಅರ್ಪಿಸುವ ಮೂಲಕ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಗರಕ್ಕೆ ಸುಮಾರು ೪೦ ವರ್ಷದಿಂದ ಗುರುತ್ವಾಕರ್ಷಣೆ ಮೂಲಕ ಕುಡಿಯುವ ನೀರಿನ ವ್ಯವಸ್ಥೆಯನ್ನು ಯಾವುದೇ ಖರ್ಚಿಲ್ಲದೆ ಸರಬರಾಜು ಮಾಡಲಾಗುತ್ತಿದೆ ಎಂದು ಹೇಳಿದರು.

ರಾಜ್ಯದ ಕೆಲವೇ ಕೆಲವು ನಗರದ ಕುಡಿಯುವ ನೀರು ಸರಬರಾಜು ಮಾಡುವ ಗುರುತ್ವಾಕರ್ಷಣಾ ಕೆರೆಗಳಲ್ಲಿ ಈ ಹಿರೇಕೊಳಲೆ ಕೆರೆಯು ಒಂದು. ನಗರದ ೪೦ ಸಾವಿರ ಜನಸಂಖ್ಯೆಗೆ ಅನುಗುಣವಾಗಿ ಅಂದು ಈ ಕೆರೆಯನ್ನು ನಿರ್ಮಾಣ ಮಾಡಿ ಈ ನೀರನ್ನು ಜನರು ಕುಡಿಯುವುದಕ್ಕೆ ಬಳಸುತ್ತಿದ್ದಾರೆ. ಇಂತಹ ಸುಂದರವಾದ ಕೆರೆ ಇತಿಹಾಸದಲ್ಲಿ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ನೀರು ತುಂಬಿ ಕೋಡಿ ಬಿದ್ದಿದೆ ಎಂದು ಹೇಳಿದರು.

ಅಮೃತ್ ಯೋಜನೆಯಡಿ ೨೪ ಗಂಟೆ ನೀರು ಪೂರೈಸಬೇಕಿತ್ತು. ಆದರೆ ತಾಂತ್ರಿಕ ಕಾರಣದಿಂದ ಎರಡು ದಿನಕೊಮ್ಮೆ ಸತತವಾಗಿ ನೀರನ್ನು ಸರಬರಾಜು ಮಾಡುತ್ತಿದ್ದೇವೆ ಎಂದ ಅವರು ಯಗಚಿ ಡ್ಯಾಂ ಹಾಗೂ ಹಿರೇಕೊಳಲೆ ಕೆರೆ ಕೋಡಿ ಬಿದ್ದಿರುವುದರಿಂದ ಇನ್ನು ಎರಡು ವರ್ಷಗಳ ಕಾಲ ನಗರದ ಜನರಿಗೆ ಕುಡಿಯುವ ನೀರಿಗೆ ಯಾವುದೇ ತೊಂದರೆ ಇರುವುದಿಲ್ಲ ಎಂದು ಹೇಳಿದರು.

ನರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ತಹಶೀಲ್ದಾರ್ ರೇಷ್ಮಾಶೆಟ್ಟಿ, ಉಪಾಧಕ್ಷ ಅನುಮಧುಕರ್, ಹಿರೇಕೊಳಲೆ ಗ್ರಾ.ಪಂ ಅಧಕ್ಷೆ ಕವಿತಾ ಹಾಗೂ ಉಪಾಧ್ಯಕ್ಷರು, ಸದಸ್ಯರು, ಗಾಮಸ್ಥರು ಮುಂತಾದವರು ಹಾಜರಿದ್ದರು.

