Home Political News ಶಾಸಕ ತಮ್ಮಯ್ಯ ಪದೇ ಪದೇ ಫಾರಿನ್ ಟೂರ್ : ಕಾರ್ಯಕರ್ತರಿಂದಲೇ ವಿರೋಧ
Political News

ಶಾಸಕ ತಮ್ಮಯ್ಯ ಪದೇ ಪದೇ ಫಾರಿನ್ ಟೂರ್ : ಕಾರ್ಯಕರ್ತರಿಂದಲೇ ವಿರೋಧ

Share
Share

ಚಿಕ್ಕಮಗಳೂರು : ಕ್ಷೇತ್ರದ ಶಾಸಕ ಎಚ್.ಡಿ.ತಮ್ಮಯ್ಯ ಫಾರಿನ್, ಫಾರಿನ್ ಫಾರಿನ್ ಎಂದು ಹೆಚ್ಚು ಪ್ರವಾಸ ಮಾಡುತ್ತಿರುವುದರ ಬಗ್ಗೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರುಗಳು ಬಹಿರಂಗವಾಗಿ ಟೀಕಿಸತೊಡಗಿದ್ದಾರೆ. ಶಾಸಕರಾದ ಮೇಲೆ ಕ್ಷೇತ್ರ ಮತ್ತು ಜನರ ಜೊತೆಗೆ ಹೆಚ್ಚಾಗಿ ಇರಬೇಕು ಆದರೆ ತಮ್ಮಯ್ಯಗೆ ಫಾರಿನ್ ಆಸೆ ಹುಟ್ಟಿಸಿದ್ದು ಯಾರು ಮತ್ತು ಏಕೆ ಎಂಬ ಪ್ರಶ್ನೆಗೆ ಕಾಂಗ್ರೆಸ್ ಮುಖಂಡರು ಜರಿಯುವುದು ನೋಡಿ ನಗು ಬರುತ್ತದೆ.

ತಮ್ಮಯ್ಯ ಒಂದು ಕಡೆ ಇರುವ ಅಭ್ಯಾಸ ಇಟ್ಟುಕೊಂಡಿಲ್ಲ ಅಂದರೆ ಜನತಾದಳ,ಕಾಂಗ್ರೆಸ್, ಬಿಜೆಪಿ ಮತ್ತೆ ಕಾಂಗ್ರೆಸ್ ಗೆ ಬಂದಿರುವ ತಮ್ಮಯ್ಯಗೆ ಜಂಪಿಂಗ್ ಅಭ್ಯಾಸ ಇದನ್ನು ಈಗಾ ಫಾರಿನ್ ತಿರುಗುವ ಕಡೆ ಬೆಳೆಸಿಕೊಂಡಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳಲ್ಲಿ ಹೆಚ್ಚು ವಿದೇಶಿ ಟೂರು ಮಾಡಿದ ದಾಖಲೆ ತಮ್ಮಯ್ಯರವರಿಗೆ ಸಲ್ಲುತ್ತದೆ. ಈ ಹಿಂದೆ ಸ್ನೇಹಿತರು ಮತ್ತು ಶಾಸಕರ ಜೊತೆಗೆ ಹೋಗುತ್ತಿದ್ದವರು ಈಗ ಸ್ವ ಕುಟುಂಬ ಸಮೇತರಾಗಿ ಹೋಗಿದ್ದಾರೆ. ಅದು ಜರ್ಮನ್ ದೇಶದಲ್ಲಿ ಹದಿನೈದುದಿನಗಳ ಕಾಲ ಪ್ರವಾಸ ಭಾಗ್ಯ ಸಿದ್ದರಾಮಯ್ಯನವರ ಭಾಗ್ಯದ ಜೊತೆಗೆ ಸೇರಿಸಲು ಎಂ.ಎಲ್.ಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಕಾಂಗ್ರೆಸ್ ನವರು ಹಾದಿ,ಬೀದಿಯಲ್ಲಿ ಹೇಳುತ್ತಿರುವುದು ಮಾತ್ರ ಸತ್ಯ. ಗೆದ್ದು ಎರಡು ವರ್ಷ ತುಂಬಿಲ್ಲ ತಮ್ಮಯ್ಯ ಮಾತ್ರ ನಾಲ್ಕು ಐದು ಸಾರಿ ಫಾರಿನ್ ಟ್ರಿಪ್ ಹೊಡೆಯುವ ಮೂಲಕ ದಾಖಲೆ ಬರೆದಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ಸಿ.ಟಿ.ರವಿ ಸೋಲಿನ ಹತಾಶೆಯಿಂದ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ

ಚಿಕ್ಕಮಗಳೂರು: ಸಿ.ಟಿ.ರವಿ ಅವರು ಸೋಲಿನ ಹತಾಶೆಯಿಂದ ಎಚ್.ಡಿ.ತಮ್ಮಯ್ಯ ವಿರುದ್ಧ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಕಾಂಗ್ರೆಸ್‌...

20 ವರ್ಷ ಹೊರಗಿನವರೆ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿದ್ದಾರೆ

ಮೂಡಿಗೆರೆ:‘ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿರೋಧ ಪಕ್ಷಗಳು ಹತಾಶೆಯಿಂದ ಬಾಯಿ ಚಪಲಕ್ಕಾಗಿ ಮಾತನಾಡುತ್ತಿವೆ’ ಎಂದು...

ರಾಜ್ಯದಲ್ಲಿ ನವೆಂಬರ್ ಕ್ರಾಂತಿಯೋ ! ಭ್ರಾಂತಿಯೋ ?

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿ ಎರಡೂವರೆ ವರ್ಷ ಪೂರೈಸುತ್ತಿದೆ.ಸರ್ಕಾರ ರಚನೆಯಾದಾಗಿನಿಂದ ಇಲ್ಲಿಯವರೆಗೆ “ಮುಖ್ಯಮಂತ್ರಿ” ಬದಲಾಗುತ್ತಾರೆ...

ಶೃಂಗೇರಿ ಲಡಾಯಿ: ಶಾಸಕ ಟಿ.ಡಿ.ರಾಜೇಗೌಡ V/S ಜೀವರಾಜ್

ಶೃಂಗೇರಿ: ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮತ್ತು ಬಿಜೆಪಿ ಮಾಜಿ ಸಚಿವ ಶಾಸಕ ಜೀವರಾಜ್...