MLA offers alms to Hirekolale Lake

Share

Leave a comment

Leave a Reply

Your email address will not be published. Required fields are marked *

Don't Miss

ಮಕ್ಕಳಪ್ರತಿಭೆ ರಾಷ್ಟ್ರಮಟ್ಟದಲ್ಲಿ ಬೆಳಗಿಸಿದ ಕ್ರೀಡಾ ಶಿಕ್ಷಕ

ತರೀಕೆರೆ: ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ವಿಷಯಗಳ ಜೊತೆಗೆ ದೈಹಿಕ ಶಿಕ್ಷಣವು ಬಹು ಮುಖ್ಯ. ಮಕ್ಕಳ ಆಸಕ್ತಿ ಗಮನಿಸಿ ಪ್ರೋತ್ಸಾಹ ನೀಡುವುದರ ಜೊತೆಗೆ ತರಭೇತಿ ನೀಡಿದರೆ ತಾಲ್ಲೂಕು, ಜಿಲ್ಲೆ,ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಕೀರ್ತಿ ಗಳಿಸಲು...

ಮೂರು ಗುಂಪುಗಳಲ್ಲಿ 40ಕ್ಕೂ ಅಧಿಕ ಕಾಡಾನೆಗಳು ದಾಳಿ

ಮೂಡಿಗೆರೆ: ತಾಲ್ಲೂಕಿನ ಗೋಣಿಬಿಡು ಹೋಬಳಿಯ ಜಿ.ಹೊಸಳ್ಳಿ, ಹೊಸಪುರ, ಕಸ್ಕೇಬೈಲ್ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮೂರು ಗುಂಪುಗಳಲ್ಲಿ ಸುಮಾರು 40ಕ್ಕೂ ಅಧಿಕ ಕಾಡಾನೆಗಳು ದಾಳಿ ನಡೆಸಿದ್ದು ಭಯದ ವಾತಾವರಣ ಸೃಷ್ಟಿಯಾಗಿದೆ. ಒಂದು ತಿಂಗಳಿನಿಂದ...

Related Articles

ಫೋಟೋ-ವಿಡಿಯೋಗ್ರಫಿ ಕೆನಾನ್ ಕ್ಯಾಮಾರಗಳು ಶ್ರೇಷ್ಠ

ಚಿಕ್ಕಮಗಳೂರು:  ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ಕ್ಷೇತ್ರದಲ್ಲಿ ಹೊಸ ಆಯಾಮ ವನ್ನು ಸೃಷ್ಟಿಸುವ ಕೆನಾನ್ ಕ್ಯಾಮರಾಗಳು ಛಾಯಾಗ್ರಾಹಕರ...

ಕೊಳಮಗೆ ಬಳಿಯ ಭದ್ರಾ ನದಿಗೆ ಬಿದ್ದ ಪಿಕ್‌ಅಪ್: ಯುವಕ ಸಾವಿನ ಶಂಕೆ

ಕಳಸ: ಕಳಸ-ಕಳಕೋಡು ರಸ್ತೆಯ ಕೊಳಮಗೆ ಬಳಿ ಭದ್ರಾನದಿಗೆ ಗುರುವಾರ ಮಧ್ಯಾಹ್ನ ಪಿಕ್‌ಅಪ್ ವಾಹನ ಬಿದ್ದಿದ್ದು, ಯುವಕನೊಬ್ಬ...

ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ

ಕೊಪ್ಪ : ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಒಂದು ಚೀಲ ಗೊಬ್ಬರ ಬೇಕು...

ಅರಣ್ಯ ಸಚಿವರಿಗೆ ಮಲ್ನಾಡು ಹಾಗೂ ಬಯಲು ಸೀಮೆಗೂ ಇರೋ ವ್ಯತ್ಯಾಸ ಗೊತ್ತಿಲ್ಲ

ಚಿಕ್ಕಮಗಳೂರು: ಅರಣ್ಯ ಸಚಿವರಿಗೆ ಮಲ್ನಾಡು ಭಾಗಕ್ಕೂ ಹಾಗೂ ಬಯಲು ಸೀಮೆಗೂ ಇರೋ ವ್ಯತ್ಯಾಸ ಗೊತ್ತಿಲ್ಲ. ನಿರಂತರವಾಗಿ...